25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ ಶ್ರೀ ಸತ್ಯನಾರಾಯಣ ಯಕ್ಷಗಾನ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

ಕಲ್ಮಂಜ: ಇಲ್ಲಿಯ ಶ್ರೀ ಸತ್ಯನಾರಾಯಣ ಮಕ್ಕಳ ಯಕ್ಷಗಾನ ತರಬೇತಿ ಕೇಂದ್ರದ ಮೂವತ್ತು ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮವು ಜೂ.28ರಂದು ಕಲ್ಮಂಜ ಶ್ರೀ ಸತ್ಯನಾರಾಯಣ ಭಜನಾ ಮಂಡಳಿಯಲ್ಲಿ ಜರುಗಿತು.

ಯಕ್ಷಗಾನ ತರಬೇತಿ ಕೇಂದ್ರದ ಸಂಚಾಲಕ ಶೇಖರ್ ಟಿ. ಸಮವಸ್ತ್ರ ವಿತರಿಸಿ ಮಾತನಾಡಿ, ಬೆಳೆಯುವ ಸಿರಿ ಮೊಳಕೆಯಲ್ಲಿ’ ಎಂಬಂತೆ ಯಕ್ಷಗಾನ ಕಲಿಕೆಯು ವಿದ್ಯಾರ್ಥಿಗಳಲ್ಲಿ ಧಾರ್ಮಿಕ ಪ್ರಜ್ಞೆ ಪುರಾಣೇತಿಹಾಸದ ತಿಳುವಳಿಕೆ, ಕಲಾಸಕ್ತಿ, ನೃತ್ಯ-ನಟನಾ ಕೌಶಲ, ವಾಕ್ಚಾತುರ್ಯ, ರಂಗಾಭಿನಯ ಪಾಂಡಿತ್ಯ, ಸಂಸ್ಕೃತಿ-ಸಂಸ್ಕಾರದ ಅರಿವು, ಸ್ವಯಂಶಿಸ್ತು, ಮನೋಸ್ಥೆರ್ಯ, ಜೊತೆಗೆ ಮಕ್ಕಳ ಸರ್ವತೋಮುಖ ಅಭಿವೃದ್ಧಿ ಹಾಗೂ ಪರಿಪಕ್ವ ಬೆಳವಣಿಗೆಗೆ ಪೂರಕವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಯಕ್ಷಗಾನ ಗುರುಗಳಾದ ಅರುಣ್ ಕುಮಾರ್ ಧರ್ಮಸ್ಥಳ, ಕೆ. ನಾಗೇಶ್ ಆಚಾರ್ಯ, ಕೃಷ್ಣಪ್ಪ ಟೈಲರ್ ನಿಡಿಗಲ್ ಮಜಲ್, ಚಿದಾನಂದ ಅಕ್ಷಯ ನಗರ, ಮಣಿಲಾ ಮುಖೇಶ್, ವಸಂತ ಟೈಲರ್ ನಿಡಿಗಲ್ ಮಜಲ್ ಹಾಗೂ ಪೋಷಕರು ಉಪಸ್ಥಿತರಿದ್ದರು.

ಕಳೆದ ಮೂರು ವರ್ಷಗಳ ಹಿಂದೆ ಶೇಖರ್ ಟಿ. ರವರ ನೇತೃತ್ವದಲ್ಲಿ ಪ್ರಾರಂಭಗೊಂಡ ಯಕ್ಷಗಾನ ತರಬೇತಿಯು ಉಚಿತವಾಗಿದ್ದು ಪ್ರತೀ ಆದಿತ್ಯವಾರ ಬೆಳಿಗ್ಗೆ 8:30ರಿಂದ 10ರ ತನಕ ನಡೆಯುತ್ತದೆ.

Related posts

ಕೊಕ್ಕಡ : ಅಸೌಖ್ಯದಿಂದ ವಿದ್ಯಾರ್ಥಿನಿ ಸಾವು

Suddi Udaya

ತಣ್ಣೀರುಪಂಥ ವಲಯದ ಕರಾಯ ಕಲ್ಲೇರಿ, ಕುಪ್ಪೆಟ್ಟಿ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಜಯರಾಮ ಮಯ್ಯ ಅಧಿಕಾರ ಸ್ವೀಕಾರ

Suddi Udaya

ಸೌಜನ್ಯಳಿಗೆ ನ್ಯಾಯ ಸಿಗಲೆಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಹಾಗೂ ಶಾಸಕ ಹರೀಶ್ ಪೂಂಜರಿಂದ ಕುತ್ಯಾರು ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಬೆಳ್ತಂಗಡಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರಖಂಡ ಮತ್ತು ಘಟಕ ಸಮಿತಿಗಳ ಸಮಾಲೋಚನಾ ಬೈಠಕ್

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ.ವಿ ಭೇಟಿ

Suddi Udaya
error: Content is protected !!