25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ


ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಧರ್ಮಸ್ಥಳದಲ್ಲಿ ಎಲ್ಲಾ ಸಂಘಗಳ ಉದ್ಘಾಟನಾ ಸಮಾರಂಭ ನೆರವೇರಿತು.

ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ ಇಲ್ಲಿನ- ಸಮಾಜ ಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರು – ⁠ಬಿ.ವೋಕ್ ಕಾರ್ಯಕ್ರಮಗಳ ಸಂಯೋಜಕರು – ⁠ತರಬೇತಿ ಮತ್ತು ಉದ್ಯೋಗ ಕೋಶದ ಸಂಯೋಜಕ ಡಾ. ಸುವೀರ್ ಜೈನ್ ಆಗಮಿಸಿದ್ದರು.

ಶಾಲಾ ಸಂಚಾಲಕರಾದ ಅಂತ ಪದ್ಮನಾಭ ಭಟ್ ಹಾಗೂ ಡಾ.ಸುವೀರ್ ಜೈನ್ ಅವರು ಜೊತೆಗೂಡಿ ದೀಪ ಪ್ರಜ್ವಲಿಸಿ ಸಂಘಗಳ ಉದ್ಘಾಟನೆಯನ್ನು ಮಾಡಿದರು. ಬಳಿಕ ಶಾಲೆಯ ವಿವಿಧ ಸಂಘಗಳು ತಮ್ಮ ವಾರ್ಷಿಕ ಯೋಜನೆಗಳನ್ನು ನಾಟಕ, ನೃತ್ಯ, ಕಥೆ, ಕವನ, ಹಾಡು ಇತ್ಯಾದಿ ವಿವಿಧ ಕಲಾಪ್ರಕಾರದ ರೂಪದಲ್ಲಿ ಪ್ರಸ್ತುತಪಡಿಸಿದರು.

ಅತಿಥಿಯಾಗಿ ಡಾ. ಸುವೀರ್ ಜೈನ್ ಅವರು ವಿವಿಧ ಸಂಘಗಳ ಯೋಜನೆಗಳನ್ನು ನೋಡಿ ಸಂತಸ ಪಟ್ಟರು.ವಿದ್ಯೆಯ ಮಹತ್ವ,ಇಂದಿನ ದಿನಗಳಲ್ಲಿ ಶಿಕ್ಷಣ ಅಂದರೆ ಏನು? ಸ್ಪರ್ಧಾ ಜಗತ್ತಿನಲ್ಲಿ ವಿದ್ಯಾರ್ಥಿಗಳ ಜೀವನದಲ್ಲಿ ಸಂಘಗಳ ಮಹತ್ವ,ಅದನ್ನು ಉಪಯೋಗಿಸಿ ಕೊಳ್ಳುವ ರೀತಿ ಇತ್ಯಾದಿಗಳನ್ನು ಕಥೆ ಕಗ್ಗಗಳ ಮೂಲಕ ಮಾರ್ಮಿಕವಾಗಿ ವಿವರಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕುಮಾರಿ ಕ್ಷಮಾ ನಿರ್ವಹಿಸಿ, ಧನ್ಯ ಶ್ರೀ ಸ್ವಾಗತಿಸಿ, ನಿವೇದ್ಯ ಧನ್ಯವಾದ ಇತ್ತರು. ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮಕ್ಕೆ ಸಾಕ್ಷಿಗಳಾದರು.

Related posts

ಬೆಳ್ತಂಗಡಿ ಯುವವಾಹಿನಿ ಮಹಿಳಾ ಸಂಚಲನಾ ಸಮಿತಿಯಿಂದ “ಮನಸು “ಅಂತರಾಳದ ಅವಲೋಕನ

Suddi Udaya

ಮಲೆಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಯಾವುದೇ ಅವ್ಯವಹಾರಗಳು ನಡೆದಿಲ್ಲ: ನಿನ್ನೆ ನಡೆದ ಸಭೆಯಲ್ಲಿ ರಾಜೀನಾಮೆ ನೀಡಲು ನಿರ್ಣಯಿಸಲಾಗಿದೆಯೇ ಹೊರತು ನಾವು ರಾಜೀನಾಮೆ ನೀಡಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಪ್ರಮೋದ್ ಕುಮಾರ್ ಹೇಳಿಕೆ

Suddi Udaya

ಕೊಯ್ಯೂರು ಶಾಲೆಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಬಟ್ಟಲು ವಿತರಣೆ

Suddi Udaya

ವೇಣೂರು ಸ. ಪ.ಪೂ. ಕಾಲೇಜಿಗೆ ಹಳೆವಿದ್ಯಾರ್ಥಿಗಳಿಂದ ಹೊಸ ಪ್ರೊಜೆಕ್ಟರ್ ಕೊಡುಗೆ

Suddi Udaya

ಕಕ್ಕಿಂಜೆ: ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಷನ್ ವಲಯ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕಾಯರ್ತಡ್ಕ ಸ.ಹಿ.ಪ್ರಾ. ಶಾಲೆಯಲ್ಲಿ ನೂತನ ಎರಡು ತರಗತಿ ಕೊಠಡಿಗಳ ಶಿಲಾನ್ಯಾಸ ಹಾಗೂ ಸ್ಮಾರ್ಟ್ ಟಿವಿ ಉದ್ಘಾಟನೆ

Suddi Udaya
error: Content is protected !!