32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಶ್ರೀ. ಧ. ಮಂ. ಪ. ಪೂ.ಕಾಲೇಜಿನಲ್ಲಿ ವಾಣಿಜ್ಯ ಸಂಘ ಉದ್ಘಾಟನೆ

ಉಜಿರೆ : ಶ್ರೀ. ಧ. ಮಂ.ಪ. ಪೂ. ಕಾಲೇಜಿನಲ್ಲಿ ವಾಣಿಜ್ಯ ಸಂಘ ಉದ್ಘಾಟನೆ ಹಾಗೂ ಲೆಕ್ಕ ಪರಿಶೋಧಕರ ದಿನಾಚರಣೆಯನ್ನು ಆಚರಿಸಲಾಯಿತು. ಮಂಗಳೂರು ಪಿರೇರಿಯನ್ ಸರ್ವಿಸಸ್ ನ ಮ್ಯಾನೇಜರ್ ಹಾಗೂ ಕಾಲೇಜಿನ ಹಿರಿಯ ವಿಧ್ಯಾರ್ಥಿನಿ ಸಿ. ಎ. ಸುಕನ್ಯಾ ಕಾಮತ್ ಉದ್ಘಾಟನೆ ನೆರವೇರಿಸಿ ವಿಧ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಸಂಘದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕೆಂದು ತಿಳಿಸಿದರು.

ಇವರು ಅಯ್ಕೆಯ ವಿಷಯದಲ್ಲಿ ಇತರ ವಿಧ್ಯಾರ್ಥಿಗಳ ಆಯ್ಕೆಯನ್ನು ಸ್ವೀಕರಿಸುವುದಕ್ಕಿಂತ ತಮಗೆ ಸಮಂಜಸವಾದ ಅಯ್ಕೆಯನ್ನು ಸ್ವೀಕರಿಸಬೇಕು. ವಿದ್ಯಾರ್ಥಿಗಳು ಕಾಲೇಜಿನಲ್ಲಿ ಸಿಗುವ ಎಲ್ಲಾ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಬೆಳೆಯಬೇಕು. ಇಂದು ವಾಣಿಜ್ಯ ವಿದ್ಯಾರ್ಥಿಗಳಿಗೆ ಹಲವಾರು ವ್ಯತ್ತಿ ಅವಕಾಶಗಳಿವೆ ಆದರೆ ಕೌಶಲ್ಯಕ್ಕೆ ಮಹತ್ವ ನೀಡಿದರೆ ಮಾತ್ರ ಎಷ್ಟು ಎತ್ತರಕ್ಕೂ ಬೆಳೆಯಬಹುದು ಎಂದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಫ್ರೊಪೆಸರ್ ಪ್ರಮೋದ್ ಕುಮಾರ್ ವಹಿಸಿದ್ದರು. ಇದರು ಬಡತನದಿಂದ ಮೇಲೆ ಬಂದು ವ್ಯತ್ತಿಯಿಂದ ಶೇರು ಮಾರುಕಟ್ಟೆಯನ್ನು ಆಳಿದ ಹಲವಾರು ಶ್ರೀಮಂತರ ಸಾಹಸಗಾತೆಯನ್ನು ವಿವರಿಸಿ ವಿಧ್ಯಾರ್ಥಿಗಳಿಗೆ ಶುಭ ಹಾರೈಸಿದರು.


ಕಾರ್ಯಕ್ರಮದಲ್ಲಿ ವಿಭಾಗ ಮುಖ್ಯಸ್ಥೆ ಬೇಬಿ ಎನ್. ಸಂಯೋಜಕಿ ಸವಿತ ಉಪನ್ಯಾಸಕಿಯರಾದ ಪ್ರಭಾವತಿ, ಶೋಭ ಹಾಗೂ ಅಶ್ವಿನಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವಿಧ್ಯಾರ್ಥಿನಿ ಅನಿಕ ತಂಡ ಪ್ರಾರ್ಥಿಸಿ ಸಂಘದ ಅಧ್ಯಕ್ಷ ಧರ್ಮತೇಜ ಸ್ವಾಗತಿಸಿ ಕಾರ್ಯದರ್ಶಿ ಸಿರಿ ಧನ್ಯವಾದ ನೀಡಿದರು. ವಿದ್ಯಾರ್ಥಿನಿಯರಾದ ಹಂಸಿನಿ ಭಿಡೆ ಹಾಗೂ ಅಂಶುಲಾ ಕಾರ್ಯಕ್ರಮ ನಿರೂಪಿಸಿದರು.

Related posts

ಶಾಸಕ ಹರೀಶ್ ಪೂಂಜರಿಗೆ ನೋಟಿಸ್ ನೀಡಿ, ಬಂಧನ ಕೈ ಬಿಟ್ಟು ಸಂಜೆ ಹಿಂದಿರುಗಿದ ಪೊಲೀಸರು; ರಾತ್ರಿ ಹೇಳಿಕೆ ನೀಡಲು ಬೆಳ್ತಂಗಡಿ ಠಾಣೆಗೆ ಬಂದ ಶಾಸಕ ಹರೀಶ್ ಪೂಂಜ

Suddi Udaya

ಫೆ 3 -7: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ: ಸಂತಾನಪ್ರದ ನಾಗಕ್ಷೇತ್ರದಲ್ಲಿ ಶ್ರೀ ನಾಗದೇವರ ಬಿಂಬ ಹಾಗೂ ನಾಗರಕ್ತೇಶ್ವರಿ ಪ್ರತಿಷ್ಠೆ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಧುಮೇಹ ಪರೀಕ್ಷೆಯಲ್ಲಿ ನಿಖರ ವರದಿ ನೀಡಬಲ್ಲ ಮೆಶಿನ್ ಅಳವಡಿಕೆ

Suddi Udaya

ಪಡಂಗಡಿ: ಸಿಡಿಲು ಬಡಿದು ಕಟ್ಟಡಕ್ಕೆ ಬೆಂಕಿ

Suddi Udaya

ಬೆಳ್ತಂಗಡಿ: ಪಹಣಿಗಳಿಗೆ ಆಧಾರ್ ಜೋಡನೆ ಆಂದೋಲನ

Suddi Udaya
error: Content is protected !!