23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ


ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಧರ್ಮಸ್ಥಳದಲ್ಲಿ ಎಲ್ಲಾ ಸಂಘಗಳ ಉದ್ಘಾಟನಾ ಸಮಾರಂಭ ನೆರವೇರಿತು.

ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ ಇಲ್ಲಿನ- ಸಮಾಜ ಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರು – ⁠ಬಿ.ವೋಕ್ ಕಾರ್ಯಕ್ರಮಗಳ ಸಂಯೋಜಕರು – ⁠ತರಬೇತಿ ಮತ್ತು ಉದ್ಯೋಗ ಕೋಶದ ಸಂಯೋಜಕ ಡಾ. ಸುವೀರ್ ಜೈನ್ ಆಗಮಿಸಿದ್ದರು.

ಶಾಲಾ ಸಂಚಾಲಕರಾದ ಅಂತ ಪದ್ಮನಾಭ ಭಟ್ ಹಾಗೂ ಡಾ.ಸುವೀರ್ ಜೈನ್ ಅವರು ಜೊತೆಗೂಡಿ ದೀಪ ಪ್ರಜ್ವಲಿಸಿ ಸಂಘಗಳ ಉದ್ಘಾಟನೆಯನ್ನು ಮಾಡಿದರು. ಬಳಿಕ ಶಾಲೆಯ ವಿವಿಧ ಸಂಘಗಳು ತಮ್ಮ ವಾರ್ಷಿಕ ಯೋಜನೆಗಳನ್ನು ನಾಟಕ, ನೃತ್ಯ, ಕಥೆ, ಕವನ, ಹಾಡು ಇತ್ಯಾದಿ ವಿವಿಧ ಕಲಾಪ್ರಕಾರದ ರೂಪದಲ್ಲಿ ಪ್ರಸ್ತುತಪಡಿಸಿದರು.

ಅತಿಥಿಯಾಗಿ ಡಾ. ಸುವೀರ್ ಜೈನ್ ಅವರು ವಿವಿಧ ಸಂಘಗಳ ಯೋಜನೆಗಳನ್ನು ನೋಡಿ ಸಂತಸ ಪಟ್ಟರು.ವಿದ್ಯೆಯ ಮಹತ್ವ,ಇಂದಿನ ದಿನಗಳಲ್ಲಿ ಶಿಕ್ಷಣ ಅಂದರೆ ಏನು? ಸ್ಪರ್ಧಾ ಜಗತ್ತಿನಲ್ಲಿ ವಿದ್ಯಾರ್ಥಿಗಳ ಜೀವನದಲ್ಲಿ ಸಂಘಗಳ ಮಹತ್ವ,ಅದನ್ನು ಉಪಯೋಗಿಸಿ ಕೊಳ್ಳುವ ರೀತಿ ಇತ್ಯಾದಿಗಳನ್ನು ಕಥೆ ಕಗ್ಗಗಳ ಮೂಲಕ ಮಾರ್ಮಿಕವಾಗಿ ವಿವರಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕುಮಾರಿ ಕ್ಷಮಾ ನಿರ್ವಹಿಸಿ, ಧನ್ಯ ಶ್ರೀ ಸ್ವಾಗತಿಸಿ, ನಿವೇದ್ಯ ಧನ್ಯವಾದ ಇತ್ತರು. ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮಕ್ಕೆ ಸಾಕ್ಷಿಗಳಾದರು.

Related posts

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಹಕಾರದೊಂದಿಗೆ ಮುಂಗಾರು ಮತ್ತು ಹಿಂಗಾರಿನಲ್ಲಿ ತಾಲೂಕಿನಲ್ಲಿ 500 ಎಕ್ರೆಯಲ್ಲಿ ಯಾಂತ್ರಿಕೃತ ಭತ್ತದ ನಾಟಿ

Suddi Udaya

ಅಳದಂಗಡಿ ಆಮಂತ್ರಣ ಸೇವಾ ಪ್ರತಿಷ್ಠಾನದ ನೂತನ ಕಚೇರಿ ಉದ್ಘಾಟನೆ : ಪತ್ರಕರ್ತರಿಗೆ, ನಿವೃತ್ತ ಆಶಾ ಕಾರ್ಯಕರ್ತೆಯರಿಗೆ ಹಾಗೂ ಸಾಧಕರಿಗೆ ಸನ್ಮಾನ – ಯಕ್ಷಗಾನ ಕಲಿಕಾ ತರಗತಿಗೆ ಚಾಲನೆ ಹಾಗೂ ಅಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ವತಿಯಿಂದ ‘ಕವಿಗೋಷ್ಠಿ

Suddi Udaya

ಕ್ಯಾಂಟಿನ್ ಒಳಗಡೆ ವೇಶ್ಯಾವಟಿಕೆ ದಂಧೆ ಬಯಲು ; ಬೆಳ್ತಂಗಡಿ ಪೊಲೀಸರಿಂದ ದಾಳಿ: ಪ್ರಕರಣ ದಾಖಲು

Suddi Udaya

ದಭೆ೯ತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನಕ್ಕೆ ಶ್ರೀ ಕಂಚಿ ಕಾಮಕೋಟಿ ಶ್ರೀಗಳು ಭೇಟಿ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನ ಸಮಾಜಕಾರ್ಯ ವಿಭಾಗ ಹಾಗೂ ಸ್ತ್ರೀ ಶಕ್ತಿ ಪಡಂಗಡಿ ಇದರ ಸಹಯೋಗದಿಂದ ಮುಟ್ಟಿನ ಕಪ್ ಬಳಕೆ ಮತ್ತು ಸುರಕ್ಷತೆಯ ಅರಿವು ಕಾರ್ಯಕ್ರಮ

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ಉಜಿರೆ ಸರ್ಕಲ್ ವತಿಯಿಂದ “ಸ್ವಾತಂತ್ರ್ಯ ಸಂಗಮ” ಕಾರ್ಯಕ್ರಮ

Suddi Udaya
error: Content is protected !!