July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ರಾಡಿ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ, ಗಿಡ ನಾಟಿ ಕಾರ್ಯಕ್ರಮ

ಕೊಕ್ರಾಡಿ: ಶ್ರೀ, ಕ್ಷೇ.ಧ.ಗ್ರಾ. ಯೋ. ಬಿಸಿ ಟ್ರಸ್ಟ್ ಗುರುವಾಯನಕೆರೆ ಹಾಗೂ ಸರಕಾರಿ ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜು ಕೊಕ್ರಾಡಿ ಇವುಗಳ ಸಹಕಾರದೊಂದಿಗೆ ಪರಿಸರ ಜಾಗೃತಿ ಮಾಹಿತಿ ಗಿಡ ನಾಟಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ತಾಲೂಕು ಜನಜಾಗೃತಿ ವೇದಿಕೆ ಸದಸ್ಯ ರಾಜು ಪಿ. ಶೆಟ್ಟಿ ಉದ್ಘಾಟನೆ ಮಾಡಿ ಮಾತನಾಡಿ ಮುಂದಿನ ಪೀಳಿಗೆಯ ನೆಮ್ಮದಿ ಜೀವನಕ್ಕೆ ಪರಿಸರ ಸಂರಕ್ಷಣೆಯ ಮಾಹಿತಿ ನೀಡಿದರು.

ಪ್ರಸ್ತಾವಿಕವಾಗಿ ಮಾತನಾಡಿದ ವಲಯದ ಮೇಲ್ವಿಚಾರಕರು ಶ್ರೀಮತಿ ವಿಶಾಲ್ ಕೆ ಮಾತನಾಡಿ ಯೋಜನೆ ನಡೆದು ಬಂದ ದಾರಿ ಯೋಜನೆಯಿಂದ ಸಿಗುವ ಸೌಲಭ್ಯದ ಬಗ್ಗೆ ಯೋಜನೆಯ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.
ಶಾಲೆಯ ಪ್ರಾಂಶುಪಾಲರಾದ ದಯಾನಂದ್ ರವರು ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ,ಪ್ರಾಣಿ ಪಕ್ಷಿಗಳಿಗೆ ಎಲ್ಲಾ ಸಮಯದಲ್ಲಿ ಆಹಾರ ಸಿಗುವ ರೀತಿಯಲ್ಲಿ ನಾವು ಹೆಚ್ಚು ಹೆಚ್ಚು ಗಿಡ ನಾಟಿ ಮಾಡಬೇಕು ಎಲ್ಲಾ ವಿದ್ಯಾರ್ಥಿಗಳು ತಮ್ಮ ಹುಟ್ಟುಹಬ್ಬದ ಪ್ರಯುಕ್ತ ದಿನದಂದು ಗಿಡ ನಾಟಿ ಮಾಡುವಂತೆ ಮಾಹಿತಿ ನೀಡಿದರು.


ಪರಿಸರ ಸಂರಕ್ಷಣೆ ಕುರಿತಂತೆ ಮಕ್ಕಳಲ್ಲಿ ಸ್ಪರ್ಧಾತ್ಮಕ ಮನೋಭಾವನೆ ಹಾಗೂ ಪರಿಸರ ಸಂರಕ್ಷಣೆ ಬಗ್ಗೆ ಅರಿವು ಮೂಡಿಸಲು ವಿವಿಧ ರೀತಿಯ ಸ್ಪರ್ಧೆಗಳನ್ನು ಏರ್ಪಡಿಸಿ ವಿದ್ಯಾರ್ಥಿಗಳಿಗೆ ಗಿಡ ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ತಾಲೂಕಿನ ಸಿಎಸ್.ಸಿ ನೋಡಲ್ ಅಧಿಕಾರಿ ಸುರೇಶ ರವರು ಸಾಮಾನ್ಯ ಸೇವಾ ಕೇಂದ್ರ ದಲ್ಲಿ ಸಿಗುವ ಸೇವೆ ಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಕೃಷಿ ಮೇಲ್ವಿಚಾರಕರು ಕೃಷ್ಣ, ಮುಖ್ಯ ಶಿಕ್ಷಕರ ಮಹಮ್ಮದ್ ರಿಯಾಜ್, ಕೊಕ್ರಾಡಿ ಮತ್ತು ಸಾವ್ಯ ಒಕ್ಕೂಟದ ಅಧ್ಯಕ್ಷರುಗಳಾದ ಶ್ರೀಮತಿ ವಾರಿಜ, ಯಮುನಾ, ವಿಪತ್ತು ಘಟಕ ಸಾಯೋಜಕಿ ಹರೀಣಾಕ್ಷಿ, ದಿನೇಶ್ ಶೆಟ್ಟಿ, ಸಂತೋಷ್ ಪೂಜಾರಿ, ಅಣ್ಣಿಎಮ್.ಕೆ ರಾಜು ಪೂಜಾರಿ, ಕರಿಯ ಪೂಜಾರಿ, ಹರೀಶ್ ಉಪಸ್ಥಿತರಿದ್ದರು.

ಶಿಕ್ಷಕಿ ಅಕ್ಕಮ್ಮ ಕಾರ್ಯಕ್ರಮ ನಿರೂಪಿಸಿ, ಶಾಲಾ ಅಧ್ಯಾಪಕಿ ಲವೀನಾ ವೀಣಾ ಡಯಾಸ್ ಸ್ವಾಗತಿಸಿ, ಸಹ ಶಿಕ್ಷಕಿ ವಿದ್ಯಾ ಧನ್ಯವಾದವಿತ್ತರು. ಕಾರ್ಯಕ್ರಮದಲ್ಲಿ ಶಾಲೆಯ ಸಹ ಶಿಕ್ಷಕರು ಎಸ್.ಡಿ.ಎಮ್.ಸಿ ಸದಸ್ಯರು, ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಮಚ್ಚಿನ: ಹೆನ್ರಿ ರೋಡ್ರಿಗಸ್ ನಿಧನ

Suddi Udaya

ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರ ಕ್ಷೇತ್ರದ ಚುನಾವಣೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಮತದಾನ

Suddi Udaya

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಬೆಳಾಲು ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಕರಾಟೆ ಚಾಂಪಿಯನ್ಶಿಪ್: ಬೆಳ್ತಂಗಡಿಯ ಸೈಂಟ್ ಮೇರಿಸ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ನಾಫೀರವರು ಕುಮಿಟೆಯಲ್ಲಿ ಹಾಗೂ ಕಟಾದಲ್ಲಿ ಕಂಚಿನ ಪದಕ

Suddi Udaya

ಬೆಳ್ತಂಗಡಿ: ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ

Suddi Udaya

ಮರೋಡಿ : 22 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!