22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೊಸಂಗಡಿ : ಪರಿಸರ ಮಾಹಿತಿ ಗಿಡ ನಾಟಿ ಕಾರ್ಯಕ್ರಮ

ಹೊಸಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್‌ ಗುರುವಾಯನಕೆರೆ ಹಾಗೂ ಸ.ಹಿ,ಪ್ರಾ ಶಾಲೆ ಕಾಶಿಪಟ್ಣ ಇವರ ಸಹಕಾರದೊಂದಿಗೆ ಪರಿಸರ ಮಾಹಿತಿ ಹಾಗೂ ಗಿಡ ನಾಟಿ ಕಾರ್ಯಕ್ರಮ ನಡೆಯಿತು.

ಜನಜಾಗೃತಿ ವೇದಿಕೆ ವಲಯಾಧ್ಯಕ್ಷ ಸುಬ್ಬಣ್ಣ ಪೂಜಾರಿ ಗಿಡ ನಾಟಿ ಮಾಡುವ ಮುಖಾಂತರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಯೋಜನೆ ವತಿಯಿಂದ ರಾಜ್ಯಾದ್ಯಂತ ಪರಿಸರ ಜಾಗೃತಿ ಹಾಗೂ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ಪ್ರಾಣಿ ಪಕ್ಷಿಗಳಿಗೆ ಎಲ್ಲಾ ಸಮಯದಲ್ಲಿ ಆಹಾರ ಸಿಗುವಂತೆ ಹೆಚ್ಚು ಹೆಚ್ಚು ಹಣ್ಣಿನ ಗಿಡವನ್ನ ನಾಟಿ ಮಾಡುತ್ತಿದ್ದು ಪ್ರಾಣಿ ಪಕ್ಷಿಗಳಿಗೆ ಅನುಕೂಲವಾಗುತ್ತದೆ ಅದನ್ನ ನಾವು ರಕ್ಷಿಸಿಕೊಳ್ಳಬೇಕು ಎಂದು ಮಾಹಿತಿ ನೀಡಿದರು.

ಗಿಡ ನಾಟಿ ಕಾರ್ಯಕ್ರಮವನ್ನು ಶಾಲೆ ಎಸ್.ಡಿ.ಎಮ್.ಸಿ ಅಧ್ಯಕ್ಷ ವಿದ್ಯಾನಂದ ಪೂಜಾರಿಯವರು ಹಣ್ಣಿನ ಗಿಡ ನಾಟಿ ಮಾಡುವ ಮುಖಾಂತರ ಚಾಲನೆ ನೀಡಿ ಪರಿಸರ ನಾಶದಿಂದ ಮನುಕುಲಕ್ಕೆ ಆಗುವ ತೊಂದರೆಯ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ವಲಯದ ಮೇಲ್ವಿಚಾರಕರು ಶ್ರೀಮತಿ ವೀಣಾ, ಒಕ್ಕೂಟ ಅಧ್ಯಕ್ಷ ಸಂಜೀವ, ಜಯಂತಿ, ಕಾಂತಪ್ಪ ಪೂಜಾರಿ,
ವಿಪತ್ತು ನಿರ್ವಹಣಾ ಘಟಕ ಸದಸ್ಯರು ಗಿಡ ನಾಟಿ ಮಾಡುವ ಮೂಲಕ ಶ್ರಮದಾನದಲ್ಲಿ ಭಾಗವಹಿಸಿದರು. ಒಕ್ಕೂಟದ ಉಪಾಧ್ಯಕ್ಷರು, ಮುಖ್ಯೋಪಾಧ್ಯಾಯರು ,ಶ್ರೀಮತಿ ವಸೂದ ಸೇವಾಪ್ರತಿನಿಧಿ ಶಶಿಕಲಾ ಹಾಗೂ ಮಮತಾ ಹಾಗೂ ಶಾಲಾ ಶಿಕ್ಷಕ ವೃಂದ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದರು.

Related posts

ಗುರುವಾಯನಕೆರೆ: ಸುಪ್ರಿಂ ಎಲೆಕ್ಟ್ರಾನಿಕ್ ನಲ್ಲಿ ದೀಪಾವಳಿ ಪ್ರಯುಕ್ತ ಭರ್ಜರಿ ಡಿಸ್ಕೌಂಟ್ ಸೇಲ್

Suddi Udaya

ಉಜಿರೆ ಭಜನಾ ಪರಿಷತ್ತಿನ ತಾಲೂಕು ಹಾಗೂ ವಲಯ ಪದಾಧಿಕಾರಿಗಳ ಸಭೆ

Suddi Udaya

ಭೂಸೇನೆಯಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿರುವ ಲಾಯಿಲ ನಿವಾಸಿ ಗಣೇಶ್ ಬಿ.ಎಲ್ ಮೇ.2 ರಂದು ಸೇವಾ ನಿವೃತ್ತಿ

Suddi Udaya

ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶು ಮಂದಿರದಲ್ಲಿ ಶಾರದಾ ಪೂಜೆ, ಅಕ್ಷರ ಅಭ್ಯಾಸ ಮತ್ತು ವಾಹನ ಪೂಜೆ

Suddi Udaya

ಜೆಸಿಐ ಮಡಂತ್ಯಾರು ವಿಜಯ 2024 ರ ಶಾಶ್ವತ ಯೋಜನೆಗಳ ಆನಾವರಣ

Suddi Udaya

ಎಸ್.ಡಿ.ಎಂ. ವಸತಿ ಪ.ಪೂ. ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥೆ ಕವಿತಾ ಉಮೇಶ್ ರವರಿಗೆ ‘ಕನ್ನಡ ಸ್ವಾಭಿಮಾನ ಸ್ಮರಣಿಕೆಯ ಗೌರವ ಪ್ರಶಸ್ತಿ’

Suddi Udaya
error: Content is protected !!