July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

ಮಡಂತ್ಯಾರು: ಶಿಕ್ಷಕರು ಅಂಧಕಾರದಿಂದ ಜ್ಞಾನದೆಡೆಗೆ ಕೊಂಡೊಯ್ಯುವ ಕಾರ್ಯವನ್ನು ಮಾಡುತ್ತಾರೆ.ಆದರೆ ಬದಲಾದ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳು ತಂತ್ರಜ್ಞಾನ ಮತ್ತು ಅದರ ಬಳಕೆಯ ಕುರಿತು ತಿಳಿದುಕೊಳ್ಳುವುದು ಉತ್ತಮ. ಪ್ರತಿಯೊಬ್ಬನಲ್ಲೂ ಸುಪ್ತವಾಗಿರುವ ಜ್ಞಾನವನ್ನು ಬಳಸಿಕೊಂಡು ಸಾರ್ವಕಾಲಿಕ ಸತ್ಯಗಳಾದ ದಯೆ, ಕರುಣೆ, ಪ್ರೀತಿ, ವಿಶ್ವಾಸದಿಂದ ಜಗತ್ತನ್ನು ನೋಡಿಕೊಳ್ಳವಂತಾಗಬೇಕು ಎಂದು ಉಜಿರೆ ಎಸ್ ಡಿ ಎಂ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಕೇಶವ.ಟಿ.ಎನ್ ಹೇಳಿದರು.

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ಪ್ರಸ್ತುತ ವರ್ಷದ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಮಡಂತ್ಯಾರು ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಗಳ ಜೊತೆ ಕಾರ್ಯದರ್ಶಿಗಳಾದ ವಂ| ಸ್ಟ್ಯಾನಿ ಗೋವಿಯಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾಲೇಜಿನ ಪ್ರಾಚಾರ್ಯರಾದ ಸೂರಜ್ ಚಾರ್ಲ್ಸ್ ವಿದ್ಯಾರ್ಥಿ ನಾಯಕರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ವಿದ್ಯಾರ್ಥಿ ಸಂಘದ ನಿರ್ದೇಶಕಿ ರೆನಿಶಾ ವೇಗಸ್ ಸ್ವಾಗತಿಸಿ, ಉಪನಿರ್ದೇಶಕಿ ಅನು ವಂದಿಸಿ, ವಿದ್ಯಾರ್ಥಿ ನಾಯಕ ಶಾಶ್ವತ್ ಪ್ರೀತಂ ಅನಿಸಿಕೆ ಹಂಚಿಕೊಂಡರು. ವಿದ್ಯಾರ್ಥಿಗಳಾದ ಅವಿನ್ ಹಾಗೂ ಜೊತ್ಸ್ನ್ ಜೋಸ್ ಕಾರ್ಯಕ್ರಮ ನಿರೂಪಿಸಿದರು,.

Related posts

ಶ್ರೀ ದುರ್ಗಾ ಫರ್ನಿಚರ್ ಮತ್ತು ಇಲೆಕ್ಟ್ರಾನಿಕ್ಸ್‌ನಲ್ಲಿ ಖರೀದಿಗೆ ವಿಶೇಷ ಡಿಸ್ಕೌಂಟ್

Suddi Udaya

ಉಜಿರೆ: ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿಯ 11ನೇ ಸಹಾಯಧನ ಹಸ್ತಾಂತರ

Suddi Udaya

ಸಹಾಯ ಹಸ್ತ –ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರಿಂದ ತಯಾರಿಸಲಾದ ಉತ್ಪನ್ನಗಳ ಮಾರಾಟ ಯೋಜನೆ

Suddi Udaya

ಮಕ್ಕಾದಲ್ಲಿ ನಿಧನ ಹೊಂದಿದ ಉಮ್ರಾ ಯಾರ್ತಾರ್ಥಿಯ ಅಂತ್ಯಸಂಸ್ಕಾರ‌ಕ್ಕೆ ನೇತೃತ್ವ ವಹಿಸಿದ ಕಿಲ್ಲೂರಿನ ಅಬ್ದುಲ್ ಅಝೀಝ್ ಝುಹುರಿ

Suddi Udaya

ನಾವೂರು: ನಮ್ಮ ನಡಿಗೆ ತ್ಯಾಜ್ಯ ಮುಕ್ತ ಕಡೆಗೆ ಸ್ವಚ್ಚತಾ ಆಂದೋಲನ

Suddi Udaya

ಕೋಟ್ಯಾನ್ ಫ್ರೆಂಡ್ಸ್ ವಾಟ್ಸಾಪ್ ಗ್ರೂಪಿನಿಂದ ಎರಡನೇ ಸೇವಾ ಯೋಜನೆ ಹಸ್ತಾಂತರ

Suddi Udaya
error: Content is protected !!