32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೂಡುಕೋಡಿ ಉಂಬೆಟ್ಟು ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ, ಸಾಂತ್ವನ ನಿಧಿ, ಸನ್ಮಾನ ಕಾರ್ಯಕ್ರಮ

ವೇಣೂರು : ಯುವವಾಹಿನಿ ವೇಣೂರು ಘಟಕ, ಶ್ರೀ ಗು. ಸೇವಾ ಸಂಘ ಮೂಡುಕೋಡಿ, ಕಾಟಿ ಅಭಿಮಾನಿ ಬಳಗ ವೇಣೂರು ಮೂಡುಕೋಡಿ ಇದರ ವತಿಯಿಂದ ಉಚಿತ ಪುಸ್ತಕ ವಿತರಣೆ, ಸಾಂತ್ವನ ನಿಧಿ, ಸನ್ಮಾನ ಕಾರ್ಯಕ್ರಮವು ಜೂ. 28 ರಂದು ಮೂಡುಕೋಡಿ ಉಂಬೆಟ್ಟು ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷ ಲೋಕೇಶ್ ಕೋಟ್ಯಾನ್ ನೆರವೇರಿಸಿ ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೇಣೂರು ಘಟಕದ ಅಧ್ಯಕ್ಷ ಶುಭಕರ್ ಪೂಜಾರಿ ಸಾವ್ಯಾ ವಹಿಸಿದರು. ಕಾರ್ಯಕ್ರಮದಲ್ಲಿ ಸರಕಾರಿ ಪದವಿಪೂರ್ವ ಕಾಲೇಜು ಕೊಕ್ರಾಡಿ ಇಲ್ಲಿಯ ನಿವೃತ್ತ ಪ್ರಾಂಶುಪಾಲರು ಸಮಾಜ ಸೇವಕರು ನೋರ್ಬರ್ಟ್ ಮಾರ್ಟೀಸ್ ರವರನ್ನು ಸನ್ಮಾನಿಸಲಾಯಿತು.

ಘಟಕದ ಸೇವಾಯೋಜನೆಯನ್ನು ಅನಾರೋಗ್ಯದಿಂದ ಬಳಲುತ್ತಿರುವ ಮೂಡುಕೋಡಿ ನೆಲ್ಲಿಗುಡ್ಡೆ ಸುಂದರ ಪೂಜಾರಿ ದಂಪತಿಗಳಿಗೆ ನೀಡಲಾಯಿತು. ವೇದಿಕೆಯಲ್ಲಿ ಶ್ರೀ ಗು.ನಾ ಸ್ವಾ. ಸೇ ಸಂಘ ವೇಣೂರು ವಲಯದ ಅಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ, ಶಾಲಾ ಮುಖ್ಯಶಿಕ್ಷಕಿ ಶ್ರೀಮತಿ ವಿನೋಧ ಕುಮಾರಿ, ಖ್ಯಾತ ಜೋತಿಷ್ಯರಾದ ಗಣೇಶ್ ನಾರಾಯಣ ಪಂಡಿತ್, ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಧನಂಜಯ , ಮೂಡುಕೋಡಿ ಬಿಲ್ಲವ ಸಂಘದ ಅಧ್ಯಕ್ಷ ರವಿ ಪೂಜಾರಿ ಉಪಸ್ಥಿತರಿದ್ದರು. ಮಾಜಿ ಅಧ್ಯಕ್ಷ ಅರುಣ್ ಕೋಟ್ಯಾನ್ ನಿರೂಪಿಸಿ, ಸಲಹೆಗಾರರು ರಾಕೇಶ್ ಕುಮಾರ್ ಸ್ವಾಗತಿಸಿ, ಕಾರ್ಯದರ್ಶಿ ರಕ್ಷಿತ್ ಅಂಡಿಂಜೆ ವಂದಿಸಿದರು.

Related posts

ಎ.30: ಲಾಯಿಲ 48ನೇ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮಚ್ಚಿನ: ಆಕಸ್ಮಿಕವಾಗಿ ಮನೆಯ ಹಟ್ಟಿಗೆ ಬೆಂಕಿ : ಅಪಾರ ನಷ್ಟ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಡುಮದ್ದು ತಯಾರಿಕ ಘಟಕದಲ್ಲಿ ಮಹಾ ಸ್ಪೋಟ ದುರಂತದಲ್ಲಿ ಸಾವು ಹಾಗೂ ಹಲವರಿಗೆ ಗಂಭೀರ ಗಾಯ

Suddi Udaya

ಕೊಕ್ಕಡ ಶ್ರೀ ಕ್ಷೇತ್ರ ‌ಸೌತಡ್ಕ ಮಹಾಗಣಪತಿ ‌ದೇವಾಲಯದ‌ ಮುಂಭಾಗದಲ್ಲಿ ನೂತನ ಹರಕೆಯ ಘಂಟೆಯ ‌ಅಂಗಡಿ ಶುಭಾರಂಭ

Suddi Udaya

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸ್ಥಳೀಯ ಸಂಸ್ಥೆಯ ಜಿಲ್ಲಾ ಮಟ್ಟದ ತೃತೀಯ ಚರಣ ಕಬ್ ಮತ್ತು ಸುವರ್ಣ ಗರಿ ಬುಲ್ ಬುಲ್ ಪರೀಕ್ಷಾ ಶಿಬಿರ

Suddi Udaya

ಕಟ್ಟಡ ಕಾರ್ಮಿಕರ ವೈದ್ಯಕೀಯ ಸಹಾಯಧನ ಹಾಗೂ ಅಪಘಾತ ಚಿಕಿತ್ಸಾ ವೆಚ್ಚದ ಮರುಪಾವತಿಯಲ್ಲಿರುವ ಅವ್ಯವಸ್ಥೆಯ ಬಗ್ಗೆ ಮತ್ತು ಕಾರ್ಮಿಕರ ಹೆಲ್ತ್ ಚೆಕಪ್‌ನ ಯೋಜನೆಯಲ್ಲಿ ಮಂಡಳಿಯ ಹಣ ದುರುಪಯೋಗ: ಕೂಡಲೇ ಕ್ರಮ ವಹಿಸುವಂತೆ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್ ರಿಂದ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ರಿಗೆ ಮನವಿ

Suddi Udaya
error: Content is protected !!