23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ : ವಿಶ್ವ ಬಾಲಕಾರ್ಮಿಕರ ವಿರೋಧಿ ದಿನ ಕುರಿತು ಕಾನೂನು ಅರಿವು ಕಾರ್ಯಕ್ರಮ

ಬೆಳ್ತಂಗಡಿ: ತಾಲೂಕು ಕಾನೂನು ಸೇವೆಗಳ ಸಮಿತಿ ಬೆಳ್ತಂಗಡಿ, ವಕೀಲರ ಸಂಘ ಬೆಳ್ತಂಗಡಿ ಹಾಗೂ ಎಸ್ ಡಿಎಮ್ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಜೂ.30 ರಂದು ವಿಶ್ವ ಬಾಲಕಾರ್ಮಿಕರ ವಿರೋಧಿ ದಿನ ಕುರಿತು ಕಾನೂನು ಅರಿವು ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಧಾನ ಸಿವಿಲ್ ನ್ಯಾಯಾಧೀಶ ಸಂದೇಶ್ ಕೆ ನೆರವೇರಿಸಿ ಕಾನೂನಿನ ಬಗ್ಗೆ ತಿಳಿದುಕೊಂಡರೆ ನಮಗೆ ಸಿಗಬೇಕಾದ ಹಕ್ಕನ್ನು ನಾವು ಪಡೆದುಕೊಳ್ಳಲು ಸಾಧ್ಯ. ಕಾನೂನಿನ ಬಗ್ಗೆ ತಿಳಿದು ನಿಮ್ಮ ಹಿರಿಯರಿಗೆ ಕಿರಿಯರಿಗೆ ಹೇಳಿದರೆ ಈ ಕಾರ್ಯಕ್ರಮವು ಸಾರ್ಥಕತೆಯಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಜೀತಿನ್ ಜೆಜೋ ವಕೀಲರ ಬೆಳ್ತಂಗಡಿ ಇವರು ಬಾಲಕಾರ್ಮಿಕರೆಂದರೆ ಯಾರು? ಬಾಲ ಕಾರ್ಮಿಕರ ಹಕ್ಕುಗಳ ಬಗ್ಗೆ ಮತ್ತು ಮಕ್ಕಳು ಮತ್ತು ಹದಿ ಹರೆಯದವರ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಯ ಬಗ್ಗೆ ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ವಕೀಲರ ಸಂಘ ಅಧ್ಯಕ್ಷ ವಸಂತ ಮರಕಡ , ಬೆಳ್ತಂಗಡಿ ವಕೀಲರ ಸಂಘ ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ ಉಪಸ್ಥಿತರಿದ್ದರು. ಪ್ರಭಾರ ಮುಖ್ಯೋಪಾಧ್ಯಾಯನಿ ಜೆಸಿಂತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕ ಶಿಕ್ಷಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕಿಯಾದ ಶ್ರೀಮತಿ ಪ್ರವೀಣಾ ಕಾಮತ್ ಸ್ವಾಗತಿಸಿ, ಶಿಕ್ಷಕಿ ಅಮಿತಾ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಜೆಸಿಐ ಮಡಂತ್ಯಾರು ವಿಜಯ 2024 ರ ಶಾಶ್ವತ ಯೋಜನೆಗಳ ಆನಾವರಣ

Suddi Udaya

ಲಾಯಿಲ ಬಂಟರ ಗ್ರಾಮ ಸಮಿತಿ ವತಿಯಿಂದ ಆಟಿಡೊಂಜಿ ದಿನ

Suddi Udaya

ಗುಂಡು ಎಸೆತ ಸ್ಪರ್ಧೆ : ಲಾಯಿಲ ದೀಪಾಲ್ ಕೆ.ಆರ್., ಪ್ರಥಮ ಸ್ಥಾನ

Suddi Udaya

ಇಲಂತಿಲ ಗ್ರಾ. ಪಂ. ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ತಿಮ್ಮಪ್ಪ ಗೌಡ, ಉಪಾಧ್ಯಕ್ಷರಾಗಿ ಸವಿತಾ ಹೆಚ್ ಆಯ್ಕೆ

Suddi Udaya

ಚಾರ್ಮಾಡಿ ಬೂತ್ ಸಂಖ್ಯೆ 21ರಲ್ಲಿ ಕೈ ಕೊಟ್ಟ ಮತ ಯಂತ್ರ

Suddi Udaya

ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಕೊಯ್ಯೂರು ಮಲೆಬೆಟ್ಟು ನಿವಾಸಿ ಅಮೃತೇಶ್‌ ರಿಗೆ ರೂ.19.90 ಲಕ್ಷ ವಂಚನೆ

Suddi Udaya
error: Content is protected !!