September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕ್ಯಾಂಪ್ಕೋ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಆರ್ಥಿಕ ನೆರವು

ನೆಲ್ಯಾಡಿ: ಕ್ಯಾಂಪ್ಕೋ ಸಂಸ್ಥೆಯ ‘ಸಾಂತ್ವನ’ ಎಂಬ ಯೋಜನೆಯಡಿಯಲ್ಲಿ ಆರ್ಥಿಕ ನೆರವಿನ ಚೆಕ್ ಹಸ್ತಾಂತರ ಕಾರ್ಯಕ್ರಮವು ಜು.01 ರಂದು ನೆಲ್ಯಾಡಿ ಶಾಖೆಯಲ್ಲಿ ನಡೆಯಿತು.

ಕ್ಯಾಂಪ್ಕೋ ಸಂಸ್ಥೆ ನೆಲ್ಯಾಡಿ ಶಾಖೆಯ ಸಕ್ರಿಯ ಸದಸ್ಯರಾದ  ಮಹೇಶ ಕೆ ಇವರ ಮೂತ್ರಪಿಂಡ ಕಸಿ( Kidney transplant) ಶಸ್ತ್ರಕ್ರಿಯೆಗೆ ಸಹಾಯಧನದ ಮೊತ್ತ ರೂ. 3,00,000/- (ರೂಪಾಯಿ ಮೂರು ಲಕ್ಷ ) ದ ಚೆಕ್ಕನ್ನು ಕ್ಯಾಂಪ್ಕೋ ಸಂಸ್ಥೆಯ ಗೌರವಾನ್ವಿತ ನಿರ್ದೇಶಕ ಕೃಷ್ಣಪ್ರಸಾದ್ ಮಡ್ತಿಲರವರು ಮಹೇಶ ಕೆ ಯವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಪ್ರಾದೇಶಿಕ ವ್ಯವಸ್ಥಾಪಕ ಪ್ರಕಾಶ್ ಶೆಟ್ಟಿ, ನೆಲ್ಯಾಡಿ ಶಾಖೆಯ ಪ್ರಬಂಧಕ ಪ್ರಥಮ್ ಕುಮಾರ್ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಜು. 22-23: ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ

Suddi Udaya

ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿದ ಮಾಜಿ ಶಾಸಕ ವಸಂತ ಬಂಗೇರ

Suddi Udaya

ಸವಣಾಲು ಸರಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ರಚನೆ

Suddi Udaya

ನ್ಯಾಯಾಲಯಕ್ಕೆ ಹಾಜರಾಗದ ವಾರಂಟ್ ಆರೋಪಿ ಬಂಧನ

Suddi Udaya

ಪುಂಜಾಲಕಟ್ಟೆ – ಪುರಿಯ ರಸ್ತೆ ನಿರ್ಮಾಣಕ್ಕೆ ರೂ. 50 ಲಕ್ಷ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂಸೇವಕ ಭಾಸ್ಕರ ಆಚಾರ್ಯ ವಿಧಿವಶ

Suddi Udaya
error: Content is protected !!