26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಮಸ್ಯೆ

ಗುರುವಾಯನಕೆರೆ ಕೆರೆ ಬಳಿ ಸೃಷ್ಟಿಯಾದ ಇನ್ನೊಂದು ಕೆರೆ, ರಾಜ್ಯ ಹೆದ್ದಾರಿಯಲ್ಲಿ ಮರಣ ಗುಂಡಿಗಳು, ವಾಹನ ಚಾಲಕರಿಗೆ ಹಾಗೂ ಪಾದಚಾರಿಗಳಿಗೆ ತೀವ್ರ ಸಂಕಷ್ಟ,

ಗುರುವಾಯನಕೆರೆ: ಇಲ್ಲಿಯ ಕೆರೆಯ ಬಳಿ ಹೆದ್ದಾರಿಯಲ್ಲಿ ಇನ್ನೊಂದು ಕೆರೆ ಸೃಷ್ಟಿಯಾಗಿದೆ. ಭಾರಿ ಗಾತ್ರದ ಹೊಂಡ-ಗುಂಡಿಗಳು ಸೃಷ್ಟಿಯಾಗಿವೆ. ಈ ಮರಣ ಗುಂಡಿಗಳು ಅವಘಡಕ್ಕೆ ಕಾರಣವಾಗುತ್ತಿದ್ದು , ಇದರಿಂದಾಗಿ ವಾಹನ ಚಾಲಕರಿಗೆ ಹಾಗೂ ಪಾದಚಾರಿಗಳಿಗೆ ತೀವ್ರ ಸಂಕಷ್ಟ ಎದುರಾಗಿದೆ.

ಗುರುವಾಯನಕೆರೆ ಪೇಟೆಯಲ್ಲಿ ಬೃಹದಾಕಾರದ ಹೊಂಡಗಳು ನಿರ್ಮಾಣಗೊಂಡಿದ್ದು, ಇವುಗಳಲ್ಲಿ ಮಳೆನೀರು ತುಂಬಿದಾಗ ರಾತ್ರಿ ಹೊತ್ತಲ್ಲಂತೂ ಅಪಘಾತಗಳು ನಿತ್ಯ ಎಂಬಂತಾಗಿವೆ. ಈ ಹೊಂಡಗಳಲ್ಲಿ ನೀರು ಕಟ್ಟಿ ನಿಂತಾಗ ಎಷ್ಟು ಆಳವಿದೆ ಎಂಬ ಬಗ್ಗೆ ಅರಿವಿಗೆ ಬಾರದೇ ದ್ವಿಚಕ್ರ ಹಾಗೂ ಇತರ ಸಹಿತ ಸಣ್ಣಪುಟ್ಟ ವಾಹನಗಳು ಬಿದ್ದು ಸವಾರರು ಗಾಯಗೊಳ್ಳುತ್ತಿರುವ ಘಟನೆಗಳು ನಿತ್ಯ ನಡೆಯಲು ಆರಂಭವಾಗಿದೆ. ನಿತ್ಯ ಪ್ರಯಾಣಿಕರು ಹೊಂಡ ಗುಂಡಿಗಳ ಮೇಲಿನ ಪ್ರಯಾಣದಿಂದಾಗಿ ಸುಸ್ತಾಗುತ್ತಿದ್ದಾರೆ.

ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಇಲ್ಲಿಯ ವಿಚಾರದಲ್ಲಿ ಸಮರ್ಪಕ ಯೋಜನೆ ರೂಪಿಸುತ್ತಿಲ್ಲ ಎಂದು ಸಾರ್ವಜನಿಕರ ಆರೋಪಿಸುತ್ತಿದ್ದಾರೆ.

ಹೆದ್ದಾರಿಯಲ್ಲಿ ದಿನನಿತ್ಯ ಸಾವಿರಾರು ವಾಹನಗಳು ಸಂಚಾರ ನಡೆಸುತ್ತಿವೆ. ಕೆಲವು ವಾಹನಗಳು ಹೊಂಡ ತಪ್ಪಿಸುವ ಭರದಲ್ಲಿ ಹಾಗೂ ಇನ್ನು ಕೆಲವು ವೇಗವಾಗಿ ಸಂಚರಿಸುವ ಸಂದರ್ಭದಲ್ಲಿ ಮತ್ತೊಂದು ವಾಹನಗಳಿಗೆ ಡಿಕ್ಕಿ ಹೊಡೆಯುವ ಘಟನೆಗಳು ಸಂಭವಿಸಿದ್ದೂ ಇವೆ. ಅಲ್ಲದೆ ಹೊಂಡ-ಗುಂಡಿಗಳನ್ನು ತಪ್ಪಿಸಲು ಚಾಲಕರು ಹರಸಾಹಸಪಡಬೇಕಾಗಿದೆ. ಈ ಮಧ್ಯೆ ಸಂಚರಿಸುತ್ತಿರುವಾಗ ವಾಹನಗಳ ಚಕ್ರಗಳು ಹೊಂಡಗಳಿಗೆ ಬಿದ್ದೇಳುವಾಗ ಪಾದಚಾರಿಗಳಿಗೆ ಕೆಸರು ನೀರಿನ ಸಿಂಚನವಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಹೆದ್ದಾರಿಯನ್ನು ದುರಸ್ತಿಗೊಳಿಸಲು ಕೂಡಲೇ ಕ್ರಮ ಕೈಗೊಳ್ಳಬೇಕಾಗಿದೆ. ಜತೆಗೆ ಸಂಭವನೀಯ ದುರಂತಗಳನ್ನು ತಪ್ಪಿಸುವ ಕುರಿತು ಗಮನಹರಿಸಬೇಕಾಗಿದೆ.

Related posts

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ: ಧ್ವಜಾರೋಹಣ

Suddi Udaya

ಅಳದಂಗಡಿ ಹಾಲು ಉತ್ಪಾದಕರ ಸಹಕಾರ ಸಂಘದ ಸುವರ್ಣ ಮಹೋತ್ಸವ ಸಂಪನ್ನ: ಉತ್ತಮ ಹೈನುಗಾರರು ಹಾಗೂ ಮಾಜಿ ಅಧ್ಯಕ್ಷರುಗಳಿಗೆ ಸನ್ಮಾನ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜು ದೈಹಿಕ ಶಿಕ್ಷಣ ವಿಭಾಗದಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ: ಎಂ.ಎಸ್.ಡಬ್ಲ್ಯೂ ಕೌನ್ಸಿಲರ್ ನಾವೂರು ಗ್ರಾಮದ ಕಾರಿಂಜ ಸುಮಿತ್ರಾ ನಿಧನ

Suddi Udaya

ರಾಜ್ಯ ಮಟ್ಟದ ಕಾಲೇಜು ಪತ್ರಿಕೋದ್ಯಮ ಉಪನ್ಯಾಸಕರ ಸಂಘದ ಕಾರ್ಯದರ್ಶಿಯಾಗಿ ಡಾ. ಭಾಸ್ಕರ ಹೆಗಡೆ ಆಯ್ಕೆ

Suddi Udaya

ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸಿಎಂ ಸಿದ್ದರಾಮಯ್ಯರಿಗೆ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ರವರಿಗೆ ಮನವಿ

Suddi Udaya
error: Content is protected !!