July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೊಸಂಗಡಿ : ಪರಿಸರ ಮಾಹಿತಿ ಗಿಡ ನಾಟಿ ಕಾರ್ಯಕ್ರಮ

ಹೊಸಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್‌ ಗುರುವಾಯನಕೆರೆ ಹಾಗೂ ಸ.ಹಿ,ಪ್ರಾ ಶಾಲೆ ಕಾಶಿಪಟ್ಣ ಇವರ ಸಹಕಾರದೊಂದಿಗೆ ಪರಿಸರ ಮಾಹಿತಿ ಹಾಗೂ ಗಿಡ ನಾಟಿ ಕಾರ್ಯಕ್ರಮ ನಡೆಯಿತು.

ಜನಜಾಗೃತಿ ವೇದಿಕೆ ವಲಯಾಧ್ಯಕ್ಷ ಸುಬ್ಬಣ್ಣ ಪೂಜಾರಿ ಗಿಡ ನಾಟಿ ಮಾಡುವ ಮುಖಾಂತರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಯೋಜನೆ ವತಿಯಿಂದ ರಾಜ್ಯಾದ್ಯಂತ ಪರಿಸರ ಜಾಗೃತಿ ಹಾಗೂ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ಪ್ರಾಣಿ ಪಕ್ಷಿಗಳಿಗೆ ಎಲ್ಲಾ ಸಮಯದಲ್ಲಿ ಆಹಾರ ಸಿಗುವಂತೆ ಹೆಚ್ಚು ಹೆಚ್ಚು ಹಣ್ಣಿನ ಗಿಡವನ್ನ ನಾಟಿ ಮಾಡುತ್ತಿದ್ದು ಪ್ರಾಣಿ ಪಕ್ಷಿಗಳಿಗೆ ಅನುಕೂಲವಾಗುತ್ತದೆ ಅದನ್ನ ನಾವು ರಕ್ಷಿಸಿಕೊಳ್ಳಬೇಕು ಎಂದು ಮಾಹಿತಿ ನೀಡಿದರು.

ಗಿಡ ನಾಟಿ ಕಾರ್ಯಕ್ರಮವನ್ನು ಶಾಲೆ ಎಸ್.ಡಿ.ಎಮ್.ಸಿ ಅಧ್ಯಕ್ಷ ವಿದ್ಯಾನಂದ ಪೂಜಾರಿಯವರು ಹಣ್ಣಿನ ಗಿಡ ನಾಟಿ ಮಾಡುವ ಮುಖಾಂತರ ಚಾಲನೆ ನೀಡಿ ಪರಿಸರ ನಾಶದಿಂದ ಮನುಕುಲಕ್ಕೆ ಆಗುವ ತೊಂದರೆಯ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ವಲಯದ ಮೇಲ್ವಿಚಾರಕರು ಶ್ರೀಮತಿ ವೀಣಾ, ಒಕ್ಕೂಟ ಅಧ್ಯಕ್ಷ ಸಂಜೀವ, ಜಯಂತಿ, ಕಾಂತಪ್ಪ ಪೂಜಾರಿ,
ವಿಪತ್ತು ನಿರ್ವಹಣಾ ಘಟಕ ಸದಸ್ಯರು ಗಿಡ ನಾಟಿ ಮಾಡುವ ಮೂಲಕ ಶ್ರಮದಾನದಲ್ಲಿ ಭಾಗವಹಿಸಿದರು. ಒಕ್ಕೂಟದ ಉಪಾಧ್ಯಕ್ಷರು, ಮುಖ್ಯೋಪಾಧ್ಯಾಯರು ,ಶ್ರೀಮತಿ ವಸೂದ ಸೇವಾಪ್ರತಿನಿಧಿ ಶಶಿಕಲಾ ಹಾಗೂ ಮಮತಾ ಹಾಗೂ ಶಾಲಾ ಶಿಕ್ಷಕ ವೃಂದ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದರು.

Related posts

ಪೆರಿಂಜೆ ಸ. ಹಿ. ಪ್ರಾ. ಶಾಲೆಯ ನಿವೃತ್ತ ಶಿಕ್ಷಕಿ ವಸಂತಿ ಕೆ. ರವರಿಗೆ ಬೀಳ್ಕೊಡುಗೆ

Suddi Udaya

ನಿಟ್ಟಡೆ: ಬೀಯದಡಿ ನಿವಾಸಿ ಜಾನಕಿ ನಿಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ರಕ್ತೇಶ್ವರಿ ಗುಡಿ, ಶ್ರೀ ನಾಗದೇವರ ಕಟ್ಟೆ, ಹಾಗೂ ಶ್ರೀ ಪಂಜುರ್ಲಿ ದೈವದ ಕಟ್ಟೆಗಳಿಗೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಶತಾಯುಷಿ ಚೆಲುವಮ್ಮ ಇರ್ತಿಲಾಲ್ ನಿಧನ

Suddi Udaya

ಫೆ.1-2: ಚಿಬಿದ್ರೆ ಪರನೀರು ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದಲ್ಲಿ ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದ ಪ್ರತಿಷ್ಠೆ ಹಾಗೂ ರಕೇಶ್ವರಿ ಪ್ರಾರ್ಥನೆ

Suddi Udaya

ಹಿಂದೂ ಕಮಿಟಿ ಹಾರ್ಝಿಲಿಯ ಇಸ್ರೇಲ್ ಸಂಘಟನೆಯಿಂದ ವೈದ್ಯಕೀಯ ನೆರವು ಹಸ್ತಾಂತರ-ಅಶಕ್ತ ಕುಟುಂಬಕ್ಕೆ ಆರ್ಥಿಕ ಸಹಕಾರ

Suddi Udaya
error: Content is protected !!