22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಲಿಂಗ ಸೂಕ್ಷ್ಮತೆ ಅರಿವು ತರಬೇತಿ

ಉಜಿರೆ: ಹದಿಹರೆಯದ ವಿದ್ಯಾರ್ಥಿಗಳು ತಮ್ಮ ವಯಸ್ಸಿಗನುಗುಣವಾಗಿ ಬಾಲಿಶ ವರ್ತನೆ ತೋರದೆ ಹಾಗೂ ದುಶ್ಚಟಗಳಿಗೆ ಬಲಿಯಾಗದೆ ಸರಿಯಾದ ಹೆಜ್ಜೆಯನ್ನು ಇಡಬೇಕು. ನಮ್ಮ ವಿವೇಚನೆ ನಮ್ಮ ಕೈಯಲ್ಲಿ ಇರಬೇಕು. ಎಲ್ಲ ಯುವಕ ಯುವತಿಯರು ಬಾಹ್ಯ ಆಕರ್ಷಣೆಗೆ ಒಳಗಾಗದೆ ನಮ್ಮ ಸಾಧನೆಯ ಗುರಿಮುಟ್ಟುವ ಕಾರ್ಯಮಾಡಬೇಕು ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್. ಬಿ. ಹೇಳಿದರು.

ಇವರು ಕಾಲೇಜಿನ ಮಾನವ ಸಂಪನ್ಮೂಲ ಅಭಿವೃದ್ಧಿ ಕೋಶ ಹಾಗೂ ಮಹಿಳಾ ಅಭಿವೃದ್ಧಿ ಕೋಶಗಳ ವತಿಯಿಂದ ಎರಡು ದಿನಗಳ ಕಾಲ ನಡೆಯುವ ಲಿಂಗ ಸೂಕ್ಷ್ಮತೆ ಅರಿವು ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಸಶಕ್ತ ಬದುಕಿಗೆ ಮುಖ್ಯವಾಗಿ ಆರೋಗ್ಯ ಹಾಗೂ ಶಿಕ್ಷಣ ಪ್ರಧಾನ. ಯುವಕ ಯುವತಿಯರು ಜೀವನ ಕೌಶಲ್ಯ ಶಿಕ್ಷಣ ಪಡೆಯಬೇಕು. ದೈಹಿಕ ಹಾಗೂ ಮಾನಸಿಕ ಬದಲಾವಣೆಗಳನ್ನು ನಿಭಾಯಿಸುವುದು ಮತ್ತು ಅದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ತರಬೇತುದಾರರಾದ ಮಂಗಳೂರಿನ ಸಂವಾದ ಸಹಯಾನ ಯೋಜನೆಯ ಯುವ ಕ್ರಿಯಾ ವಿಭಾಗದ ಸಂಚಾಲಕರಾದ ಮಂಜುಳಾ ಸುನಿಲ್ ಹೇಳಿದರು.

ಸಂವಾದ ಸಂಸ್ಥೆಯ ತರಬೇತುದಾರರಾದ ಯೋಗೀಶ್ ಮಲ್ಲಿಗೆಮಾಡು , ಕೃಷ್ಣ ಆಳ್ವ , ಉದಯ ಕುಮಾರ್ , ಮಲ್ಲಿಕಾ ಜ್ಯೋತಿಗುಡ್ಡೆ ಹಾಗೂ ಪವಿತ್ರಾ ಜ್ಯೋತಿಗುಡ್ಡೆ ಇವರು ಉಪಸ್ಥಿತರಿದ್ದರು.

ಕಾಲೇಜಿನ ಮಾನವ ಸಂಪನ್ಮೂಲ ಅಭಿವೃದ್ಧಿ ಕೋಶದ ಸಂಚಾಲಕ ಡಾ. ಪ್ರಸನ್ನಕುಮಾರ ಐತಾಳ್ ಕಾರ್ಯಕ್ರಮ ಸಂಯೋಜಿಸಿದರು.
ಮಹಿಳಾ ಅಭಿವೃದ್ಧಿ ಕೋಶದ ಸದಸ್ಯರಾದ ಭೌತಶಾಸ್ತ್ರ ಉಪನ್ಯಾಸಕಿ ಅಮೃತಾ ಶೆಟ್ಟಿ ನಿರೂಪಿಸಿ , ಮನಃಶಾಸ್ತ್ರ ವಿಭಾಗದ ಮುಖ್ಯಸ್ಥೆ ಶ್ಯಾಮಿಲಾ ವಂದಿಸಿದರು.

Related posts

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆವರಣ ಗೋಡೆ ಕುಸಿತ: ನೀರಿನ ಪಂಪ್ ಶೆಡ್ ಹಾಗೂ ವಿದ್ಯುತ್ ಕಂಬಕ್ಕೆ ಹಾನಿ

Suddi Udaya

ಸ್ವಂತ ಮನೆಯ ಕನಸನ್ನು ನನಸಗಿಸಲು “ಡ್ರೀಮ್ ಡೀಲ್ ಗ್ರೂಪ್” ವಿಶಿಷ್ಟ ಸೇವಿಂಗ್ಸ್ ಪ್ಲಾನ್ ಯೋಜನೆ – ಕೇವಲ 1 ಸಾವಿರ ಪಾವತಿಸಿ ಮನೆ, ಕಾರು, ಬೈಕ್, ಚಿನ್ನ ಗೆಲ್ಲಿರಿ

Suddi Udaya

ನಾಳೆ (ಎ.30) ನಾರಾವಿ ಉಪ ವಲಯಾರಣ್ಯಾಧಿಕಾರಿ ಕುಶಾಲಪ್ಪ ಗೌಡರವರಿಗೆ ಸೇವಾ ನಿವೃತ್ತಿ

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ “ಶೌರ್ಯ” ವಿಪತ್ತು ಘಟಕದ ಕೋರ್ ಕಮಿಟಿಯ ಸಭೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ದ್ವೇಷ ಭಾಷಣ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ರವರಿಗೆ ಜಾಮೀನು ಮಂಜೂರು

Suddi Udaya
error: Content is protected !!