23.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಎಕ್ಸೆಲ್ ನಲ್ಲಿ ಎನ್ ಡಿ ಎ ತರಗತಿಗಳ ಓರಿಯಂಟೇಶನ್

ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜು ಗುರುವಾಯನಕೆರೆ ಇಲ್ಲಿನ ಎನ್ ಡಿ ಎ ತರಗತಿಗಳ ಓರಿಯಂಟೇಶನ್ ವಿದ್ಯಾ ಸಾಗರ ಕ್ಯಾಂಪಸ್ ನಲ್ಲಿ ನಡೆಯಿತು.
ಭಾರತೀಯ ಸೇನೆಯ ವಿಶ್ರಾಂತ ಮೇಜರ್ ಜನರಲ್ ಎಂ.ವಿ ಭಟ್ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡರು.

ಯಾವುದೇ ಸಾಧನೆ ಮಾಡಲು ಏಕಾಗ್ರತೆ ಬೇಕು. ಏಕಾಗ್ರತೆ ಹಾಗೂ ಇಚ್ಛಾ ಶಕ್ತಿ ಸಾಧಕನಾಗಿರಬೇಕಾದ ಎರಡು ಪ್ರಮುಖ ಅರ್ಹತೆಗಳು ಎಂದು ಭಾರತೀಯ ಸೇನೆಯ ವಿಶ್ರಾಂತ ಜನರಲ್ ಮೇಜರ್ ಎಂ.ವಿ ಭಟ್ ಹೇಳಿದರು.


ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ಮಾತನಾಡಿ, ದೇಶ ಸೇವೆ ಮಾಡುವ ಉನ್ನತ ಮಟ್ಟದ ಅವಕಾಶ, ಎನ್ ಡಿ ಎ ಕ್ಲಿಯರ್ ಮಾಡಿದ ವಿದ್ಯಾರ್ಥಿಗಳಿಗೆ ಲಭಿಸುತ್ತದೆ. ಹೀಗಾಗಿ ಎನ್ ಡಿ ಎ ಪರೀಕ್ಷೆಗಳನ್ನು ಗಂಭೀರವಾಗಿ ಸ್ವೀಕರಿಸಿ ಎಂದರು.

ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ ಮಾತನಾಡಿ, ದೇಶ ಸೇವೆಯೇ ಈಶ ಸೇವೆ ಎಂದು ತಿಳಿದು, ಬದುಕಲು ಎನ್ ಡಿ ಎ ತರಬೇತಿ ಅವಕಾಶ ಮಾಡಿಕೊಡುತ್ತದೆ ಎಂದು ಹೇಳಿದರು. ಎನ್ ಡಿ ಎ ಸಂಯೋಜಕ ಜೋಸ್ಟಮ್ ಎ ಟಿ ,ಎನ್. ಡಿ. ಎ ತರಬೇತಿಯ ಬಗ್ಗೆ ವಿವರವಾಗಿ ತಿಳಿಸಿದರು.
ವಿದ್ಯಾರ್ಥಿಗಳಾದ ವರ್ಷಾ ಎನ್ ಸ್ವಾಗತಿಸಿದರು. ರಕ್ಷಾ ವೆಂಕಟ್ ಮತ್ತು ರೀತು ಕೆ ನಿರೂಪಿಸಿದರು. ಸುಧನ್ವ ವಂದಿಸಿದರು.

Related posts

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಪೋಟೋಗ್ರಫಿ ಮತ್ತು ವೀಡಿಯೋಗ್ರಫಿ ತರಬೇತಿಯ ಸಮಾರೋಪ ಸಮಾರಂಭ ಹಾಗೂ ವಿಶ್ವ ಫೋಟೋಗ್ರಾಫರ್ಸ್‌ ದಿನಾಚರಣೆ

Suddi Udaya

ನಾವೂರು ದೇವಸ್ಥಾನದಲ್ಲಿ ವಿಷ್ಣು ಸಹಸ್ರನಾಮ ಪಠಣ: ದಶಮಾನೋತ್ಸವ ಸಂಪನ್ನ : ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅರಸಿನಮಕ್ಕಿ: ಧರಣಿ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ದಾಖಲಾತಿ ಆರಂಭ

Suddi Udaya

ಬಟ್ಲಡ್ಕ ಜುಮಾ ಮಸೀದಿಯ ಆಡಳಿತ ಸಮಿತಿಯ ಸದಸ್ಯರಾದ ಅಬ್ದುಲ್ ಖಾದರ್, ಫಾರೂಕ್ ರಿಗೆ ಬಟ್ಲಡ್ಕ ಜಮಾಅತ್ ವತಿಯಿಂದ ಸನ್ಮಾನ

Suddi Udaya

ಮುಂಡಾಜೆ: ಪಡೀಲು ಆನಂದ ನಾಯ್ಕ ನಿಧನ

Suddi Udaya
error: Content is protected !!