23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರಿನ ಧೀಮಹಿಯಲ್ಲಿ ಭರತನಾಟ್ಯ ತರಗತಿಗಳ ಉದ್ಘಾಟನೆ

ವೇಣೂರು: ಧೀಮಹಿ ಸನಾತನ ಪ್ರತಿಷ್ಠಾನ ಮಹಾವೀರ ನಗರ ವೇಣೂರು ರಾಷ್ಟ್ರದೇವೋಭವ ಧೀಮಹಿ ನಾಟ್ಯ ವೃಂದ ವೇಣೂರು  ಭರತನಾಟ್ಯ ತರಗತಿಗಳ ಉದ್ಘಾಟನಾ ಸಮಾರಂಭವು ಶ್ರೀಮತಿ ಗೌರಮ್ಮ ನರಸಿಂಹ ಭಟ್,  ಉಪಸ್ಥಿತಿಯಲ್ಲಿ ಜೂ. 28ರಂದು  ನೆರವೇರಿತು.

ದೀಪ ಪ್ರಜ್ವಲನೆ ಮೂಲಕ ಉದ್ಘಾಟನೆಯನ್ನು ನೆರವೇರಿಸಿದ ಕರ್ನಾಟಕ ಕಲಾ ಶ್ರೀ ಪ್ರಶಸ್ತಿ ಪುರಸ್ಕೃತ ವಿದುಷಿ ಶ್ರೀಮತಿ ಶಾರದಾ ಮಣಿ ಶೇಖರ್ ಸನಾತನ ನಾಟ್ಯಲಯ ಮಂಗಳೂರು ಇವರು ಮಾತನಾಡುತ್ತ ಭಾರತೀಯ ನಾಟ್ಯ ಪರಂಪರೆಗಳಲ್ಲಿ ಭರತನಾಟ್ಯಕ್ಕೆ ಅಗ್ರಸ್ಥಾನ ಇದನ್ನು ಅಭ್ಯಾಸೀಸಬೇಕಾದರೆ ಅತಿಯಾದ ತಾಳ್ಮೆ ಸುದೀರ್ಘ ಅಭ್ಯಾಸ ಅತ್ಯಗತ್ಯ. ತನ್ನ ಗರಡಿಯಲ್ಲಿ ಪಳಗಿದ ಅನೇಕ ಭರತನಾಟ್ಯ ವಿದುಷಿಯರನ್ನು ಸ್ಮರಿಸುತ್ತಾ ಬಾಲ ಪ್ರತಿಭೆಗಳ ಉಜ್ವಲ ಭವಿಷ್ಯಕ್ಕೆ ಆಶೀರ್ವದಿಸಿದರು.  

ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ರಂಗಭೂಮಿ ಕಲಾವಿದರಾಗಿರುವ ನೇಮಯ್ಯ ಕುಲಾಲ್ ಮಾತನಾಡುತ್ತ ವೇಣೂರು ಪರಿಸರದ ಬಾಲ ಪ್ರತಿಭೆಗಳ ಅನಾವರಣದ ಮೂಲಕ  ಸನಾತನ ಧರ್ಮದ ಮೌಲ್ಯಗಳನ್ನು ಉಳಿಸಿ ಬೆಳೆಸುವಲ್ಲಿ ಧೀಮಹಿ ಪ್ರತಿಷ್ಠಾನ ಶ್ರಮಿಸುತ್ತಿದೆ ಎಂದರು.

ಭರತನಾಟ್ಯ ತರಗತಿಯನ್ನು ನಡೆಸಿಕೊಡುವ ನಾಟ್ಯ ಗುರು ವಿದುಷಿ ಶ್ರವಣಕುಮಾರಿ ಹಲ್ಲನ್ ದೋಣಿ ಇವರು ಮಾತನಾಡುತ್ತ ವಿದ್ಯಾರ್ಥಿಗಳು ಭರತನಾಟ್ಯ ಅಭ್ಯಾಸವನ್ನು ತುಂಬಾ ಶ್ರದ್ಧೆಯಿಂದ ತಾಳ್ಮೆಯಿಂದ ವಿಧೇಯತೆಯಿಂದ ಕಲಿತು ಕರಗತಗೊಳಿಸಬೇಕೆಂದು ನುಡಿದರು.


ಭರತನಾಟ್ಯ ಶಿಶಿಕ್ಷುಗಳು  ನಾಟ್ಯ ಗುರುಗಳಾದ ವಿದುಷಿ, ಶ್ರೀಮತಿ ಶಾರದಾ ಮಣಿ ಶೇಖರ್ ಹಾಗೂ ಶ್ರವಣಕುಮಾರಿ ಇವರಿಂದ ನಾಟ್ಯ ದೀಕ್ಷೆಯನ್ನು  ಪಡೆದರು. ಕುಮಾರ ಸಿದ್ಧಿವಿನಾಯಕ ಭಟ್ ರವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮವನ್ನು ಧೀಮಹಿ ಪ್ರತಿಷ್ಠಾನದ ಸಂಸ್ಥಾಪಕ ಯಜ್ಞನಾರಾಯಣ ಭಟ್ ಪ್ರಾಸ್ತಾವಿಕದೊಂದಿಗೆ   ಸ್ವಾಗತಿಸಿದರು. ಜಗನ್ನಾಥ್ ದೇವಾಡಿಗರು ನಿರೂಪಿಸಿದ ಕಾರ್ಯಕ್ರಮವನ್ನು ಶ್ರೀಮತಿ ಪ್ರಮೀಳಾ ದಿನೇಶ್ ಬೆಂಗಳೂರು ವಂದಿಸಿದರು.

Related posts

ಶ್ರೀ ರಾಮ ಗೆಳೆಯರ ಬಳಗ ನೇರೋಳ್ ಪಲ್ಕೆ ಇದರ ವತಿಯಿಂದ ಶ್ರೀ ರಾಮೋತ್ಸವ

Suddi Udaya

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ‌, ಚಪ್ಪರ ಮುಹೂರ್ತ ಹಾಗೂ ಕೆರೆಯ ಜಾಗದ ಮುಹೂರ್ತ

Suddi Udaya

ಪವರ್ ಮ್ಯಾನ್ ದಿ| ಸುಧಾಕರರವರ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ, ಮನೆಯವರಿಗೆ ಸಾಂತ್ವನ

Suddi Udaya

ವಿಜಯ ಕ್ರೇಡಿಟ್ ಕೋ- ಆಪರೇಟಿವ್ ಸೊಸೈಟಿಗೆ ‘ದ.ಕ ಜಿಲ್ಲಾ ಉತ್ತಮ ಪತ್ತಿನ ಸಹಕಾರಿ ಸಂಘ’ ಪ್ರಶಸ್ತಿ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿಗೆ ಶೇ.98.17 ಫಲಿತಾಂಶ

Suddi Udaya

ಕಡಿರುದ್ಯಾವರ: ಅಕ್ರಮ ಮರಳುಗಾರಿಕೆ ವಿರುದ್ಧ ದೂರು ನೀಡಿದ ಪ್ರಕರಣ ಮನೆಗೆ ನುಗ್ಗಿ ಕೊಲೆ ಬೆದರಿಕೆ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!