25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೊಸಂಗಡಿ : ಪರಿಸರ ಮಾಹಿತಿ ಗಿಡ ನಾಟಿ ಕಾರ್ಯಕ್ರಮ

ಹೊಸಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್‌ ಗುರುವಾಯನಕೆರೆ ಹಾಗೂ ಸ.ಹಿ,ಪ್ರಾ ಶಾಲೆ ಕಾಶಿಪಟ್ಣ ಇವರ ಸಹಕಾರದೊಂದಿಗೆ ಪರಿಸರ ಮಾಹಿತಿ ಹಾಗೂ ಗಿಡ ನಾಟಿ ಕಾರ್ಯಕ್ರಮ ನಡೆಯಿತು.

ಜನಜಾಗೃತಿ ವೇದಿಕೆ ವಲಯಾಧ್ಯಕ್ಷ ಸುಬ್ಬಣ್ಣ ಪೂಜಾರಿ ಗಿಡ ನಾಟಿ ಮಾಡುವ ಮುಖಾಂತರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಯೋಜನೆ ವತಿಯಿಂದ ರಾಜ್ಯಾದ್ಯಂತ ಪರಿಸರ ಜಾಗೃತಿ ಹಾಗೂ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ಪ್ರಾಣಿ ಪಕ್ಷಿಗಳಿಗೆ ಎಲ್ಲಾ ಸಮಯದಲ್ಲಿ ಆಹಾರ ಸಿಗುವಂತೆ ಹೆಚ್ಚು ಹೆಚ್ಚು ಹಣ್ಣಿನ ಗಿಡವನ್ನ ನಾಟಿ ಮಾಡುತ್ತಿದ್ದು ಪ್ರಾಣಿ ಪಕ್ಷಿಗಳಿಗೆ ಅನುಕೂಲವಾಗುತ್ತದೆ ಅದನ್ನ ನಾವು ರಕ್ಷಿಸಿಕೊಳ್ಳಬೇಕು ಎಂದು ಮಾಹಿತಿ ನೀಡಿದರು.

ಗಿಡ ನಾಟಿ ಕಾರ್ಯಕ್ರಮವನ್ನು ಶಾಲೆ ಎಸ್.ಡಿ.ಎಮ್.ಸಿ ಅಧ್ಯಕ್ಷ ವಿದ್ಯಾನಂದ ಪೂಜಾರಿಯವರು ಹಣ್ಣಿನ ಗಿಡ ನಾಟಿ ಮಾಡುವ ಮುಖಾಂತರ ಚಾಲನೆ ನೀಡಿ ಪರಿಸರ ನಾಶದಿಂದ ಮನುಕುಲಕ್ಕೆ ಆಗುವ ತೊಂದರೆಯ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ವಲಯದ ಮೇಲ್ವಿಚಾರಕರು ಶ್ರೀಮತಿ ವೀಣಾ, ಒಕ್ಕೂಟ ಅಧ್ಯಕ್ಷ ಸಂಜೀವ, ಜಯಂತಿ, ಕಾಂತಪ್ಪ ಪೂಜಾರಿ,
ವಿಪತ್ತು ನಿರ್ವಹಣಾ ಘಟಕ ಸದಸ್ಯರು ಗಿಡ ನಾಟಿ ಮಾಡುವ ಮೂಲಕ ಶ್ರಮದಾನದಲ್ಲಿ ಭಾಗವಹಿಸಿದರು. ಒಕ್ಕೂಟದ ಉಪಾಧ್ಯಕ್ಷರು, ಮುಖ್ಯೋಪಾಧ್ಯಾಯರು ,ಶ್ರೀಮತಿ ವಸೂದ ಸೇವಾಪ್ರತಿನಿಧಿ ಶಶಿಕಲಾ ಹಾಗೂ ಮಮತಾ ಹಾಗೂ ಶಾಲಾ ಶಿಕ್ಷಕ ವೃಂದ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದರು.

Related posts

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಆಂ.ಮಾ. ಶಾಲೆಯಲ್ಲಿ ಡಾ ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಆಚರಣೆ

Suddi Udaya

ಬುರುಡೆ ಪ್ರಕರಣ ಆರೋಪಿ ಚಿನ್ನಯ್ಯ ಮತ್ತೆ ಎಸ್.ಐ.ಟಿ ಕಸ್ಟಡಿಗೆ

Suddi Udaya

ಬಿಎಂಎಸ್ ರಿಕ್ಷಾ ಚಾಲಕರ ಸಂಘ ಬೆಳ್ತಂಗಡಿ ತಾಲೂಕು ಇದರ ವಾರ್ಷಿಕ ಸಭೆ ಹಾಗೂ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya

ನಾವೂರು ಸ. ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಜಾಗೃತಿ ಕಾರ್ಯಕ್ರಮ

Suddi Udaya

ಪಟ್ರಮೆ: ಅನಾರು ನಿವಾಸಿ ಭಾಸ್ಕರ ರಾವ್ ನಿಧನ

Suddi Udaya

ನಿಟ್ಟಡೆ ಕುಂಭಶ್ರೀ ಪ.ಪೂ. ಕಾಲೇಜಿಗೆ ಶೇ.100 ಫಲಿತಾಂಶ

Suddi Udaya
error: Content is protected !!