25.7 C
ಪುತ್ತೂರು, ಬೆಳ್ತಂಗಡಿ
March 7, 2026
ಧಾರ್ಮಿಕ

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಮಹಾಸಭೆ

ಬೆಳ್ತಂಗಡಿ: ಅಂಗಸಂಸ್ಥೆಯ ಚಟುವಟಿಕೆಗಳಲ್ಲಿ ಕೂಟ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ವಿಶೇಷವಾಗಿ ಯುವಕರು ಕೂಟ ಮಹಾಜಗತ್ತಿನ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಗುರು ನರಸಿಂಹದೇವರ ಅನುಗ್ರಹದಿಂದ ಕೂಟ ಬಂಧುಗಳು ತಮ್ಮ ಜೀವನದಲ್ಲಿ ಹೆಚ್ಚಿನ ಯಶಸ್ಸುಗಳಿಸುವಂತಾಗಲಿ ಎಂದು ಶ್ರೀ ಗುರು ನರಸಿಂಹ ದೇವಸ್ಥಾನ ಸಾಲಿಗ್ರಾಮದ ಆಡಳಿತ ಮಂಡಳಿ ಸದಸ್ಯ ಸದಾಶಿವ ಐತಾಳ್ ಗುರು ಸಂದೇಶ ನೀಡಿದರು.

ಅವರು ಕೂಟ ಮಹಾಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಮಹಾಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಬೆಳ್ತಂಗಡಿ ಅಂಗ ಸಂಸ್ಥೆಯ ವಿಶ್ವನಾಥ ಹೊಳ್ಳ ಮಜ್ಜನಿಬೈಲು ಅಧ್ಯಕ್ಷತೆಯನ್ನು ವಹಿಸಿದ್ದರು.

ಅಂಗಸಂಸ್ಥೆಯ ಸ್ಥಾಪಕ ಅಧ್ಯಕ್ಷ ವೆಂಕಟರಾಯ ಅಡೂರು, ಅಂಗಸಂಸ್ಥೆಯ ನಿಕಟ ಪೂರ್ವ ಅಧ್ಯಕ್ಷ ಬಿ. ವಾಸುದೇವ ಸೋಮಯಾಜಿ ಹಾಗೂ ಮಹಿಳಾ ವೇದಿಕೆಯ ಅಧ್ಯಕ್ಷ ನಳಿನಿ ಎಸ್ ಹೊಳ್ಳ ಉಪಸ್ಥಿತರಿದ್ದರು.

ಕಾರ್ಯದರ್ಶಿ ವಿಷ್ಣು ಪ್ರಕಾಶ್ ಅಂಗಸಂಸ್ಥೆ ನಡೆಸಿದ ವಿವಿಧ ಚಟುವಟಿಕೆಗಳ ವರದಿಯನ್ನು ಮಂಡಿಸಿದರು. ಕೋಶಾಧಿಕಾರಿ ಪ್ರಕಾಶ್ ನಾರಾಯಣ ಲೆಕ್ಕಪತ್ರಗಳನ್ನು ಮಂಡಿಸಿ ಮುಂಗಡ ಪತ್ರಕ್ಕೆ ಸಭೆಯ ಒಪ್ಪಿಗೆ ಪಡೆದರು. ಬಿಲಿಯನ್ ಫೌಂಡೇಶನ್ ಪ್ರತಿನಿಧಿ ಅರವಿಂದ ಕಾರಂತ ಫೌಂಡೇಶನ್ ಚಟುವಟಿಕೆಗಳ ಕುರಿತು ವರದಿಯನ್ನು ಪ್ರಸ್ತುತಪಡಿಸಿದರು. ಮಹಿಳಾ ವೇದಿಕೆಯ ಕಾರ್ಯದರ್ಶಿ ಅಕ್ಷತಾ ಎಸ್ ಅಡೂರು ಮಹಿಳಾ ವೇದಿಕೆಯ ವಾರ್ಷಿಕ ವರದಿಯನ್ನು ಮಂಡಿಸಿದರು.

ವಿವಿಧ ಕ್ಷೇತ್ರಗಳಲ್ಲಿ ಶ್ರೇಷ್ಠ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಉಪಾಧ್ಯಕ್ಷ ರಮೇಶ್ ಹೊಳ್ಳ ಆರಂಬೊಡಿಯವರು ಸ್ವಾಗತಿಸಿದರು. ಕಾರ್ಯದರ್ಶಿ ಶ ವಿಷ್ಣು ಪ್ರಕಾಶ್ ಧನ್ಯವಾದ ನೀಡಿದರು. ಅನುರಾಧ ಕೆ. ರಾವ್ ನಿರೂಪಿಸಿದರು.

Related posts

ಬಳಂಜ: ಬೋಂಟ್ರೊಟ್ಟುಗುತ್ತು ದೈವಸ್ಥಾನ ಕ್ಷೇತ್ರದಲ್ಲಿ ಚಾವಡಿಯಲ್ಲಿ ದೈವಗಳ ಪ್ರತಿಷ್ಠೆ ,ಕಲಶಾಭಿಷೇಕ: ಸಂಜೆ ಬಳಂಜದಿಂದ ಬೊಂಟ್ರೋಟ್ಟು ಕ್ಷೇತ್ರಕ್ಕೆ ಹಸಿರುವಾಣಿ ಮೆರವಣಿಗೆ

Suddi Udaya

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ಮಹಾಗೋಪುರ, ಸಮುದಾಯ ಭವನದ ಲೋಕಾರ್ಪಣೆಯ ಪೂರ್ವಭಾವಿ ಸಭೆ

Suddi Udaya

ರಕ್ತೇಶ್ವರಿಪದವು: ಭಜನಾ ವಾರ್ಷಿಕೋತ್ಸವ ವಿಶೇಷ ಭಜನೆ ಹಾಗೂ ವಿಶೇಷ ಪೂಜೆ ಮತ್ತು ಸನ್ಮಾನ

Suddi Udaya

ಭಕ್ತಿ ಪಾರಮ್ಯಕ್ಕೆ ಅಣಿಯಾದ ಮಲೆಂಗಲ್ಲು ಬ್ರಹ್ಮಕಲಶೋತ್ಸವ

Suddi Udaya

ನಾವೂರು ಜಾತ್ರಾ ಮಹೋತ್ಸವ: ಡಾ. ವೀಣಾ ಬನ್ನಂಜೆ ಅವರಿಂದ ಮೂರನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನಿಂದ ಉಪ್ಪಾರಪಳಿಕೆ ಶ್ರೀ ಕೃಷ್ಣ ಭಜನಾ ಮಂದಿರದ ನಿರ್ಮಾಣಕ್ಕೆ ದೇಣಿಗೆ ಹಸ್ತಾಂತರ

Suddi Udaya
error: Content is protected !!