March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೊಸಂಗಡಿ : ಪರಿಸರ ಮಾಹಿತಿ ಗಿಡ ನಾಟಿ ಕಾರ್ಯಕ್ರಮ

ಹೊಸಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್‌ ಗುರುವಾಯನಕೆರೆ ಹಾಗೂ ಸ.ಹಿ,ಪ್ರಾ ಶಾಲೆ ಕಾಶಿಪಟ್ಣ ಇವರ ಸಹಕಾರದೊಂದಿಗೆ ಪರಿಸರ ಮಾಹಿತಿ ಹಾಗೂ ಗಿಡ ನಾಟಿ ಕಾರ್ಯಕ್ರಮ ನಡೆಯಿತು.

ಜನಜಾಗೃತಿ ವೇದಿಕೆ ವಲಯಾಧ್ಯಕ್ಷ ಸುಬ್ಬಣ್ಣ ಪೂಜಾರಿ ಗಿಡ ನಾಟಿ ಮಾಡುವ ಮುಖಾಂತರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಯೋಜನೆ ವತಿಯಿಂದ ರಾಜ್ಯಾದ್ಯಂತ ಪರಿಸರ ಜಾಗೃತಿ ಹಾಗೂ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ಪ್ರಾಣಿ ಪಕ್ಷಿಗಳಿಗೆ ಎಲ್ಲಾ ಸಮಯದಲ್ಲಿ ಆಹಾರ ಸಿಗುವಂತೆ ಹೆಚ್ಚು ಹೆಚ್ಚು ಹಣ್ಣಿನ ಗಿಡವನ್ನ ನಾಟಿ ಮಾಡುತ್ತಿದ್ದು ಪ್ರಾಣಿ ಪಕ್ಷಿಗಳಿಗೆ ಅನುಕೂಲವಾಗುತ್ತದೆ ಅದನ್ನ ನಾವು ರಕ್ಷಿಸಿಕೊಳ್ಳಬೇಕು ಎಂದು ಮಾಹಿತಿ ನೀಡಿದರು.

ಗಿಡ ನಾಟಿ ಕಾರ್ಯಕ್ರಮವನ್ನು ಶಾಲೆ ಎಸ್.ಡಿ.ಎಮ್.ಸಿ ಅಧ್ಯಕ್ಷ ವಿದ್ಯಾನಂದ ಪೂಜಾರಿಯವರು ಹಣ್ಣಿನ ಗಿಡ ನಾಟಿ ಮಾಡುವ ಮುಖಾಂತರ ಚಾಲನೆ ನೀಡಿ ಪರಿಸರ ನಾಶದಿಂದ ಮನುಕುಲಕ್ಕೆ ಆಗುವ ತೊಂದರೆಯ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ವಲಯದ ಮೇಲ್ವಿಚಾರಕರು ಶ್ರೀಮತಿ ವೀಣಾ, ಒಕ್ಕೂಟ ಅಧ್ಯಕ್ಷ ಸಂಜೀವ, ಜಯಂತಿ, ಕಾಂತಪ್ಪ ಪೂಜಾರಿ,
ವಿಪತ್ತು ನಿರ್ವಹಣಾ ಘಟಕ ಸದಸ್ಯರು ಗಿಡ ನಾಟಿ ಮಾಡುವ ಮೂಲಕ ಶ್ರಮದಾನದಲ್ಲಿ ಭಾಗವಹಿಸಿದರು. ಒಕ್ಕೂಟದ ಉಪಾಧ್ಯಕ್ಷರು, ಮುಖ್ಯೋಪಾಧ್ಯಾಯರು ,ಶ್ರೀಮತಿ ವಸೂದ ಸೇವಾಪ್ರತಿನಿಧಿ ಶಶಿಕಲಾ ಹಾಗೂ ಮಮತಾ ಹಾಗೂ ಶಾಲಾ ಶಿಕ್ಷಕ ವೃಂದ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದರು.

Related posts

ಬಾರ್ಯ : ಪಿಲಿಗೂಡು ಬನ್ನೆಂಗಳ ಹಾಲು ಉತ್ಪಾದಕರ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಎರಡು ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಬಳಂಜ : ಬೋಂಟ್ರೊಟ್ಟುಗುತ್ತು ದೈವಸ್ಥಾನದಲ್ಲಿ ಮಹಾ ಚಂಡಿಕಾಯಾಗ: ವಿಧಾನಪರಿಷತ್ ಶಾಸಕ ಕೆ.ಹರೀಶ್ ಕುಮಾರ್ ಸಹಿತ ನೂರಾರು ಭಕ್ತರು ಭಾಗಿ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ, ಮನೋಜ್ ಕುಮಾರ್ ಗಡಿಪಾರು ಪ್ರಕ್ರಿಯೆ ವಿರೋಧಿಸಿ ಖಂಡನಾ ಸಭೆ-ಹೋರಾಟಕ್ಕೆ ನಿರ್ಧಾರ

Suddi Udaya

ತಾಲೂಕು ಮಟ್ಟದ ವಿಜ್ಞಾನ ಮೇಳ: ನಾವೂರು ಸ.ಹಿ.ಪ್ರಾ ಶಾಲಾ ಇಬ್ಬರು ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಉಜಿರೆಯಲ್ಲಿ ಖಾಸಗಿ ಸುದ್ದಿವಾಹಿನಿ ವರದಿಗಾರ ಮೇಲೆ ಹಲ್ಲೆ ಪ್ರಕರಣ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಸೇರಿ ಹಲವು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya
error: Content is protected !!