25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಬೆನಕ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

ಉಜಿರೆ: ನಮಗೆಲ್ಲ ತಿಳಿದಿರುವ ನಾಲ್ನುಡಿ ” ಆರೋಗ್ಯವೇ ಭಾಗ್ಯ ” ಆದರೆ ಅನಿರೀಕ್ಷಿತವಾಗಿ ನಮ್ಮ ಆರೋಗ್ಯದಲ್ಲಿ ಏರುಪೇರಾದಾಗ ನಾವು ಮೊದಲು ಸಂಪರ್ಕಿಸುವುದು ವೈದ್ಯರನ್ನು ಸದಾ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಎಲ್ಲ ವೈದ್ಯರನ್ನು ಸ್ಮರಿಸಿಕೊಳ್ಳಲು ಪ್ರತಿ ವರ್ಷ ಜು. 1 ನೇ ರಂದು ದೇಶ ಕಂಡ ಅಪ್ರತಿಮ ವೈದ್ಯ ಡಾ. ಬಿ ಸಿ ರಾಯ್ ರವರ ನೆನಪಿಗಾಗಿ ವೈದ್ಯರ ದಿನವನ್ನಾಗಿ ಆಚರಿಸಿ ಅವರಿಗೆ ನಮ್ಮ ಕೃತಜ್ಞತೆಗಳನ್ನು ಸಲ್ಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ.
ಆ ಕರ್ತವ್ಯವನ್ನು ಕಳೆದ ಹಲವಾರು ವರ್ಷಗಳಿಂದ ಉಜಿರೆಯ ಬೆನಕ ಹೆಲ್ತ್ ಸೆಂಟರ್ ಆಚರಿಸುತ್ತ ಬಂದಿದ್ದು, ಪ್ರತಿ ವರ್ಷ ತಾಲೂಕಿನ ವೈದ್ಯರುಗಳನ್ನು ಬರಮಾಡಿಕೊಂಡು ಅವರನ್ನು ಗೌರವಿಸುವ ಸಂಪ್ರದಾಯದಂತೆ ಈ ವರ್ಷವೂ ಕೂಡ ಮುಂದುವರಿಸಲಾಯಿತು.

ಈ ವರ್ಷ ವಿಶೇಷವಾಗಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರತ 4 ವೈದ್ಯರನ್ನು ಹೂ ಮತ್ತು ನೆನಪಿನ ಕಾಣಿಕೆ ನೀಡಿ ಸನ್ಮಾನಿಸಲಾಯಿತು. ಅದೇ ರೀತಿ ನಮ್ಮ ಆಮಂತ್ರಣ ಮನ್ನಿಸಿ ಆಗಮಿಸಿದ ಎಲ್ಲ ವೈದ್ಯರುಗಳಿಗೆ ಆಸ್ಪತ್ರೆಯ ವಿವಿಧ ವಿಭಾಗದ ಸಿಬ್ಬಂದಿಗಳು ಗುಲಾಬಿ ಹೂ ನೀಡಿ ಗೌರವಿಸಿದರು. ಡಾ.ಗೋಪಾಲಕೃಷ್ಣ ದಂಪತಿಗಳ ಸಂಕಲ್ಪದಂತೆ ಪ್ರತಿ ವರ್ಷ ಓರ್ವ ಬಡ ರೋಗಿಗೆ ನೀಡಲಾಗುವ ಉಚಿತ ಚಿಕಿತ್ಸೆ ಯೋಜನೆಯಂತೆ ಈ ವರ್ಷ ಹೃದಯ ಮತ್ತು ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಶ್ರೀಮತಿ ರಾಮಕ್ಕು ಅವರಿಗೆ ಸುಮಾರು ಅರವತ್ತು ಸಾವಿರ ವೆಚ್ಚವನ್ನು ಆಸ್ಪತ್ರೆ ವತಿಯಿಂದ ಭರಿಸಲಾಯಿತು .


ಅಧ್ಯಕ್ಷತೆ ವಹಿಸಿ ಮಾತನಾಡಿದ ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ.ಗೋಪಾಲಕೃಷ್ಣರವರು ವೈದ್ಯರು ಸಮಾಜದ ಹೃದಯವಿದ್ದಂತೆ ಎಂದು ನುಡಿಯುತ್ತ, ತಾಲೂಕಿನ ಹಿರಿಯ ವೈದ್ಯರನ್ನು ಆಮಂತ್ರಿಸಿ ನಮ್ಮ ಆಸ್ಪತ್ರೆಯ ವತಿಯಿಂದ ಗೌರವಿಸುವುದರಲ್ಲಿ ನಾವು ಸಾರ್ಥಕ್ಯವನ್ನು ಮೆರೆಯುತ್ತೇವೆ. ನಮ್ಮ ಕರೆಯನ್ನು ಮನ್ನಿಸಿ ಆಗಮಿಸಿದ ನನ್ನ ನೆಚ್ಚಿನ ಎಲ್ಲಾ ವೈದ್ಯ ಮಿತ್ರರಿಗೆ ವೈಯಕ್ತಿಕವಾಗಿ ಮತ್ತು ಆಸ್ಪತ್ರೆ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆಂದು ಹೇಳಿದರು. ಎಸ್.ಜಿ ಭಟ್ ಸ್ವಾಗತಿಸಿ, ಡಾ.ನವ್ಯ ಭಟ್ ರವರು ಧನ್ಯವಾದ ಸಮರ್ಪಿಸಿದರು.

Related posts

ಸೋಣಂದೂರು ಸ. ಹಿ. ಪ್ರಾ. ಶಾಲೆ ಹಾಗೂ ಹಳೇ ವಿದ್ಯಾರ್ಥಿ ಸಂಘದ ಸಹಭಾಗಿತ್ವದಲ್ಲಿ ಏಳನೆಯ ತರಗತಿಯ ವಿದ್ಯಾರ್ಥಿಗಳ ಬಿಳ್ಕೋಡುಗೆ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ನಲ್ಲಿ ಕ್ರೈಸ್ತ ಶಿಕ್ಷಣ ದಿನ

Suddi Udaya

ಕುವೆಟ್ಟು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಓಡಿಲ್ನಾಳ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya

ವಶಕ್ಕೆ ಪಡೆಯಲಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿ ಬಂಧನ

Suddi Udaya

ಕುದುರೆಮುಖ, ನೇತ್ರಾವತಿ ಪೀಕ್ ಚಾರಣಕ್ಕೆ ಆನ್‌ಲೈನ್ ಮೂಲಕ ಬುಕಿಂಗ್

Suddi Udaya

ಅಂಡಿಂಜೆ: ನೆಲ್ಲಿಂಗೇರಿ ನಿವಾಸಿ ವಿಶ್ವನಾಥ ಭಂಡಾರಿ ನಿಧನ

Suddi Udaya
error: Content is protected !!