23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ: ವಿದ್ವತ್ ಪ.ಪೂ. ಕಾಲೇಜಿನಲ್ಲಿ ಚಾರ್ಟರ್ಡ್ ಅಕೌಂಟೆಂಟ್ಸ್ ಡೇ ಆಚರಣೆ

ಗುರುವಾಯನಕೆರೆ: ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆ (ICAI)ಸ್ಥಾಪನೆಯ 76 ನೇ ವಾರ್ಷಿಕೋತ್ಸವದ ಅಂಗವಾಗಿ ಜು. 01 ರಂದು ವಿದ್ವತ್ ಪದವಿಪೂರ್ವ ಕಾಲೇಜು ಗುರುವಾಯನಕೆರೆಯಲ್ಲಿ ಚಾರ್ಟರ್ಡ್ ಅಕೌಂಟೆಂಟ್ಸ್ ಡೇ’ ಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಮಂಗಳೂರಿನ ಖ್ಯಾತ ಚಾರ್ಟರ್ಡ್ ಅಕೌಂಟೆಂಟ್ಸ್ ಆಗಿರುವ ಸಿಎ ಸುಕನ್ಯಾ ಇವರು ದೀಪ ಬೆಳಗಿಸಿ ಉದ್ಘಾಟಿಸಿ, ಚಾರ್ಟರ್ಡ್ ಅಕೌಂಟೆಂಟ್ಸ್ ವೃತ್ತಿಯ ನೈತಿಕತೆ, ನಿಷ್ಠೆ ಮತ್ತು ರಾಷ್ಟ್ರೀಯ ಆರ್ಥಿಕತೆಯ ಬೆಳವಣಿಗೆಯಲ್ಲಿ ಅವರ ಪಾತ್ರದ ಕುರಿತು ತಿಳಿಸಿ, ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಶುಭಹಾರೈಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿರುವ ಸಂಸ್ಥೆಯ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಮಾತನಾಡಿ, ಚಾರ್ಟರ್ಡ್ ಅಕೌಂಟೆಂಟ್ಸ್ ವೃತ್ತಿಯ ಹಾಗೂ ಆರ್ಥಿಕ ಕ್ಷೇತ್ರದಲ್ಲಿ ಅದರ ಪಾತ್ರದ ಬಗ್ಗೆ ತಿಳಿಸಿದರು. ಸಮಾರಂಭದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಪ್ರಾಂಶುಪಾಲರಾದ ಹರೀಶ್ ಅವರು “ಸಿಎ ದಿನಾಚರಣೆ ಎಂದರೆ ಕೇವಲ ಉತ್ಸವವಲ್ಲ; ಅದು ಪ್ರಾಮಾಣಿಕತೆ, ಶ್ರಮ ಮತ್ತು ಸಮಾಜದ ನಂಬಿಕೆಯನ್ನು ಪ್ರತಿಬಿಂಬಿಸುವ ದಿನ” ಎಂದು ಹೇಳಿದರು.

ಸಮಾರಂಭದಲ್ಲಿ ಕಾಲೇಜಿನ ಶೈಕ್ಷಣಿಕ ನಿರ್ದೇಶಕ ಗಂಗಾಧರ. ಇ. ಮಂಡಗಳಲೆ, ಕಾಲೇಜಿನ ಆಡಳಿತಾಧಿಕಾರಿ ಅಶೋಕ್ ಕುಮಾರ್ ಶೆಟ್ಟಿ, ಕಾಲೇಜಿನ ‘ಸಿಎ’ಫೌಂಡೇಶನ್ ಸಂಯೋಜಕಿ ಡಾ. ಮಹಿತಾ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಕುಮಾರಿ ಸ್ಪರ್ಧಾ ಮತ್ತು ಕುಮಾರಿ ನೇಹಾ ಇವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವು ಆರಂಭಗೊಂಡು, ಉಪನ್ಯಾಸಕಿ ಶ್ರೀಮತಿ ದಿವ್ಯಶ್ರೀ.ಜಿ ಸ್ವಾಗತಿಸಿ, ಉಪನ್ಯಾಸಕಿ ಶ್ರೀಮತಿ ಅನುಷಾ.ಎ.ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ವಿವೇಕ್ ಎನ್ ಡಿ ಎ ಕ್ಲಿಯರ್

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಬೆಳ್ತಂಗಡಿ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಕೃಷ್ಣಾನಂದ ರಾವ್ ಅವಿರೋಧ ಆಯ್ಕೆ

Suddi Udaya

ಗುರುವಾಯನಕೆರೆಯಲ್ಲಿ ಸುಸಜ್ಜಿತ ವ್ಯವಸ್ಥೆಗಳನ್ನೊಳಗೊಂಡು ಆರಂಭಗೊಂಡ ಹೋಟೇಲ್ ಮಥುರಾ ಉದ್ಘಾಟನೆ

Suddi Udaya

ದಿಡುಪೆ: ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya

ಮಚ್ಚಿನ :ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಿಬ್ಬಂದಿ ವಸತಿಗೃಹ ನಿರ್ಮಾಣ ಕಾಮಗಾರಿಗೆ ರೂ.4 ಕೋಟಿ ಅನುದಾನ ಮಂಜೂರು

Suddi Udaya
error: Content is protected !!