September 6, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಎಕ್ಸೆಲ್ ನಲ್ಲಿ ಎನ್ ಡಿ ಎ ತರಗತಿಗಳ ಓರಿಯಂಟೇಶನ್

ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜು ಗುರುವಾಯನಕೆರೆ ಇಲ್ಲಿನ ಎನ್ ಡಿ ಎ ತರಗತಿಗಳ ಓರಿಯಂಟೇಶನ್ ವಿದ್ಯಾ ಸಾಗರ ಕ್ಯಾಂಪಸ್ ನಲ್ಲಿ ನಡೆಯಿತು.
ಭಾರತೀಯ ಸೇನೆಯ ವಿಶ್ರಾಂತ ಮೇಜರ್ ಜನರಲ್ ಎಂ.ವಿ ಭಟ್ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡರು.

ಯಾವುದೇ ಸಾಧನೆ ಮಾಡಲು ಏಕಾಗ್ರತೆ ಬೇಕು. ಏಕಾಗ್ರತೆ ಹಾಗೂ ಇಚ್ಛಾ ಶಕ್ತಿ ಸಾಧಕನಾಗಿರಬೇಕಾದ ಎರಡು ಪ್ರಮುಖ ಅರ್ಹತೆಗಳು ಎಂದು ಭಾರತೀಯ ಸೇನೆಯ ವಿಶ್ರಾಂತ ಜನರಲ್ ಮೇಜರ್ ಎಂ.ವಿ ಭಟ್ ಹೇಳಿದರು.


ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ಮಾತನಾಡಿ, ದೇಶ ಸೇವೆ ಮಾಡುವ ಉನ್ನತ ಮಟ್ಟದ ಅವಕಾಶ, ಎನ್ ಡಿ ಎ ಕ್ಲಿಯರ್ ಮಾಡಿದ ವಿದ್ಯಾರ್ಥಿಗಳಿಗೆ ಲಭಿಸುತ್ತದೆ. ಹೀಗಾಗಿ ಎನ್ ಡಿ ಎ ಪರೀಕ್ಷೆಗಳನ್ನು ಗಂಭೀರವಾಗಿ ಸ್ವೀಕರಿಸಿ ಎಂದರು.

ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ ಮಾತನಾಡಿ, ದೇಶ ಸೇವೆಯೇ ಈಶ ಸೇವೆ ಎಂದು ತಿಳಿದು, ಬದುಕಲು ಎನ್ ಡಿ ಎ ತರಬೇತಿ ಅವಕಾಶ ಮಾಡಿಕೊಡುತ್ತದೆ ಎಂದು ಹೇಳಿದರು. ಎನ್ ಡಿ ಎ ಸಂಯೋಜಕ ಜೋಸ್ಟಮ್ ಎ ಟಿ ,ಎನ್. ಡಿ. ಎ ತರಬೇತಿಯ ಬಗ್ಗೆ ವಿವರವಾಗಿ ತಿಳಿಸಿದರು.
ವಿದ್ಯಾರ್ಥಿಗಳಾದ ವರ್ಷಾ ಎನ್ ಸ್ವಾಗತಿಸಿದರು. ರಕ್ಷಾ ವೆಂಕಟ್ ಮತ್ತು ರೀತು ಕೆ ನಿರೂಪಿಸಿದರು. ಸುಧನ್ವ ವಂದಿಸಿದರು.

Related posts

ಮೇ 12 : ರೂ.2.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಕೊಕ್ರಾಡಿ ಪ್ರೌಢಶಾಲೆ-ಕಾಲೇಜಿನ ನೂತನ ಕೊಠಡಿಗಳ ಉದ್ಘಾಟನೆ

Suddi Udaya

ರಾಜ್ಯಮಟ್ಟದ ಹ್ಯಾಂಡ್‌ಬಾಲ್ : ಉಜಿರೆಯ ಎಸ್.ಡಿ.ಎಂ ಗೆ ಅವಳಿ ಪ್ರಶಸ್ತಿ

Suddi Udaya

ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಶಿವಕುಮಾರ್ ಕೆ.ಎಸ್. ರವರು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಯಾಗಿ ಭಡ್ತಿಗೊಂಡು ಮಂಗಳೂರಿಗೆ ವರ್ಗಾವಣೆ, ಬಿಳ್ಕೋಡುಗೆ ಸಮಾರಂಭ

Suddi Udaya

ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ನೂತನ ಕಾರ್ಯದರ್ಶಿಯಾಗಿ ಶಿಲ್ಪಾ ಕಾಶಿಪಟ್ಣ ಆಯ್ಕೆ

Suddi Udaya

ಉಜಿರೆ: ಎಸ್‌ಡಿಪಿಐ ಕಕ್ಕೇಜಾಲ್ ಬ್ರಾಂಚ್ ವತಿಯಿಂದ ರಕ್ತದಾನ ಶಿಬಿರ

Suddi Udaya
error: Content is protected !!