September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ: ಬಂಟ್ವಾಳ ಧ.ಗ್ರಾ. ಯೋಜನೆಯ ಕೃಷಿ ಮೇಲ್ವಿಚಾರಕ ಸ್ಥಳದಲ್ಲೇ ಸಾವು

ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬಿ.ಸಿ. ರೋಡ್ ಸಮೀಪದ ಅಜ್ಜಿಬೆಟ್ಟು ಎಂಬಲ್ಲಿ ಜೂ.30 ರಂದು ನಡೆದಿದೆ.

ಮೃತ ವ್ಯಕ್ತಿಯನ್ನು ಶಂಭೂರು ಕೊಪ್ಪಳ ನಿವಾಸಿ ಚಿದಾನಂದ( 50) ಎಂದು ಗುರುತಿಸಲಾಗಿದೆ.

ದ್ವಿಚಕ್ರ ಸವಾರ ಚಿದಾನಂದ ಅವರು ಬಿಸಿರೋಡು ಪೇಟೆಯಿಂದ ಅಜ್ಜಿಬೆಟ್ಟು ಎಂಬಲ್ಲಿ ರಸ್ತೆ ಕ್ರಾಸ್ ಮಾಡುವ ವೇಳೆ. ಬಿಸಿರೋಡಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಲಾರಿ ಢಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಲಾರಿಯಡಿಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಚಿದಾನಂದ ಅವರು ಬಂಟ್ವಾಳದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ಮೇಲ್ವಿಚಾರಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ಹೋಗುತ್ತಿದ್ದ ಒಮ್ನಿ ಕಾರಿಗೆ ಲಾರಿ ಡಿಕ್ಕಿ : ಸ್ಥಳದಲ್ಲೇ ನಾಲ್ಕು ಮಂದಿ ಸಾವು

Suddi Udaya

ಪಿಲ್ಯ: ಧರೆಗುರುಳಿದ ಬೃಹತ್ ಗಾತ್ರದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ: ಸ್ಥಳೀಯ ಯುವಕರಿಂದ ತೆರವು ಕಾರ್ಯ, ಸಾರ್ವಜನಿಕರಿಂದ ಪ್ರಶಂಸೆ

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲ ಯುವಮೋರ್ಚಾ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ

Suddi Udaya

ಎಸ್ ಡಿ ಎಂ, ಆರ್ ಸಿ ಸಿ, ರೋಟೊ, ಲಾಯರ್ಸ್ ಇಂಟರ್ ನ್ಯಾಷನಲ್ ಚೆಸ್ ಕಪ್ ಉದ್ಘಾಟನಾ ಸಮಾರಂಭ

Suddi Udaya

ಅಳದಂಗಡಿ ಸರಸ್ವತಿ ಭಟ್ ಹೃದಯಾಘಾತದಿಂದ ನಿಧನ

Suddi Udaya

ಅಂತರ್ ಕಾಲೇಜು ಮೇಧಾನ್ವೇಷ 2023: ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!