22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೂಡುಕೋಡಿ ಉಂಬೆಟ್ಟು ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ, ಸಾಂತ್ವನ ನಿಧಿ, ಸನ್ಮಾನ ಕಾರ್ಯಕ್ರಮ

ವೇಣೂರು : ಯುವವಾಹಿನಿ ವೇಣೂರು ಘಟಕ, ಶ್ರೀ ಗು. ಸೇವಾ ಸಂಘ ಮೂಡುಕೋಡಿ, ಕಾಟಿ ಅಭಿಮಾನಿ ಬಳಗ ವೇಣೂರು ಮೂಡುಕೋಡಿ ಇದರ ವತಿಯಿಂದ ಉಚಿತ ಪುಸ್ತಕ ವಿತರಣೆ, ಸಾಂತ್ವನ ನಿಧಿ, ಸನ್ಮಾನ ಕಾರ್ಯಕ್ರಮವು ಜೂ. 28 ರಂದು ಮೂಡುಕೋಡಿ ಉಂಬೆಟ್ಟು ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷ ಲೋಕೇಶ್ ಕೋಟ್ಯಾನ್ ನೆರವೇರಿಸಿ ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೇಣೂರು ಘಟಕದ ಅಧ್ಯಕ್ಷ ಶುಭಕರ್ ಪೂಜಾರಿ ಸಾವ್ಯಾ ವಹಿಸಿದರು. ಕಾರ್ಯಕ್ರಮದಲ್ಲಿ ಸರಕಾರಿ ಪದವಿಪೂರ್ವ ಕಾಲೇಜು ಕೊಕ್ರಾಡಿ ಇಲ್ಲಿಯ ನಿವೃತ್ತ ಪ್ರಾಂಶುಪಾಲರು ಸಮಾಜ ಸೇವಕರು ನೋರ್ಬರ್ಟ್ ಮಾರ್ಟೀಸ್ ರವರನ್ನು ಸನ್ಮಾನಿಸಲಾಯಿತು.

ಘಟಕದ ಸೇವಾಯೋಜನೆಯನ್ನು ಅನಾರೋಗ್ಯದಿಂದ ಬಳಲುತ್ತಿರುವ ಮೂಡುಕೋಡಿ ನೆಲ್ಲಿಗುಡ್ಡೆ ಸುಂದರ ಪೂಜಾರಿ ದಂಪತಿಗಳಿಗೆ ನೀಡಲಾಯಿತು. ವೇದಿಕೆಯಲ್ಲಿ ಶ್ರೀ ಗು.ನಾ ಸ್ವಾ. ಸೇ ಸಂಘ ವೇಣೂರು ವಲಯದ ಅಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ, ಶಾಲಾ ಮುಖ್ಯಶಿಕ್ಷಕಿ ಶ್ರೀಮತಿ ವಿನೋಧ ಕುಮಾರಿ, ಖ್ಯಾತ ಜೋತಿಷ್ಯರಾದ ಗಣೇಶ್ ನಾರಾಯಣ ಪಂಡಿತ್, ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಧನಂಜಯ , ಮೂಡುಕೋಡಿ ಬಿಲ್ಲವ ಸಂಘದ ಅಧ್ಯಕ್ಷ ರವಿ ಪೂಜಾರಿ ಉಪಸ್ಥಿತರಿದ್ದರು. ಮಾಜಿ ಅಧ್ಯಕ್ಷ ಅರುಣ್ ಕೋಟ್ಯಾನ್ ನಿರೂಪಿಸಿ, ಸಲಹೆಗಾರರು ರಾಕೇಶ್ ಕುಮಾರ್ ಸ್ವಾಗತಿಸಿ, ಕಾರ್ಯದರ್ಶಿ ರಕ್ಷಿತ್ ಅಂಡಿಂಜೆ ವಂದಿಸಿದರು.

Related posts

ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ‌ ಸಂಘದಿಂದ ಜಾಗತಿಕ ಔಷಧ ತಜ್ಞರ ದಿನಾಚರಣೆ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ 10 ಪ್ಲಸ್ ವಿಶೇಷ ಕಾರ್ಯಾಗಾರ

Suddi Udaya

ಕಕ್ಕಿಂಜೆ : ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಮೈರೋಳ್ತಡ್ಕ ಸ. ಉ. ಹಿ.ಪ್ರಾ.ಶಾಲೆಯ ನೂತನ ಶಾಲಾಭಿವೃದ್ಧಿ ಸಮಿತಿ ರಚನೆ

Suddi Udaya

ರಾಜ್ಯ ಸರಕಾರಿ ನೌಕರರ ಸಂಘ ಬೆಳ್ತಂಗಡಿ ಶಾಖೆಯ ಅಧ್ಯಕ್ಷ ಚುನಾವಣೆಗೆ ವಿಘ್ನ : ಪೊಲೀಸ್ ಠಾಣೆಯ ಮೇಟ್ಟಿಲೇರಿದ ಮತದಾರರ ಪಟ್ಟಿಯ ವಿವಾದ

Suddi Udaya

ಬಳಂಜ: ಯುವ ಬಿಲ್ಲವ ವೇದಿಕೆಯಿಂದ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾವಳಿ,ಸನ್ಮಾನ

Suddi Udaya
error: Content is protected !!