ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಮಸ್ಯೆ

ಗುರುವಾಯನಕೆರೆ ಕೆರೆ ಬಳಿ ಸೃಷ್ಟಿಯಾದ ಇನ್ನೊಂದು ಕೆರೆ, ರಾಜ್ಯ ಹೆದ್ದಾರಿಯಲ್ಲಿ ಮರಣ ಗುಂಡಿಗಳು, ವಾಹನ ಚಾಲಕರಿಗೆ ಹಾಗೂ ಪಾದಚಾರಿಗಳಿಗೆ ತೀವ್ರ ಸಂಕಷ್ಟ,

ಗುರುವಾಯನಕೆರೆ: ಇಲ್ಲಿಯ ಕೆರೆಯ ಬಳಿ ಹೆದ್ದಾರಿಯಲ್ಲಿ ಇನ್ನೊಂದು ಕೆರೆ ಸೃಷ್ಟಿಯಾಗಿದೆ. ಭಾರಿ ಗಾತ್ರದ ಹೊಂಡ-ಗುಂಡಿಗಳು ಸೃಷ್ಟಿಯಾಗಿವೆ. ಈ ಮರಣ ಗುಂಡಿಗಳು ಅವಘಡಕ್ಕೆ ಕಾರಣವಾಗುತ್ತಿದ್ದು , ಇದರಿಂದಾಗಿ ವಾಹನ ಚಾಲಕರಿಗೆ ಹಾಗೂ ಪಾದಚಾರಿಗಳಿಗೆ ತೀವ್ರ ಸಂಕಷ್ಟ ಎದುರಾಗಿದೆ.

ಗುರುವಾಯನಕೆರೆ ಪೇಟೆಯಲ್ಲಿ ಬೃಹದಾಕಾರದ ಹೊಂಡಗಳು ನಿರ್ಮಾಣಗೊಂಡಿದ್ದು, ಇವುಗಳಲ್ಲಿ ಮಳೆನೀರು ತುಂಬಿದಾಗ ರಾತ್ರಿ ಹೊತ್ತಲ್ಲಂತೂ ಅಪಘಾತಗಳು ನಿತ್ಯ ಎಂಬಂತಾಗಿವೆ. ಈ ಹೊಂಡಗಳಲ್ಲಿ ನೀರು ಕಟ್ಟಿ ನಿಂತಾಗ ಎಷ್ಟು ಆಳವಿದೆ ಎಂಬ ಬಗ್ಗೆ ಅರಿವಿಗೆ ಬಾರದೇ ದ್ವಿಚಕ್ರ ಹಾಗೂ ಇತರ ಸಹಿತ ಸಣ್ಣಪುಟ್ಟ ವಾಹನಗಳು ಬಿದ್ದು ಸವಾರರು ಗಾಯಗೊಳ್ಳುತ್ತಿರುವ ಘಟನೆಗಳು ನಿತ್ಯ ನಡೆಯಲು ಆರಂಭವಾಗಿದೆ. ನಿತ್ಯ ಪ್ರಯಾಣಿಕರು ಹೊಂಡ ಗುಂಡಿಗಳ ಮೇಲಿನ ಪ್ರಯಾಣದಿಂದಾಗಿ ಸುಸ್ತಾಗುತ್ತಿದ್ದಾರೆ.

ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಇಲ್ಲಿಯ ವಿಚಾರದಲ್ಲಿ ಸಮರ್ಪಕ ಯೋಜನೆ ರೂಪಿಸುತ್ತಿಲ್ಲ ಎಂದು ಸಾರ್ವಜನಿಕರ ಆರೋಪಿಸುತ್ತಿದ್ದಾರೆ.

ಹೆದ್ದಾರಿಯಲ್ಲಿ ದಿನನಿತ್ಯ ಸಾವಿರಾರು ವಾಹನಗಳು ಸಂಚಾರ ನಡೆಸುತ್ತಿವೆ. ಕೆಲವು ವಾಹನಗಳು ಹೊಂಡ ತಪ್ಪಿಸುವ ಭರದಲ್ಲಿ ಹಾಗೂ ಇನ್ನು ಕೆಲವು ವೇಗವಾಗಿ ಸಂಚರಿಸುವ ಸಂದರ್ಭದಲ್ಲಿ ಮತ್ತೊಂದು ವಾಹನಗಳಿಗೆ ಡಿಕ್ಕಿ ಹೊಡೆಯುವ ಘಟನೆಗಳು ಸಂಭವಿಸಿದ್ದೂ ಇವೆ. ಅಲ್ಲದೆ ಹೊಂಡ-ಗುಂಡಿಗಳನ್ನು ತಪ್ಪಿಸಲು ಚಾಲಕರು ಹರಸಾಹಸಪಡಬೇಕಾಗಿದೆ. ಈ ಮಧ್ಯೆ ಸಂಚರಿಸುತ್ತಿರುವಾಗ ವಾಹನಗಳ ಚಕ್ರಗಳು ಹೊಂಡಗಳಿಗೆ ಬಿದ್ದೇಳುವಾಗ ಪಾದಚಾರಿಗಳಿಗೆ ಕೆಸರು ನೀರಿನ ಸಿಂಚನವಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಹೆದ್ದಾರಿಯನ್ನು ದುರಸ್ತಿಗೊಳಿಸಲು ಕೂಡಲೇ ಕ್ರಮ ಕೈಗೊಳ್ಳಬೇಕಾಗಿದೆ. ಜತೆಗೆ ಸಂಭವನೀಯ ದುರಂತಗಳನ್ನು ತಪ್ಪಿಸುವ ಕುರಿತು ಗಮನಹರಿಸಬೇಕಾಗಿದೆ.

Related posts

ಪುತ್ತೂರು ಮುಳಿಯ ಗೋಲ್ಡ್ & ಡೈಮಂಡ್ಸ್ ಮಳಿಗೆ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ಕುಂಬಾರರ ಸೇವಾ ಸಂಘದಿಂದ ರಾಜೀವ್ ಬಿ.ಎಚ್ ರವರಿಗೆ “ಕಲಾರತ್ನ” ಪ್ರಶಸ್ತಿ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ “ಮ್ಯಾನೇಜ್ಮೆಂಟ್ ಫೆಸ್ಟ್ “

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಮಾಜಿ ಸಚಿವ ನಾಗರಾಜ ಶೆಟ್ಟಿ ಭೇಟಿ

Suddi Udaya

ಪಟ್ರಮೆ: ಕೆರೆಮನೆ ನಿವಾಸಿ ಸದಾಶಿವ ನಿಧನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ

Suddi Udaya
error: Content is protected !!