22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ


ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಧರ್ಮಸ್ಥಳದಲ್ಲಿ ಎಲ್ಲಾ ಸಂಘಗಳ ಉದ್ಘಾಟನಾ ಸಮಾರಂಭ ನೆರವೇರಿತು.

ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ ಇಲ್ಲಿನ- ಸಮಾಜ ಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರು – ⁠ಬಿ.ವೋಕ್ ಕಾರ್ಯಕ್ರಮಗಳ ಸಂಯೋಜಕರು – ⁠ತರಬೇತಿ ಮತ್ತು ಉದ್ಯೋಗ ಕೋಶದ ಸಂಯೋಜಕ ಡಾ. ಸುವೀರ್ ಜೈನ್ ಆಗಮಿಸಿದ್ದರು.

ಶಾಲಾ ಸಂಚಾಲಕರಾದ ಅಂತ ಪದ್ಮನಾಭ ಭಟ್ ಹಾಗೂ ಡಾ.ಸುವೀರ್ ಜೈನ್ ಅವರು ಜೊತೆಗೂಡಿ ದೀಪ ಪ್ರಜ್ವಲಿಸಿ ಸಂಘಗಳ ಉದ್ಘಾಟನೆಯನ್ನು ಮಾಡಿದರು. ಬಳಿಕ ಶಾಲೆಯ ವಿವಿಧ ಸಂಘಗಳು ತಮ್ಮ ವಾರ್ಷಿಕ ಯೋಜನೆಗಳನ್ನು ನಾಟಕ, ನೃತ್ಯ, ಕಥೆ, ಕವನ, ಹಾಡು ಇತ್ಯಾದಿ ವಿವಿಧ ಕಲಾಪ್ರಕಾರದ ರೂಪದಲ್ಲಿ ಪ್ರಸ್ತುತಪಡಿಸಿದರು.

ಅತಿಥಿಯಾಗಿ ಡಾ. ಸುವೀರ್ ಜೈನ್ ಅವರು ವಿವಿಧ ಸಂಘಗಳ ಯೋಜನೆಗಳನ್ನು ನೋಡಿ ಸಂತಸ ಪಟ್ಟರು.ವಿದ್ಯೆಯ ಮಹತ್ವ,ಇಂದಿನ ದಿನಗಳಲ್ಲಿ ಶಿಕ್ಷಣ ಅಂದರೆ ಏನು? ಸ್ಪರ್ಧಾ ಜಗತ್ತಿನಲ್ಲಿ ವಿದ್ಯಾರ್ಥಿಗಳ ಜೀವನದಲ್ಲಿ ಸಂಘಗಳ ಮಹತ್ವ,ಅದನ್ನು ಉಪಯೋಗಿಸಿ ಕೊಳ್ಳುವ ರೀತಿ ಇತ್ಯಾದಿಗಳನ್ನು ಕಥೆ ಕಗ್ಗಗಳ ಮೂಲಕ ಮಾರ್ಮಿಕವಾಗಿ ವಿವರಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕುಮಾರಿ ಕ್ಷಮಾ ನಿರ್ವಹಿಸಿ, ಧನ್ಯ ಶ್ರೀ ಸ್ವಾಗತಿಸಿ, ನಿವೇದ್ಯ ಧನ್ಯವಾದ ಇತ್ತರು. ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮಕ್ಕೆ ಸಾಕ್ಷಿಗಳಾದರು.

Related posts

ಮೇಲಂತಬೆಟ್ಟುವಿನ ಮನೆಯಂಗಳದಲ್ಲಿ ಭಾರಿಗಾತ್ರದ ಕಾಳಿಂಗ ಸರ್ಪ: ಕಾಳಿಂಗ ಸರ್ಪವನ್ನು ರಕ್ಷಿಸಿ ಸುರಕ್ಷಿತವಾಗಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya

ಕರ್ತವ್ಯದ ವೇಳೆ ಬೆಳ್ತಂಗಡಿ ತಹಶೀಲ್ದಾ‌ರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮಿತ್ತಬಾಗಿಲು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಯವರಿಗೆ ಲಯನ್ಸ್ ಕ್ಲಬ್ ನಿಂದ ಹುಟ್ಟುಹಬ್ಬದ ಶುಭಾಶಯ

Suddi Udaya

ತಣ್ಣೀರುಪಂತ ಗ್ರಾಮ ಪಂಚಾಯತ್ ನಲ್ಲಿ “ಬಾಲ ಕಾರ್ಮಿಕತೆ ಮುಕ್ತ ” ದಿನಾಚರಣೆ

Suddi Udaya

ಬೆಳ್ತಂಗಡಿಯಲ್ಲಿ ಯುವವಾಹಿನಿಯಿಂದ “ಡೆನ್ನಾನ ಡೆನ್ನನ” ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ

Suddi Udaya
error: Content is protected !!