July 23, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಎಕ್ಸೆಲ್ ನಲ್ಲಿ ಎನ್ ಡಿ ಎ ತರಗತಿಗಳ ಓರಿಯಂಟೇಶನ್

ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜು ಗುರುವಾಯನಕೆರೆ ಇಲ್ಲಿನ ಎನ್ ಡಿ ಎ ತರಗತಿಗಳ ಓರಿಯಂಟೇಶನ್ ವಿದ್ಯಾ ಸಾಗರ ಕ್ಯಾಂಪಸ್ ನಲ್ಲಿ ನಡೆಯಿತು.
ಭಾರತೀಯ ಸೇನೆಯ ವಿಶ್ರಾಂತ ಮೇಜರ್ ಜನರಲ್ ಎಂ.ವಿ ಭಟ್ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡರು.

ಯಾವುದೇ ಸಾಧನೆ ಮಾಡಲು ಏಕಾಗ್ರತೆ ಬೇಕು. ಏಕಾಗ್ರತೆ ಹಾಗೂ ಇಚ್ಛಾ ಶಕ್ತಿ ಸಾಧಕನಾಗಿರಬೇಕಾದ ಎರಡು ಪ್ರಮುಖ ಅರ್ಹತೆಗಳು ಎಂದು ಭಾರತೀಯ ಸೇನೆಯ ವಿಶ್ರಾಂತ ಜನರಲ್ ಮೇಜರ್ ಎಂ.ವಿ ಭಟ್ ಹೇಳಿದರು.


ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ಮಾತನಾಡಿ, ದೇಶ ಸೇವೆ ಮಾಡುವ ಉನ್ನತ ಮಟ್ಟದ ಅವಕಾಶ, ಎನ್ ಡಿ ಎ ಕ್ಲಿಯರ್ ಮಾಡಿದ ವಿದ್ಯಾರ್ಥಿಗಳಿಗೆ ಲಭಿಸುತ್ತದೆ. ಹೀಗಾಗಿ ಎನ್ ಡಿ ಎ ಪರೀಕ್ಷೆಗಳನ್ನು ಗಂಭೀರವಾಗಿ ಸ್ವೀಕರಿಸಿ ಎಂದರು.

ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ ಮಾತನಾಡಿ, ದೇಶ ಸೇವೆಯೇ ಈಶ ಸೇವೆ ಎಂದು ತಿಳಿದು, ಬದುಕಲು ಎನ್ ಡಿ ಎ ತರಬೇತಿ ಅವಕಾಶ ಮಾಡಿಕೊಡುತ್ತದೆ ಎಂದು ಹೇಳಿದರು. ಎನ್ ಡಿ ಎ ಸಂಯೋಜಕ ಜೋಸ್ಟಮ್ ಎ ಟಿ ,ಎನ್. ಡಿ. ಎ ತರಬೇತಿಯ ಬಗ್ಗೆ ವಿವರವಾಗಿ ತಿಳಿಸಿದರು.
ವಿದ್ಯಾರ್ಥಿಗಳಾದ ವರ್ಷಾ ಎನ್ ಸ್ವಾಗತಿಸಿದರು. ರಕ್ಷಾ ವೆಂಕಟ್ ಮತ್ತು ರೀತು ಕೆ ನಿರೂಪಿಸಿದರು. ಸುಧನ್ವ ವಂದಿಸಿದರು.

Related posts

ಉರುವಾಲುಪದವು ಶಿವಾಜಿನಗರ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವ ; ಗೋಂದೋಳು ಪೂಜೆ, ದೇವಿ ದರ್ಶನ

Suddi Udaya

ಮದ್ದಡ್ಕ  : ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ರಚನೆ: ಅಧ್ಯಕ್ಷರಾಗಿ ಗೋಪಿನಾಥ್ ನಾಯಕ್

Suddi Udaya

ಇಂದಬೆಟ್ಟು ಸಮೃದ್ಧಿ ಸಂಜೀವಿನಿ ಮಹಿಳಾ ಒಕ್ಕೂಟ ಹಾಗೂ ಜಿಲ್ಲಾ ಕೃಷಿ ತರಬೇತಿ ಕೇಂದ್ರದಿಂದ ಜೇನು ಕೃಷಿ ತರಬೇತಿ ಕಾರ್ಯಾಗಾರ

Suddi Udaya

ಅಳದಂಗಡಿ: ಸುದ್ದಿ ಉದಯ ವಾರಪತ್ರಿಕೆ ವರದಿಗೆ ಅಳದಂಗಡಿ ಗ್ರಾ.ಪಂನಿಂದ ಸ್ಪಂದನೆ: ಶೋಚನೀಯ ಸ್ಥಿಯಲ್ಲಿದ್ದ ಸೋರುತ್ತಿದ್ದ ಮನೆಯ ಮೇಲ್ಚಾವಣಿ ತೆರವು: ಮೇಲ್ಛಾವಣಿಗೆ ಶೀಟ್ ಅಳವಡಿಕೆಯ ಕೆಲಸ ಪ್ರಾರಂಭ,ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

‘ಟೆಕ್ ಸಿಸ್ಟಮ್ ಗ್ಲೋಬಲ್ ಸರ್ವಿಸ್ ಕಂಪೆನಿಯಿಂದ ಪಿಲಿಚಂಡಿಕಲ್ಲು ಸರಕಾರಿ ಶಾಲೆಗೆ ಎರಡು ಕಂಪ್ಯೂಟರ್ ಕೊಡುಗೆ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸರ ಮಹಾದೇವಲಯದಲ್ಲಿ ಪಾಸ್ಕ ಹಬ್ಬದ ಆಚರಣೆ

Suddi Udaya
error: Content is protected !!