25.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಎಕ್ಸೆಲ್ ನಲ್ಲಿ ಎನ್ ಡಿ ಎ ತರಗತಿಗಳ ಓರಿಯಂಟೇಶನ್

ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜು ಗುರುವಾಯನಕೆರೆ ಇಲ್ಲಿನ ಎನ್ ಡಿ ಎ ತರಗತಿಗಳ ಓರಿಯಂಟೇಶನ್ ವಿದ್ಯಾ ಸಾಗರ ಕ್ಯಾಂಪಸ್ ನಲ್ಲಿ ನಡೆಯಿತು.
ಭಾರತೀಯ ಸೇನೆಯ ವಿಶ್ರಾಂತ ಮೇಜರ್ ಜನರಲ್ ಎಂ.ವಿ ಭಟ್ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡರು.

ಯಾವುದೇ ಸಾಧನೆ ಮಾಡಲು ಏಕಾಗ್ರತೆ ಬೇಕು. ಏಕಾಗ್ರತೆ ಹಾಗೂ ಇಚ್ಛಾ ಶಕ್ತಿ ಸಾಧಕನಾಗಿರಬೇಕಾದ ಎರಡು ಪ್ರಮುಖ ಅರ್ಹತೆಗಳು ಎಂದು ಭಾರತೀಯ ಸೇನೆಯ ವಿಶ್ರಾಂತ ಜನರಲ್ ಮೇಜರ್ ಎಂ.ವಿ ಭಟ್ ಹೇಳಿದರು.


ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ಮಾತನಾಡಿ, ದೇಶ ಸೇವೆ ಮಾಡುವ ಉನ್ನತ ಮಟ್ಟದ ಅವಕಾಶ, ಎನ್ ಡಿ ಎ ಕ್ಲಿಯರ್ ಮಾಡಿದ ವಿದ್ಯಾರ್ಥಿಗಳಿಗೆ ಲಭಿಸುತ್ತದೆ. ಹೀಗಾಗಿ ಎನ್ ಡಿ ಎ ಪರೀಕ್ಷೆಗಳನ್ನು ಗಂಭೀರವಾಗಿ ಸ್ವೀಕರಿಸಿ ಎಂದರು.

ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ ಮಾತನಾಡಿ, ದೇಶ ಸೇವೆಯೇ ಈಶ ಸೇವೆ ಎಂದು ತಿಳಿದು, ಬದುಕಲು ಎನ್ ಡಿ ಎ ತರಬೇತಿ ಅವಕಾಶ ಮಾಡಿಕೊಡುತ್ತದೆ ಎಂದು ಹೇಳಿದರು. ಎನ್ ಡಿ ಎ ಸಂಯೋಜಕ ಜೋಸ್ಟಮ್ ಎ ಟಿ ,ಎನ್. ಡಿ. ಎ ತರಬೇತಿಯ ಬಗ್ಗೆ ವಿವರವಾಗಿ ತಿಳಿಸಿದರು.
ವಿದ್ಯಾರ್ಥಿಗಳಾದ ವರ್ಷಾ ಎನ್ ಸ್ವಾಗತಿಸಿದರು. ರಕ್ಷಾ ವೆಂಕಟ್ ಮತ್ತು ರೀತು ಕೆ ನಿರೂಪಿಸಿದರು. ಸುಧನ್ವ ವಂದಿಸಿದರು.

Related posts

ಫೆ.2-7: ಬೆಳ್ತಂಗಡಿಯಲ್ಲಿ ಮಹಾ ಸೀರೆ ಮೇಳ ವಿಶೇಷ ರಿಯಾಯಿತಿಯೊಂದಿಗೆ ವಿವಿಧ ವಿನ್ಯಾಸವುಳ್ಳ ಸೀರೆಗಳು ಲಭ್ಯ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬೆಳ್ತಂಗಡಿ ಕರ್ನಾಟಕ ಸಿರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಷನ್ ನಿಂದ ಬೆಂಬಲ

Suddi Udaya

ಉಜಿರೆ ಶ್ರೀ ಧ.ಮಂ. ಶಿಕ್ಷಣ ಮಹಾವಿದ್ಯಾಲಯ ಪ್ರಾಂಶುಪಾಲ ಸಂತೋಷ್‌ ಆಲ್ಬರ್ಟ್ ಸಲ್ಡಾನ ರವರಿಗೆ ಡಾಕ್ಟರೇಟ್ ಪದವಿ

Suddi Udaya

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ ಕೊಕ್ಕಡ ಎಂಡೊಸಲ್ಪಾನ್ ಕೇಂದ್ರದಲ್ಲಿ ಇಂದಿರಾ ಗಾಂಧಿ ಜನ್ಮದಿನ ಆಚರಣೆ

Suddi Udaya

ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ: ದರ್ಶನ ಬಲಿ, ಬಟ್ಟಲು ಕಾಣಿಕೆ

Suddi Udaya

ಸುಲ್ಕೇರಿಮೊಗ್ರು ಸ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ: ನೂತನ ಸಮಿತಿ ರಚನೆ

Suddi Udaya
error: Content is protected !!