July 23, 2026
ಧಾರ್ಮಿಕ

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಮಹಾಸಭೆ

ಬೆಳ್ತಂಗಡಿ: ಅಂಗಸಂಸ್ಥೆಯ ಚಟುವಟಿಕೆಗಳಲ್ಲಿ ಕೂಟ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ವಿಶೇಷವಾಗಿ ಯುವಕರು ಕೂಟ ಮಹಾಜಗತ್ತಿನ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಗುರು ನರಸಿಂಹದೇವರ ಅನುಗ್ರಹದಿಂದ ಕೂಟ ಬಂಧುಗಳು ತಮ್ಮ ಜೀವನದಲ್ಲಿ ಹೆಚ್ಚಿನ ಯಶಸ್ಸುಗಳಿಸುವಂತಾಗಲಿ ಎಂದು ಶ್ರೀ ಗುರು ನರಸಿಂಹ ದೇವಸ್ಥಾನ ಸಾಲಿಗ್ರಾಮದ ಆಡಳಿತ ಮಂಡಳಿ ಸದಸ್ಯ ಸದಾಶಿವ ಐತಾಳ್ ಗುರು ಸಂದೇಶ ನೀಡಿದರು.

ಅವರು ಕೂಟ ಮಹಾಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಮಹಾಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಬೆಳ್ತಂಗಡಿ ಅಂಗ ಸಂಸ್ಥೆಯ ವಿಶ್ವನಾಥ ಹೊಳ್ಳ ಮಜ್ಜನಿಬೈಲು ಅಧ್ಯಕ್ಷತೆಯನ್ನು ವಹಿಸಿದ್ದರು.

ಅಂಗಸಂಸ್ಥೆಯ ಸ್ಥಾಪಕ ಅಧ್ಯಕ್ಷ ವೆಂಕಟರಾಯ ಅಡೂರು, ಅಂಗಸಂಸ್ಥೆಯ ನಿಕಟ ಪೂರ್ವ ಅಧ್ಯಕ್ಷ ಬಿ. ವಾಸುದೇವ ಸೋಮಯಾಜಿ ಹಾಗೂ ಮಹಿಳಾ ವೇದಿಕೆಯ ಅಧ್ಯಕ್ಷ ನಳಿನಿ ಎಸ್ ಹೊಳ್ಳ ಉಪಸ್ಥಿತರಿದ್ದರು.

ಕಾರ್ಯದರ್ಶಿ ವಿಷ್ಣು ಪ್ರಕಾಶ್ ಅಂಗಸಂಸ್ಥೆ ನಡೆಸಿದ ವಿವಿಧ ಚಟುವಟಿಕೆಗಳ ವರದಿಯನ್ನು ಮಂಡಿಸಿದರು. ಕೋಶಾಧಿಕಾರಿ ಪ್ರಕಾಶ್ ನಾರಾಯಣ ಲೆಕ್ಕಪತ್ರಗಳನ್ನು ಮಂಡಿಸಿ ಮುಂಗಡ ಪತ್ರಕ್ಕೆ ಸಭೆಯ ಒಪ್ಪಿಗೆ ಪಡೆದರು. ಬಿಲಿಯನ್ ಫೌಂಡೇಶನ್ ಪ್ರತಿನಿಧಿ ಅರವಿಂದ ಕಾರಂತ ಫೌಂಡೇಶನ್ ಚಟುವಟಿಕೆಗಳ ಕುರಿತು ವರದಿಯನ್ನು ಪ್ರಸ್ತುತಪಡಿಸಿದರು. ಮಹಿಳಾ ವೇದಿಕೆಯ ಕಾರ್ಯದರ್ಶಿ ಅಕ್ಷತಾ ಎಸ್ ಅಡೂರು ಮಹಿಳಾ ವೇದಿಕೆಯ ವಾರ್ಷಿಕ ವರದಿಯನ್ನು ಮಂಡಿಸಿದರು.

ವಿವಿಧ ಕ್ಷೇತ್ರಗಳಲ್ಲಿ ಶ್ರೇಷ್ಠ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಉಪಾಧ್ಯಕ್ಷ ರಮೇಶ್ ಹೊಳ್ಳ ಆರಂಬೊಡಿಯವರು ಸ್ವಾಗತಿಸಿದರು. ಕಾರ್ಯದರ್ಶಿ ಶ ವಿಷ್ಣು ಪ್ರಕಾಶ್ ಧನ್ಯವಾದ ನೀಡಿದರು. ಅನುರಾಧ ಕೆ. ರಾವ್ ನಿರೂಪಿಸಿದರು.

Related posts

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಮದ್ದಡ್ಕ ತಾಯಿ ರಕ್ತೇಶ್ವರಿ ಹಾಗೂ ಪಿಲಿಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ರೂ.1 ಲಕ್ಷ ದೇಣಿಗೆ

Suddi Udaya

ಮದ್ದಡ್ಕ : 14ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಹಾಗೂ ಶ್ರೀ ದುರ್ಗಾ ಗಣೇಶ ಸಭಾ ಭವನದ ಲೋಕಾಪ೯ಣೆ:ಮೈಸೂರು ಸಂಸ್ಥಾನದ ಮಹಾರಾಜರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರಿಂದ ದೀಪ ಪ್ರಜ್ವಲನೆ – ಗಣ್ಯರ ಉಪಸ್ಥಿತಿ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಹೊರೆ ಕಾಣಿಕೆ ಹಾಗೂ ಪಲ್ಲಕ್ಕಿ ಸಮರ್ಪಣೆ

Suddi Udaya

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಚಾಲನೆ

Suddi Udaya

ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯದ ಕೊನೆಯ ದಿನದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶಾಸಕ ಹರೀಶ್ ಪೂಂಜ

Suddi Udaya
error: Content is protected !!