24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೊಸಂಗಡಿ : ಪರಿಸರ ಮಾಹಿತಿ ಗಿಡ ನಾಟಿ ಕಾರ್ಯಕ್ರಮ

ಹೊಸಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್‌ ಗುರುವಾಯನಕೆರೆ ಹಾಗೂ ಸ.ಹಿ,ಪ್ರಾ ಶಾಲೆ ಕಾಶಿಪಟ್ಣ ಇವರ ಸಹಕಾರದೊಂದಿಗೆ ಪರಿಸರ ಮಾಹಿತಿ ಹಾಗೂ ಗಿಡ ನಾಟಿ ಕಾರ್ಯಕ್ರಮ ನಡೆಯಿತು.

ಜನಜಾಗೃತಿ ವೇದಿಕೆ ವಲಯಾಧ್ಯಕ್ಷ ಸುಬ್ಬಣ್ಣ ಪೂಜಾರಿ ಗಿಡ ನಾಟಿ ಮಾಡುವ ಮುಖಾಂತರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಯೋಜನೆ ವತಿಯಿಂದ ರಾಜ್ಯಾದ್ಯಂತ ಪರಿಸರ ಜಾಗೃತಿ ಹಾಗೂ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ಪ್ರಾಣಿ ಪಕ್ಷಿಗಳಿಗೆ ಎಲ್ಲಾ ಸಮಯದಲ್ಲಿ ಆಹಾರ ಸಿಗುವಂತೆ ಹೆಚ್ಚು ಹೆಚ್ಚು ಹಣ್ಣಿನ ಗಿಡವನ್ನ ನಾಟಿ ಮಾಡುತ್ತಿದ್ದು ಪ್ರಾಣಿ ಪಕ್ಷಿಗಳಿಗೆ ಅನುಕೂಲವಾಗುತ್ತದೆ ಅದನ್ನ ನಾವು ರಕ್ಷಿಸಿಕೊಳ್ಳಬೇಕು ಎಂದು ಮಾಹಿತಿ ನೀಡಿದರು.

ಗಿಡ ನಾಟಿ ಕಾರ್ಯಕ್ರಮವನ್ನು ಶಾಲೆ ಎಸ್.ಡಿ.ಎಮ್.ಸಿ ಅಧ್ಯಕ್ಷ ವಿದ್ಯಾನಂದ ಪೂಜಾರಿಯವರು ಹಣ್ಣಿನ ಗಿಡ ನಾಟಿ ಮಾಡುವ ಮುಖಾಂತರ ಚಾಲನೆ ನೀಡಿ ಪರಿಸರ ನಾಶದಿಂದ ಮನುಕುಲಕ್ಕೆ ಆಗುವ ತೊಂದರೆಯ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ವಲಯದ ಮೇಲ್ವಿಚಾರಕರು ಶ್ರೀಮತಿ ವೀಣಾ, ಒಕ್ಕೂಟ ಅಧ್ಯಕ್ಷ ಸಂಜೀವ, ಜಯಂತಿ, ಕಾಂತಪ್ಪ ಪೂಜಾರಿ,
ವಿಪತ್ತು ನಿರ್ವಹಣಾ ಘಟಕ ಸದಸ್ಯರು ಗಿಡ ನಾಟಿ ಮಾಡುವ ಮೂಲಕ ಶ್ರಮದಾನದಲ್ಲಿ ಭಾಗವಹಿಸಿದರು. ಒಕ್ಕೂಟದ ಉಪಾಧ್ಯಕ್ಷರು, ಮುಖ್ಯೋಪಾಧ್ಯಾಯರು ,ಶ್ರೀಮತಿ ವಸೂದ ಸೇವಾಪ್ರತಿನಿಧಿ ಶಶಿಕಲಾ ಹಾಗೂ ಮಮತಾ ಹಾಗೂ ಶಾಲಾ ಶಿಕ್ಷಕ ವೃಂದ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದರು.

Related posts

ವೇಣೂರು: ಖಾಸಗಿ ಬಸ್ ಹಾಗೂ ಜೀಪ್ ನಡುವೆ ಅಪಘಾತ : ಓವ೯ರಿಗೆ ಗಂಭೀರ ಗಾಯ

Suddi Udaya

ಕಾಪಿನಡ್ಕ: ಕೊಂಕಡ್ಡ ನಿವಾಸಿ ಸುರೇಶ್ ಪೂಜಾರಿ ನಿಧನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ ಅಧ್ಯಕ್ಷರಾಗಿ ಜೆಸಿ ಆಶಾಲತಾ ಪ್ರಶಾಂತ ಆಯ್ಕೆ

Suddi Udaya

ಕಳೆಂಜ ಅರಣ್ಯ ಇಲಾಖೆ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಮನೆ ನಿರ್ಮಾಣ: ಅಕ್ರಮ ಪ್ರವೇಶ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಕರ್ತವ್ಯಕ್ಕೆ ಅಡ್ಡಿ: 11 ಜನರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಶಿಶಿಲ: ಚಿಕನ್ ಸೆಂಟರ್ ಶುಭಾರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಾಳೆಕುದ್ರು ಮಠದ ಪೂಜ್ಯಶ್ರೀ ವಾಸುದೇವ ಸದಾಶಿವ ಆಶ್ರಮ ಮಹಾಸ್ವಾಮೀಜಿ ಭೇಟಿ

Suddi Udaya
error: Content is protected !!