July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ: ವಿದ್ವತ್ ಪ.ಪೂ. ಕಾಲೇಜಿನಲ್ಲಿ ಚಾರ್ಟರ್ಡ್ ಅಕೌಂಟೆಂಟ್ಸ್ ಡೇ ಆಚರಣೆ

ಗುರುವಾಯನಕೆರೆ: ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆ (ICAI)ಸ್ಥಾಪನೆಯ 76 ನೇ ವಾರ್ಷಿಕೋತ್ಸವದ ಅಂಗವಾಗಿ ಜು. 01 ರಂದು ವಿದ್ವತ್ ಪದವಿಪೂರ್ವ ಕಾಲೇಜು ಗುರುವಾಯನಕೆರೆಯಲ್ಲಿ ಚಾರ್ಟರ್ಡ್ ಅಕೌಂಟೆಂಟ್ಸ್ ಡೇ’ ಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಮಂಗಳೂರಿನ ಖ್ಯಾತ ಚಾರ್ಟರ್ಡ್ ಅಕೌಂಟೆಂಟ್ಸ್ ಆಗಿರುವ ಸಿಎ ಸುಕನ್ಯಾ ಇವರು ದೀಪ ಬೆಳಗಿಸಿ ಉದ್ಘಾಟಿಸಿ, ಚಾರ್ಟರ್ಡ್ ಅಕೌಂಟೆಂಟ್ಸ್ ವೃತ್ತಿಯ ನೈತಿಕತೆ, ನಿಷ್ಠೆ ಮತ್ತು ರಾಷ್ಟ್ರೀಯ ಆರ್ಥಿಕತೆಯ ಬೆಳವಣಿಗೆಯಲ್ಲಿ ಅವರ ಪಾತ್ರದ ಕುರಿತು ತಿಳಿಸಿ, ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಶುಭಹಾರೈಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿರುವ ಸಂಸ್ಥೆಯ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಮಾತನಾಡಿ, ಚಾರ್ಟರ್ಡ್ ಅಕೌಂಟೆಂಟ್ಸ್ ವೃತ್ತಿಯ ಹಾಗೂ ಆರ್ಥಿಕ ಕ್ಷೇತ್ರದಲ್ಲಿ ಅದರ ಪಾತ್ರದ ಬಗ್ಗೆ ತಿಳಿಸಿದರು. ಸಮಾರಂಭದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಪ್ರಾಂಶುಪಾಲರಾದ ಹರೀಶ್ ಅವರು “ಸಿಎ ದಿನಾಚರಣೆ ಎಂದರೆ ಕೇವಲ ಉತ್ಸವವಲ್ಲ; ಅದು ಪ್ರಾಮಾಣಿಕತೆ, ಶ್ರಮ ಮತ್ತು ಸಮಾಜದ ನಂಬಿಕೆಯನ್ನು ಪ್ರತಿಬಿಂಬಿಸುವ ದಿನ” ಎಂದು ಹೇಳಿದರು.

ಸಮಾರಂಭದಲ್ಲಿ ಕಾಲೇಜಿನ ಶೈಕ್ಷಣಿಕ ನಿರ್ದೇಶಕ ಗಂಗಾಧರ. ಇ. ಮಂಡಗಳಲೆ, ಕಾಲೇಜಿನ ಆಡಳಿತಾಧಿಕಾರಿ ಅಶೋಕ್ ಕುಮಾರ್ ಶೆಟ್ಟಿ, ಕಾಲೇಜಿನ ‘ಸಿಎ’ಫೌಂಡೇಶನ್ ಸಂಯೋಜಕಿ ಡಾ. ಮಹಿತಾ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಕುಮಾರಿ ಸ್ಪರ್ಧಾ ಮತ್ತು ಕುಮಾರಿ ನೇಹಾ ಇವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವು ಆರಂಭಗೊಂಡು, ಉಪನ್ಯಾಸಕಿ ಶ್ರೀಮತಿ ದಿವ್ಯಶ್ರೀ.ಜಿ ಸ್ವಾಗತಿಸಿ, ಉಪನ್ಯಾಸಕಿ ಶ್ರೀಮತಿ ಅನುಷಾ.ಎ.ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ಲಾಯಿಲ ಗಾಂಧಿನಗರದಲ್ಲಿ ನಡೆದ ಕೊಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ರೂ 3 ಲಕ್ಷ ದಂಡ

Suddi Udaya

ರಾಜಕೀಯ ಪ್ರೇರಿತ ಷಡ್ಯಂತ್ರಕ್ಕೆ ಇನ್ನೊಂದು ಜೀವ ಬಲಿಯಾಗಿದೆ: ಅಭಿನಂದನ್ ಹರೀಶ್ ಕುಮಾರ್

Suddi Udaya

ನಾರಾವಿ-ಅಳದಂಗಡಿ ಮಹಾಶಕ್ತಿ ಕೇಂದ್ರದ ವತಿಯಿಂದ ಮಾಜಿ ಶಾಸಕರಾದ ವಸಂತ ಬಂಗೇರರ ನಿಧನಕ್ಕೆ ಶ್ರದ್ಧಾಂಜಲಿ

Suddi Udaya

ಆ.1: ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ತಾಲೂಕಿನ 5000 ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀರಾಮೋತ್ಸವ: ಕರಸೇವಕರಿಗೆ ಗೌರವಾರ್ಪಣೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ಕಂಪ್ಯೂಟರ್‌ ಟ್ಯಾಲಿ ತರಬೇತಿ

Suddi Udaya
error: Content is protected !!