July 23, 2026
ಧಾರ್ಮಿಕ

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಮಹಾಸಭೆ

ಬೆಳ್ತಂಗಡಿ: ಅಂಗಸಂಸ್ಥೆಯ ಚಟುವಟಿಕೆಗಳಲ್ಲಿ ಕೂಟ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ವಿಶೇಷವಾಗಿ ಯುವಕರು ಕೂಟ ಮಹಾಜಗತ್ತಿನ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಗುರು ನರಸಿಂಹದೇವರ ಅನುಗ್ರಹದಿಂದ ಕೂಟ ಬಂಧುಗಳು ತಮ್ಮ ಜೀವನದಲ್ಲಿ ಹೆಚ್ಚಿನ ಯಶಸ್ಸುಗಳಿಸುವಂತಾಗಲಿ ಎಂದು ಶ್ರೀ ಗುರು ನರಸಿಂಹ ದೇವಸ್ಥಾನ ಸಾಲಿಗ್ರಾಮದ ಆಡಳಿತ ಮಂಡಳಿ ಸದಸ್ಯ ಸದಾಶಿವ ಐತಾಳ್ ಗುರು ಸಂದೇಶ ನೀಡಿದರು.

ಅವರು ಕೂಟ ಮಹಾಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಮಹಾಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಬೆಳ್ತಂಗಡಿ ಅಂಗ ಸಂಸ್ಥೆಯ ವಿಶ್ವನಾಥ ಹೊಳ್ಳ ಮಜ್ಜನಿಬೈಲು ಅಧ್ಯಕ್ಷತೆಯನ್ನು ವಹಿಸಿದ್ದರು.

ಅಂಗಸಂಸ್ಥೆಯ ಸ್ಥಾಪಕ ಅಧ್ಯಕ್ಷ ವೆಂಕಟರಾಯ ಅಡೂರು, ಅಂಗಸಂಸ್ಥೆಯ ನಿಕಟ ಪೂರ್ವ ಅಧ್ಯಕ್ಷ ಬಿ. ವಾಸುದೇವ ಸೋಮಯಾಜಿ ಹಾಗೂ ಮಹಿಳಾ ವೇದಿಕೆಯ ಅಧ್ಯಕ್ಷ ನಳಿನಿ ಎಸ್ ಹೊಳ್ಳ ಉಪಸ್ಥಿತರಿದ್ದರು.

ಕಾರ್ಯದರ್ಶಿ ವಿಷ್ಣು ಪ್ರಕಾಶ್ ಅಂಗಸಂಸ್ಥೆ ನಡೆಸಿದ ವಿವಿಧ ಚಟುವಟಿಕೆಗಳ ವರದಿಯನ್ನು ಮಂಡಿಸಿದರು. ಕೋಶಾಧಿಕಾರಿ ಪ್ರಕಾಶ್ ನಾರಾಯಣ ಲೆಕ್ಕಪತ್ರಗಳನ್ನು ಮಂಡಿಸಿ ಮುಂಗಡ ಪತ್ರಕ್ಕೆ ಸಭೆಯ ಒಪ್ಪಿಗೆ ಪಡೆದರು. ಬಿಲಿಯನ್ ಫೌಂಡೇಶನ್ ಪ್ರತಿನಿಧಿ ಅರವಿಂದ ಕಾರಂತ ಫೌಂಡೇಶನ್ ಚಟುವಟಿಕೆಗಳ ಕುರಿತು ವರದಿಯನ್ನು ಪ್ರಸ್ತುತಪಡಿಸಿದರು. ಮಹಿಳಾ ವೇದಿಕೆಯ ಕಾರ್ಯದರ್ಶಿ ಅಕ್ಷತಾ ಎಸ್ ಅಡೂರು ಮಹಿಳಾ ವೇದಿಕೆಯ ವಾರ್ಷಿಕ ವರದಿಯನ್ನು ಮಂಡಿಸಿದರು.

ವಿವಿಧ ಕ್ಷೇತ್ರಗಳಲ್ಲಿ ಶ್ರೇಷ್ಠ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಉಪಾಧ್ಯಕ್ಷ ರಮೇಶ್ ಹೊಳ್ಳ ಆರಂಬೊಡಿಯವರು ಸ್ವಾಗತಿಸಿದರು. ಕಾರ್ಯದರ್ಶಿ ಶ ವಿಷ್ಣು ಪ್ರಕಾಶ್ ಧನ್ಯವಾದ ನೀಡಿದರು. ಅನುರಾಧ ಕೆ. ರಾವ್ ನಿರೂಪಿಸಿದರು.

Related posts

ಮಾ.12: ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ, ಪಿಲಿಚಾಮುಂಡಿ ದೈವಸ್ಥಾನದ ದೈವಗಳ ಪ್ರತಿಷ್ಠಾ ಕಾರ್ಯಕ್ರಮ-ಆಮoತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೌತಡ್ಕ ಬಯಲು ಗಣಪನಿಗೆ ವಾರ್ಷಿಕ ಮೂಡಪ್ಪ ಸೇವೆಯ ಸಂಭ್ರಮ   

Suddi Udaya

ತೆಂಕಕಾರಂದೂರು: ಪೆರಾಲ್ದರಕಟ್ಟೆ ಮಸೀದಿಯಲ್ಲಿ ಮುಸ್ಲಿಮರ ಪವಿತ್ರ ಹಬ್ಬ ಈದುಲ್ ಪಿತ್ರ್ ಆಚರಣೆ

Suddi Udaya

ಇಂದಬೆಟ್ಟು ಶ್ರೀ ಅರ್ಧನಾರೀಶ್ವರ ದೇವಸ್ಥಾನ ದೇವನಾರಿ ವರ್ಷಾವಧಿ ಜಾತ್ರೆ ಹಾಗೂ ಪ್ರತಿಷ್ಠಾ ಮಹೋತ್ಸವ, ಧಾರ್ಮಿಕ ಸಭೆ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಮತ್ತು ವಿಜಯ ಗೋಪುರ ಲೋಕಾರ್ಪಣೆಯ ಪೂರ್ವಾಭಾವಿ ಸಭೆ: ಬ್ರಹ್ಮಕಲಶೋತ್ಸವದ ಅಧ್ಯಕ್ಷರಾಗಿ ಕೆ.ಪ್ರತಾಪಸಿಂಹ ನಾಯಕ್, ಕಾರ್ಯಾಧ್ಯಕ್ಷರಾಗಿ ಶಶಿಧರ ಶೆಟ್ಟಿ ನವಶಕ್ತಿ ಆಯ್ಕೆ : ದೇಶಕ್ಕೆ ಮಾದರಿಯಾಗಿ ಉಜಿರೆ ದೇವಸ್ಥಾನದ ಬ್ರಹ್ಮಕಲಶೋತ್ಸವ: ಹರೀಶ್ ಪೂಂಜ

Suddi Udaya

ಅಳದಂಗಡಿ ಅರಮನೆಗೆ ಶಿಲಾಮಯ ಆನೆಗಳ ಮೆರುಗು: ಪ್ರಸಿದ್ಧ ಬೆಂಗಳೂರು ಉದ್ಯಮಿ ದೇವೇಂದ್ರ ಹೆಗ್ಡೆಯವರಿಂದ ಕೊಡುಗೆ

Suddi Udaya
error: Content is protected !!