25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರಿನ ಧೀಮಹಿಯಲ್ಲಿ ಭರತನಾಟ್ಯ ತರಗತಿಗಳ ಉದ್ಘಾಟನೆ

ವೇಣೂರು: ಧೀಮಹಿ ಸನಾತನ ಪ್ರತಿಷ್ಠಾನ ಮಹಾವೀರ ನಗರ ವೇಣೂರು ರಾಷ್ಟ್ರದೇವೋಭವ ಧೀಮಹಿ ನಾಟ್ಯ ವೃಂದ ವೇಣೂರು  ಭರತನಾಟ್ಯ ತರಗತಿಗಳ ಉದ್ಘಾಟನಾ ಸಮಾರಂಭವು ಶ್ರೀಮತಿ ಗೌರಮ್ಮ ನರಸಿಂಹ ಭಟ್,  ಉಪಸ್ಥಿತಿಯಲ್ಲಿ ಜೂ. 28ರಂದು  ನೆರವೇರಿತು.

ದೀಪ ಪ್ರಜ್ವಲನೆ ಮೂಲಕ ಉದ್ಘಾಟನೆಯನ್ನು ನೆರವೇರಿಸಿದ ಕರ್ನಾಟಕ ಕಲಾ ಶ್ರೀ ಪ್ರಶಸ್ತಿ ಪುರಸ್ಕೃತ ವಿದುಷಿ ಶ್ರೀಮತಿ ಶಾರದಾ ಮಣಿ ಶೇಖರ್ ಸನಾತನ ನಾಟ್ಯಲಯ ಮಂಗಳೂರು ಇವರು ಮಾತನಾಡುತ್ತ ಭಾರತೀಯ ನಾಟ್ಯ ಪರಂಪರೆಗಳಲ್ಲಿ ಭರತನಾಟ್ಯಕ್ಕೆ ಅಗ್ರಸ್ಥಾನ ಇದನ್ನು ಅಭ್ಯಾಸೀಸಬೇಕಾದರೆ ಅತಿಯಾದ ತಾಳ್ಮೆ ಸುದೀರ್ಘ ಅಭ್ಯಾಸ ಅತ್ಯಗತ್ಯ. ತನ್ನ ಗರಡಿಯಲ್ಲಿ ಪಳಗಿದ ಅನೇಕ ಭರತನಾಟ್ಯ ವಿದುಷಿಯರನ್ನು ಸ್ಮರಿಸುತ್ತಾ ಬಾಲ ಪ್ರತಿಭೆಗಳ ಉಜ್ವಲ ಭವಿಷ್ಯಕ್ಕೆ ಆಶೀರ್ವದಿಸಿದರು.  

ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ರಂಗಭೂಮಿ ಕಲಾವಿದರಾಗಿರುವ ನೇಮಯ್ಯ ಕುಲಾಲ್ ಮಾತನಾಡುತ್ತ ವೇಣೂರು ಪರಿಸರದ ಬಾಲ ಪ್ರತಿಭೆಗಳ ಅನಾವರಣದ ಮೂಲಕ  ಸನಾತನ ಧರ್ಮದ ಮೌಲ್ಯಗಳನ್ನು ಉಳಿಸಿ ಬೆಳೆಸುವಲ್ಲಿ ಧೀಮಹಿ ಪ್ರತಿಷ್ಠಾನ ಶ್ರಮಿಸುತ್ತಿದೆ ಎಂದರು.

ಭರತನಾಟ್ಯ ತರಗತಿಯನ್ನು ನಡೆಸಿಕೊಡುವ ನಾಟ್ಯ ಗುರು ವಿದುಷಿ ಶ್ರವಣಕುಮಾರಿ ಹಲ್ಲನ್ ದೋಣಿ ಇವರು ಮಾತನಾಡುತ್ತ ವಿದ್ಯಾರ್ಥಿಗಳು ಭರತನಾಟ್ಯ ಅಭ್ಯಾಸವನ್ನು ತುಂಬಾ ಶ್ರದ್ಧೆಯಿಂದ ತಾಳ್ಮೆಯಿಂದ ವಿಧೇಯತೆಯಿಂದ ಕಲಿತು ಕರಗತಗೊಳಿಸಬೇಕೆಂದು ನುಡಿದರು.


ಭರತನಾಟ್ಯ ಶಿಶಿಕ್ಷುಗಳು  ನಾಟ್ಯ ಗುರುಗಳಾದ ವಿದುಷಿ, ಶ್ರೀಮತಿ ಶಾರದಾ ಮಣಿ ಶೇಖರ್ ಹಾಗೂ ಶ್ರವಣಕುಮಾರಿ ಇವರಿಂದ ನಾಟ್ಯ ದೀಕ್ಷೆಯನ್ನು  ಪಡೆದರು. ಕುಮಾರ ಸಿದ್ಧಿವಿನಾಯಕ ಭಟ್ ರವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮವನ್ನು ಧೀಮಹಿ ಪ್ರತಿಷ್ಠಾನದ ಸಂಸ್ಥಾಪಕ ಯಜ್ಞನಾರಾಯಣ ಭಟ್ ಪ್ರಾಸ್ತಾವಿಕದೊಂದಿಗೆ   ಸ್ವಾಗತಿಸಿದರು. ಜಗನ್ನಾಥ್ ದೇವಾಡಿಗರು ನಿರೂಪಿಸಿದ ಕಾರ್ಯಕ್ರಮವನ್ನು ಶ್ರೀಮತಿ ಪ್ರಮೀಳಾ ದಿನೇಶ್ ಬೆಂಗಳೂರು ವಂದಿಸಿದರು.

Related posts

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಅನ್ವೇಷಣಾ ಸ್ಪರ್ಧೆ: ಎಸ್‌ಡಿಎಂ ಸಂಸ್ಥೆಯ ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದ ಪ್ರಶಸ್ತಿ

Suddi Udaya

ಕಣಿಯೂರು : ಓಮ್ಮಿ ಕಾರು ಹಾಗೂ ರಿಡ್ಜ್ ಕಾರು ಮುಖಾಮುಖಿ ಡಿಕ್ಕಿ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಸ್ಪರ್ಧಾತ್ಮಕ ಪರೀಕ್ಷಾ ಕಾರ್ಯಾಗಾರ”

Suddi Udaya

ಕೊಕ್ಕಡ: ಗುಂಪಕಲ್ಲು ತೆಂಕುಬೈಲು, ಕೆಂಗಡೇಲು, ಮುಂಡೂರುಪಳಿಕ್ಕೆ ಪ್ರದೇಶದಲ್ಲಿ ಒಂಟಿಸಲಗ ದಾಳಿ: ಅಪಾರ ಕೃಷಿಗೆ ಹಾನಿ

Suddi Udaya

ಬಳಂಜ: ಛದ್ಮವೇಷ ಸ್ಪರ್ಧೆಯಲ್ಲಿ ಸತತ ಪ್ರಶಸ್ತಿ ಪಡೆದ ಬಳಂಜ ಶಾಲಾ ವಿದ್ಯಾರ್ಥಿ ಸಮ್ಯಕ್ ಜೈನ್

Suddi Udaya
error: Content is protected !!