23.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಎಕ್ಸೆಲ್ ನಲ್ಲಿ ಎನ್ ಡಿ ಎ ತರಗತಿಗಳ ಓರಿಯಂಟೇಶನ್

ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜು ಗುರುವಾಯನಕೆರೆ ಇಲ್ಲಿನ ಎನ್ ಡಿ ಎ ತರಗತಿಗಳ ಓರಿಯಂಟೇಶನ್ ವಿದ್ಯಾ ಸಾಗರ ಕ್ಯಾಂಪಸ್ ನಲ್ಲಿ ನಡೆಯಿತು.
ಭಾರತೀಯ ಸೇನೆಯ ವಿಶ್ರಾಂತ ಮೇಜರ್ ಜನರಲ್ ಎಂ.ವಿ ಭಟ್ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡರು.

ಯಾವುದೇ ಸಾಧನೆ ಮಾಡಲು ಏಕಾಗ್ರತೆ ಬೇಕು. ಏಕಾಗ್ರತೆ ಹಾಗೂ ಇಚ್ಛಾ ಶಕ್ತಿ ಸಾಧಕನಾಗಿರಬೇಕಾದ ಎರಡು ಪ್ರಮುಖ ಅರ್ಹತೆಗಳು ಎಂದು ಭಾರತೀಯ ಸೇನೆಯ ವಿಶ್ರಾಂತ ಜನರಲ್ ಮೇಜರ್ ಎಂ.ವಿ ಭಟ್ ಹೇಳಿದರು.


ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ಮಾತನಾಡಿ, ದೇಶ ಸೇವೆ ಮಾಡುವ ಉನ್ನತ ಮಟ್ಟದ ಅವಕಾಶ, ಎನ್ ಡಿ ಎ ಕ್ಲಿಯರ್ ಮಾಡಿದ ವಿದ್ಯಾರ್ಥಿಗಳಿಗೆ ಲಭಿಸುತ್ತದೆ. ಹೀಗಾಗಿ ಎನ್ ಡಿ ಎ ಪರೀಕ್ಷೆಗಳನ್ನು ಗಂಭೀರವಾಗಿ ಸ್ವೀಕರಿಸಿ ಎಂದರು.

ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ ಮಾತನಾಡಿ, ದೇಶ ಸೇವೆಯೇ ಈಶ ಸೇವೆ ಎಂದು ತಿಳಿದು, ಬದುಕಲು ಎನ್ ಡಿ ಎ ತರಬೇತಿ ಅವಕಾಶ ಮಾಡಿಕೊಡುತ್ತದೆ ಎಂದು ಹೇಳಿದರು. ಎನ್ ಡಿ ಎ ಸಂಯೋಜಕ ಜೋಸ್ಟಮ್ ಎ ಟಿ ,ಎನ್. ಡಿ. ಎ ತರಬೇತಿಯ ಬಗ್ಗೆ ವಿವರವಾಗಿ ತಿಳಿಸಿದರು.
ವಿದ್ಯಾರ್ಥಿಗಳಾದ ವರ್ಷಾ ಎನ್ ಸ್ವಾಗತಿಸಿದರು. ರಕ್ಷಾ ವೆಂಕಟ್ ಮತ್ತು ರೀತು ಕೆ ನಿರೂಪಿಸಿದರು. ಸುಧನ್ವ ವಂದಿಸಿದರು.

Related posts

ಕುಕ್ಕೇಡಿ: ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಪಿಯುಸಿ ಫಲಿತಾಂಶ; ನಯನಾಡು ಸುಶ್ಮಿತಾ ಆಶಾಲತಾ ರಾಜ್ಯಕ್ಕೆ ನಾಲ್ಕನೇ ರ‍್ಯಾಂಕ್

Suddi Udaya

ಎಸ್ ಡಿ ಎಮ್ ಕಾಲೇಜಿನಲ್ಲಿ ವಾಣಿಜ್ಯ “ವ್ಯವಹಾರ “ಹಬ್ಬ

Suddi Udaya

ಹತ್ಯಡ್ಕ ತುಂಬೆತ್ತಡ್ಕ ಕಾಳಬೈರವ ಸ್ವಾಮಿ ಶ್ರೀ ಮಾರಿ ಅಮ್ಮನ ಮಾರಿಗುಡಿಯಲ್ಲಿ ವಾರ್ಷಿಕ ಮಾರಿ ಪೂಜೆ ಉತ್ಸವ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹಕೂಟ

Suddi Udaya

ತೆಕ್ಕಾರು ಗ್ರಾ.ಪಂ. ಅಧ್ಯಕ್ಷರಾಗಿ ರಹಿಯಾನತ್, ಉಪಾಧ್ಯಕ್ಷರಾಗಿ ಪುಷ್ಪಾ ಆಯ್ಕೆ

Suddi Udaya
error: Content is protected !!