
ಬಡಗಕಾರಂದೂರು: ಇಲ್ಲಿಯ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಎಸ್.ಡಿ. ಎಂ.ಸಿ, ಪೋಷಕರು, ಶ್ರೀ ಧ.ಗ್ರಾ ಯೋಜನೆ ಮತ್ತು ಶಿಕ್ಷಕರ ಸಹಕಾರದೊಂದಿಗೆ ಶಾಲಾ ಪೌಷ್ಠಿಕ ವನ ನಿರ್ಮಾಣ ಮತ್ತು ಸ್ವಚ್ಛತೆ ಕಾರ್ಯವು ಶ್ರಮದಾನದ ಮೂಲಕ ನಡೆಯಿತು.
ತರಕಾರಿ ಬೀಜ ಬಿತ್ತನೆ, ತರಕಾರಿ ಗಿಡ, ಹಣ್ಣಿನ ಗಿಡಗಳನ್ನು ನೆಡಲಾಯಿತು.

ಈ ಸಂದರ್ಭ ಶಾಲಾ ಎಸ್.ಡಿ.ಎಂ. ಸಿ ಅಧ್ಯಕ್ಷ ಶಶಿಕಾಂತ ನಾಯಕ್, ಉಪಾಧ್ಯಕ್ಷೆ ಶ್ರೀಮತಿ ರೂಪಾ, ಎಸ್.ಡಿ.ಎಂ.ಸಿ ಸದಸ್ಯರು, ಮುಖ್ಯ ಶಿಕ್ಷಕರಾದ ಸುರೇಶ್ ಎನ್, ಶ್ರೀ ಧ. ಗ್ರಾ. ಯೋಜನೆಯ ಜನಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷ ಯಶೋಧರ ಸುವರ್ಣ, ಶಾಲಾ ಪೋಷಕರು ಅಡುಗೆ ಸಿಬ್ಬಂದಿ ಗಳು, ಮತ್ತು ಶಿಕ್ಷಕರು ಉಪಸ್ಥಿತರಿದ್ದರು.











