September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೂಡುಕೋಡಿ ಉಂಬೆಟ್ಟು ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ, ಸಾಂತ್ವನ ನಿಧಿ, ಸನ್ಮಾನ ಕಾರ್ಯಕ್ರಮ

ವೇಣೂರು : ಯುವವಾಹಿನಿ ವೇಣೂರು ಘಟಕ, ಶ್ರೀ ಗು. ಸೇವಾ ಸಂಘ ಮೂಡುಕೋಡಿ, ಕಾಟಿ ಅಭಿಮಾನಿ ಬಳಗ ವೇಣೂರು ಮೂಡುಕೋಡಿ ಇದರ ವತಿಯಿಂದ ಉಚಿತ ಪುಸ್ತಕ ವಿತರಣೆ, ಸಾಂತ್ವನ ನಿಧಿ, ಸನ್ಮಾನ ಕಾರ್ಯಕ್ರಮವು ಜೂ. 28 ರಂದು ಮೂಡುಕೋಡಿ ಉಂಬೆಟ್ಟು ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷ ಲೋಕೇಶ್ ಕೋಟ್ಯಾನ್ ನೆರವೇರಿಸಿ ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೇಣೂರು ಘಟಕದ ಅಧ್ಯಕ್ಷ ಶುಭಕರ್ ಪೂಜಾರಿ ಸಾವ್ಯಾ ವಹಿಸಿದರು. ಕಾರ್ಯಕ್ರಮದಲ್ಲಿ ಸರಕಾರಿ ಪದವಿಪೂರ್ವ ಕಾಲೇಜು ಕೊಕ್ರಾಡಿ ಇಲ್ಲಿಯ ನಿವೃತ್ತ ಪ್ರಾಂಶುಪಾಲರು ಸಮಾಜ ಸೇವಕರು ನೋರ್ಬರ್ಟ್ ಮಾರ್ಟೀಸ್ ರವರನ್ನು ಸನ್ಮಾನಿಸಲಾಯಿತು.

ಘಟಕದ ಸೇವಾಯೋಜನೆಯನ್ನು ಅನಾರೋಗ್ಯದಿಂದ ಬಳಲುತ್ತಿರುವ ಮೂಡುಕೋಡಿ ನೆಲ್ಲಿಗುಡ್ಡೆ ಸುಂದರ ಪೂಜಾರಿ ದಂಪತಿಗಳಿಗೆ ನೀಡಲಾಯಿತು. ವೇದಿಕೆಯಲ್ಲಿ ಶ್ರೀ ಗು.ನಾ ಸ್ವಾ. ಸೇ ಸಂಘ ವೇಣೂರು ವಲಯದ ಅಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ, ಶಾಲಾ ಮುಖ್ಯಶಿಕ್ಷಕಿ ಶ್ರೀಮತಿ ವಿನೋಧ ಕುಮಾರಿ, ಖ್ಯಾತ ಜೋತಿಷ್ಯರಾದ ಗಣೇಶ್ ನಾರಾಯಣ ಪಂಡಿತ್, ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಧನಂಜಯ , ಮೂಡುಕೋಡಿ ಬಿಲ್ಲವ ಸಂಘದ ಅಧ್ಯಕ್ಷ ರವಿ ಪೂಜಾರಿ ಉಪಸ್ಥಿತರಿದ್ದರು. ಮಾಜಿ ಅಧ್ಯಕ್ಷ ಅರುಣ್ ಕೋಟ್ಯಾನ್ ನಿರೂಪಿಸಿ, ಸಲಹೆಗಾರರು ರಾಕೇಶ್ ಕುಮಾರ್ ಸ್ವಾಗತಿಸಿ, ಕಾರ್ಯದರ್ಶಿ ರಕ್ಷಿತ್ ಅಂಡಿಂಜೆ ವಂದಿಸಿದರು.

Related posts

ಮೇ 26: ಕಾಯರ್ತಡ್ಕ ನಂದಗೋಕುಲ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ, ಗೋನಂದಾರತಿ, ದೀಪೋತ್ಸವ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಚಿಂತನಾ ದಿನಾಚರಣೆ

Suddi Udaya

ಕಳಿಯ ಗ್ರಾ.ಪಂ.ನಲ್ಲಿ ಕಾವಲು ಸಮಿತಿ ಸಭೆ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢ ಶಾಲೆಗೆ ಶೇ. 86.84 ಫಲಿತಾಂಶ

Suddi Udaya

ಆ.22: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!