September 6, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಎಕ್ಸೆಲ್ ನಲ್ಲಿ ಎನ್ ಡಿ ಎ ತರಗತಿಗಳ ಓರಿಯಂಟೇಶನ್

ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜು ಗುರುವಾಯನಕೆರೆ ಇಲ್ಲಿನ ಎನ್ ಡಿ ಎ ತರಗತಿಗಳ ಓರಿಯಂಟೇಶನ್ ವಿದ್ಯಾ ಸಾಗರ ಕ್ಯಾಂಪಸ್ ನಲ್ಲಿ ನಡೆಯಿತು.
ಭಾರತೀಯ ಸೇನೆಯ ವಿಶ್ರಾಂತ ಮೇಜರ್ ಜನರಲ್ ಎಂ.ವಿ ಭಟ್ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡರು.

ಯಾವುದೇ ಸಾಧನೆ ಮಾಡಲು ಏಕಾಗ್ರತೆ ಬೇಕು. ಏಕಾಗ್ರತೆ ಹಾಗೂ ಇಚ್ಛಾ ಶಕ್ತಿ ಸಾಧಕನಾಗಿರಬೇಕಾದ ಎರಡು ಪ್ರಮುಖ ಅರ್ಹತೆಗಳು ಎಂದು ಭಾರತೀಯ ಸೇನೆಯ ವಿಶ್ರಾಂತ ಜನರಲ್ ಮೇಜರ್ ಎಂ.ವಿ ಭಟ್ ಹೇಳಿದರು.


ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ಮಾತನಾಡಿ, ದೇಶ ಸೇವೆ ಮಾಡುವ ಉನ್ನತ ಮಟ್ಟದ ಅವಕಾಶ, ಎನ್ ಡಿ ಎ ಕ್ಲಿಯರ್ ಮಾಡಿದ ವಿದ್ಯಾರ್ಥಿಗಳಿಗೆ ಲಭಿಸುತ್ತದೆ. ಹೀಗಾಗಿ ಎನ್ ಡಿ ಎ ಪರೀಕ್ಷೆಗಳನ್ನು ಗಂಭೀರವಾಗಿ ಸ್ವೀಕರಿಸಿ ಎಂದರು.

ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ ಮಾತನಾಡಿ, ದೇಶ ಸೇವೆಯೇ ಈಶ ಸೇವೆ ಎಂದು ತಿಳಿದು, ಬದುಕಲು ಎನ್ ಡಿ ಎ ತರಬೇತಿ ಅವಕಾಶ ಮಾಡಿಕೊಡುತ್ತದೆ ಎಂದು ಹೇಳಿದರು. ಎನ್ ಡಿ ಎ ಸಂಯೋಜಕ ಜೋಸ್ಟಮ್ ಎ ಟಿ ,ಎನ್. ಡಿ. ಎ ತರಬೇತಿಯ ಬಗ್ಗೆ ವಿವರವಾಗಿ ತಿಳಿಸಿದರು.
ವಿದ್ಯಾರ್ಥಿಗಳಾದ ವರ್ಷಾ ಎನ್ ಸ್ವಾಗತಿಸಿದರು. ರಕ್ಷಾ ವೆಂಕಟ್ ಮತ್ತು ರೀತು ಕೆ ನಿರೂಪಿಸಿದರು. ಸುಧನ್ವ ವಂದಿಸಿದರು.

Related posts

ಓಡಿಲ್ನಾಳ ಸ. ಉ ಪ್ರಾ. ಶಾಲಾ ಸಂಸತ್ತು ಚುನಾವಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಧರ್ಮಸ್ಥಳ ಸಮುದಾಯದ ಅಭಿವೃದ್ಧಿ ವಿಭಾಗ ಆಶ್ರಯದಲ್ಲಿ 418 ಶಾಲೆಗಳಿಗೆ ರೂ.2.50 ಕೋಟಿ ಮೊತ್ತದ 3472 ಜೊತೆ ಪೀಠೋಪಕರಣ ವಿತರಣೆಗೆ ಡಾ.ಹೆಗ್ಗಡೆ ಚಾಲನೆ

Suddi Udaya

ಕುಕ್ಕೇಡಿ ಗ್ರಾ.ಪಂ. ಮಹಿಳಾ ಗ್ರಾಮ ಸಭೆ

Suddi Udaya

ಗುರುವಾಯನಕೆರೆ: ಶ್ರೀ ಲಕ್ಷ್ಮಿ ಫ್ಯಾನ್ಸಿಯಲ್ಲಿ ಚಪ್ಪಲ್ ಮೇಲೆ 10-50% ಡಿಸ್ಕೌಂಟ್ ಸೇಲ್

Suddi Udaya

ಉಜಿರೆ: ಕೆಸರ್ ಡೊಂಜಿ ದಿನ ಕ್ರೀಡಾಕೂಟ

Suddi Udaya

ಉತ್ತರಾಖಂಡ ಹ್ರಾಸಿಕೇಶದಲ್ಲಿ ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಗಂಗಪೂಜೆ

Suddi Udaya
error: Content is protected !!