22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಎಕ್ಸೆಲ್ ನಲ್ಲಿ ಎನ್ ಡಿ ಎ ತರಗತಿಗಳ ಓರಿಯಂಟೇಶನ್

ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜು ಗುರುವಾಯನಕೆರೆ ಇಲ್ಲಿನ ಎನ್ ಡಿ ಎ ತರಗತಿಗಳ ಓರಿಯಂಟೇಶನ್ ವಿದ್ಯಾ ಸಾಗರ ಕ್ಯಾಂಪಸ್ ನಲ್ಲಿ ನಡೆಯಿತು.
ಭಾರತೀಯ ಸೇನೆಯ ವಿಶ್ರಾಂತ ಮೇಜರ್ ಜನರಲ್ ಎಂ.ವಿ ಭಟ್ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡರು.

ಯಾವುದೇ ಸಾಧನೆ ಮಾಡಲು ಏಕಾಗ್ರತೆ ಬೇಕು. ಏಕಾಗ್ರತೆ ಹಾಗೂ ಇಚ್ಛಾ ಶಕ್ತಿ ಸಾಧಕನಾಗಿರಬೇಕಾದ ಎರಡು ಪ್ರಮುಖ ಅರ್ಹತೆಗಳು ಎಂದು ಭಾರತೀಯ ಸೇನೆಯ ವಿಶ್ರಾಂತ ಜನರಲ್ ಮೇಜರ್ ಎಂ.ವಿ ಭಟ್ ಹೇಳಿದರು.


ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ಮಾತನಾಡಿ, ದೇಶ ಸೇವೆ ಮಾಡುವ ಉನ್ನತ ಮಟ್ಟದ ಅವಕಾಶ, ಎನ್ ಡಿ ಎ ಕ್ಲಿಯರ್ ಮಾಡಿದ ವಿದ್ಯಾರ್ಥಿಗಳಿಗೆ ಲಭಿಸುತ್ತದೆ. ಹೀಗಾಗಿ ಎನ್ ಡಿ ಎ ಪರೀಕ್ಷೆಗಳನ್ನು ಗಂಭೀರವಾಗಿ ಸ್ವೀಕರಿಸಿ ಎಂದರು.

ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ ಮಾತನಾಡಿ, ದೇಶ ಸೇವೆಯೇ ಈಶ ಸೇವೆ ಎಂದು ತಿಳಿದು, ಬದುಕಲು ಎನ್ ಡಿ ಎ ತರಬೇತಿ ಅವಕಾಶ ಮಾಡಿಕೊಡುತ್ತದೆ ಎಂದು ಹೇಳಿದರು. ಎನ್ ಡಿ ಎ ಸಂಯೋಜಕ ಜೋಸ್ಟಮ್ ಎ ಟಿ ,ಎನ್. ಡಿ. ಎ ತರಬೇತಿಯ ಬಗ್ಗೆ ವಿವರವಾಗಿ ತಿಳಿಸಿದರು.
ವಿದ್ಯಾರ್ಥಿಗಳಾದ ವರ್ಷಾ ಎನ್ ಸ್ವಾಗತಿಸಿದರು. ರಕ್ಷಾ ವೆಂಕಟ್ ಮತ್ತು ರೀತು ಕೆ ನಿರೂಪಿಸಿದರು. ಸುಧನ್ವ ವಂದಿಸಿದರು.

Related posts

ಕಾರಿಂಜ ಶ್ರೀ ವನಶಾಸ್ತಾರ ಶ್ರೀ ವೀರಭದ್ರ ಸ್ವಾಮಿ ದೇವರ ಪುನರ್‌ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಉಜಿರೆ ವಲಯದ ಜ್ಞಾನಶ್ರೀ ಜ್ಞಾನ ವಿಕಾಸ ಕೇಂದ್ರದಲ್ಲಿ ಮಲ್ಲಿಗೆ ಕೃಷಿ ಬಗ್ಗೆ ತರಬೇತಿ ಹಾಗೂ ಮಲ್ಲಿಗೆ ಗಿಡ ವಿತರಣಾ ಕಾರ್ಯಕ್ರಮ

Suddi Udaya

ವಲಯ ಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟ: ಬಳಂಜ ಪ್ರೌಢ ಶಾಲೆ ಪ್ರಥಮ

Suddi Udaya

ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮುಂಬೈ, ಗೋವಾ, ಮಹಾರಾಷ್ಟ ನಬಾರ್ಡ್ ಬ್ಯಾಂಕ್ ಅಧಿಕಾರಿಯವರಿಂದ ಸಿಡ್ಬಿ ಸಾಲ ಪಡೆದು ಸ್ವ ಉದ್ಯೋಗ ನಡೆಸುತ್ತಿರುವ ಘಟಕಕ್ಕೆ ಭೇಟಿ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದ ಎಂಎಸ್ ದೇವಿಗೆ ಅಭಿನಂದನೆ

Suddi Udaya
error: Content is protected !!