25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೂಡುಕೋಡಿ ಉಂಬೆಟ್ಟು ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ, ಸಾಂತ್ವನ ನಿಧಿ, ಸನ್ಮಾನ ಕಾರ್ಯಕ್ರಮ

ವೇಣೂರು : ಯುವವಾಹಿನಿ ವೇಣೂರು ಘಟಕ, ಶ್ರೀ ಗು. ಸೇವಾ ಸಂಘ ಮೂಡುಕೋಡಿ, ಕಾಟಿ ಅಭಿಮಾನಿ ಬಳಗ ವೇಣೂರು ಮೂಡುಕೋಡಿ ಇದರ ವತಿಯಿಂದ ಉಚಿತ ಪುಸ್ತಕ ವಿತರಣೆ, ಸಾಂತ್ವನ ನಿಧಿ, ಸನ್ಮಾನ ಕಾರ್ಯಕ್ರಮವು ಜೂ. 28 ರಂದು ಮೂಡುಕೋಡಿ ಉಂಬೆಟ್ಟು ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷ ಲೋಕೇಶ್ ಕೋಟ್ಯಾನ್ ನೆರವೇರಿಸಿ ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೇಣೂರು ಘಟಕದ ಅಧ್ಯಕ್ಷ ಶುಭಕರ್ ಪೂಜಾರಿ ಸಾವ್ಯಾ ವಹಿಸಿದರು. ಕಾರ್ಯಕ್ರಮದಲ್ಲಿ ಸರಕಾರಿ ಪದವಿಪೂರ್ವ ಕಾಲೇಜು ಕೊಕ್ರಾಡಿ ಇಲ್ಲಿಯ ನಿವೃತ್ತ ಪ್ರಾಂಶುಪಾಲರು ಸಮಾಜ ಸೇವಕರು ನೋರ್ಬರ್ಟ್ ಮಾರ್ಟೀಸ್ ರವರನ್ನು ಸನ್ಮಾನಿಸಲಾಯಿತು.

ಘಟಕದ ಸೇವಾಯೋಜನೆಯನ್ನು ಅನಾರೋಗ್ಯದಿಂದ ಬಳಲುತ್ತಿರುವ ಮೂಡುಕೋಡಿ ನೆಲ್ಲಿಗುಡ್ಡೆ ಸುಂದರ ಪೂಜಾರಿ ದಂಪತಿಗಳಿಗೆ ನೀಡಲಾಯಿತು. ವೇದಿಕೆಯಲ್ಲಿ ಶ್ರೀ ಗು.ನಾ ಸ್ವಾ. ಸೇ ಸಂಘ ವೇಣೂರು ವಲಯದ ಅಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ, ಶಾಲಾ ಮುಖ್ಯಶಿಕ್ಷಕಿ ಶ್ರೀಮತಿ ವಿನೋಧ ಕುಮಾರಿ, ಖ್ಯಾತ ಜೋತಿಷ್ಯರಾದ ಗಣೇಶ್ ನಾರಾಯಣ ಪಂಡಿತ್, ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಧನಂಜಯ , ಮೂಡುಕೋಡಿ ಬಿಲ್ಲವ ಸಂಘದ ಅಧ್ಯಕ್ಷ ರವಿ ಪೂಜಾರಿ ಉಪಸ್ಥಿತರಿದ್ದರು. ಮಾಜಿ ಅಧ್ಯಕ್ಷ ಅರುಣ್ ಕೋಟ್ಯಾನ್ ನಿರೂಪಿಸಿ, ಸಲಹೆಗಾರರು ರಾಕೇಶ್ ಕುಮಾರ್ ಸ್ವಾಗತಿಸಿ, ಕಾರ್ಯದರ್ಶಿ ರಕ್ಷಿತ್ ಅಂಡಿಂಜೆ ವಂದಿಸಿದರು.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಜಾತ್ರೋತ್ಸವದ ಕಾರ್ಯಾಧ್ಯಕ್ಷರಾಗಿ ಶೈಲೇಂದ್ರ ಸುವರ್ಣ

Suddi Udaya

ಸಾಹಿತ್ಯ ಸಮ್ಮೇಳನದ ಸಂಯೋಜನಾ ಸಮಿತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ: ಕನ್ನಡ ಸಾಹಿತ್ಯ ಸಮ್ಮೇಳನವು ಸುವರ್ಣ ಕರ್ನಾಟಕದ ಆಶಯವನ್ನು ಬಿಂಬಿಸುವಂತಿರಲಿ: ಶಾಸಕ ಹರೀಶ್ ಪೂಂಜ

Suddi Udaya

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಚಂದ್ರಶೇಖರ ಎಲ್. ಮತ್ತು ಮನೆಯವರಿಂದ ಸ್ಟೀಲ್ ತಟ್ಟೆ ಕೊಡುಗೆ

Suddi Udaya

ಬೆಳ್ತಂಗಡಿ ನಿವಾಸಿ ಪದ್ಮಲತಾ ನಿಧನ

Suddi Udaya

ಎ.10-17,ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ 64ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹ ಹಾಗೂ‌ ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮರಥೋತ್ಸವ

Suddi Udaya

ಅಳದಂಗಡಿ: ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ ಕ್ಲಬ್ ನಿಂದ ಅರ್ಹರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

Suddi Udaya
error: Content is protected !!