September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ: ವಿದ್ವತ್ ಪ.ಪೂ. ಕಾಲೇಜಿನಲ್ಲಿ ಚಾರ್ಟರ್ಡ್ ಅಕೌಂಟೆಂಟ್ಸ್ ಡೇ ಆಚರಣೆ

ಗುರುವಾಯನಕೆರೆ: ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆ (ICAI)ಸ್ಥಾಪನೆಯ 76 ನೇ ವಾರ್ಷಿಕೋತ್ಸವದ ಅಂಗವಾಗಿ ಜು. 01 ರಂದು ವಿದ್ವತ್ ಪದವಿಪೂರ್ವ ಕಾಲೇಜು ಗುರುವಾಯನಕೆರೆಯಲ್ಲಿ ಚಾರ್ಟರ್ಡ್ ಅಕೌಂಟೆಂಟ್ಸ್ ಡೇ’ ಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಮಂಗಳೂರಿನ ಖ್ಯಾತ ಚಾರ್ಟರ್ಡ್ ಅಕೌಂಟೆಂಟ್ಸ್ ಆಗಿರುವ ಸಿಎ ಸುಕನ್ಯಾ ಇವರು ದೀಪ ಬೆಳಗಿಸಿ ಉದ್ಘಾಟಿಸಿ, ಚಾರ್ಟರ್ಡ್ ಅಕೌಂಟೆಂಟ್ಸ್ ವೃತ್ತಿಯ ನೈತಿಕತೆ, ನಿಷ್ಠೆ ಮತ್ತು ರಾಷ್ಟ್ರೀಯ ಆರ್ಥಿಕತೆಯ ಬೆಳವಣಿಗೆಯಲ್ಲಿ ಅವರ ಪಾತ್ರದ ಕುರಿತು ತಿಳಿಸಿ, ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಶುಭಹಾರೈಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿರುವ ಸಂಸ್ಥೆಯ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಮಾತನಾಡಿ, ಚಾರ್ಟರ್ಡ್ ಅಕೌಂಟೆಂಟ್ಸ್ ವೃತ್ತಿಯ ಹಾಗೂ ಆರ್ಥಿಕ ಕ್ಷೇತ್ರದಲ್ಲಿ ಅದರ ಪಾತ್ರದ ಬಗ್ಗೆ ತಿಳಿಸಿದರು. ಸಮಾರಂಭದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಪ್ರಾಂಶುಪಾಲರಾದ ಹರೀಶ್ ಅವರು “ಸಿಎ ದಿನಾಚರಣೆ ಎಂದರೆ ಕೇವಲ ಉತ್ಸವವಲ್ಲ; ಅದು ಪ್ರಾಮಾಣಿಕತೆ, ಶ್ರಮ ಮತ್ತು ಸಮಾಜದ ನಂಬಿಕೆಯನ್ನು ಪ್ರತಿಬಿಂಬಿಸುವ ದಿನ” ಎಂದು ಹೇಳಿದರು.

ಸಮಾರಂಭದಲ್ಲಿ ಕಾಲೇಜಿನ ಶೈಕ್ಷಣಿಕ ನಿರ್ದೇಶಕ ಗಂಗಾಧರ. ಇ. ಮಂಡಗಳಲೆ, ಕಾಲೇಜಿನ ಆಡಳಿತಾಧಿಕಾರಿ ಅಶೋಕ್ ಕುಮಾರ್ ಶೆಟ್ಟಿ, ಕಾಲೇಜಿನ ‘ಸಿಎ’ಫೌಂಡೇಶನ್ ಸಂಯೋಜಕಿ ಡಾ. ಮಹಿತಾ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಕುಮಾರಿ ಸ್ಪರ್ಧಾ ಮತ್ತು ಕುಮಾರಿ ನೇಹಾ ಇವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವು ಆರಂಭಗೊಂಡು, ಉಪನ್ಯಾಸಕಿ ಶ್ರೀಮತಿ ದಿವ್ಯಶ್ರೀ.ಜಿ ಸ್ವಾಗತಿಸಿ, ಉಪನ್ಯಾಸಕಿ ಶ್ರೀಮತಿ ಅನುಷಾ.ಎ.ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ಆರ್.ಎಸ್.ಎಸ್ ಸಂಘಟನೆಗೆ ನೂರರ ಸಂಭ್ರಮ, ಬಡ ಕುಟುಂಬಕ್ಕೆ ಮನೆ ನಿರ್ಮಾಣ

Suddi Udaya

ಮುಗೇರಡ್ಕ ಮೊಗ್ರು ಯುವ ವೇದಿಕೆ ವತಿಯಿಂದ ವಿದ್ಯಾನಿಧಿಗೆ ದೇಣಿಗೆ ಹಸ್ತಾಂತರ

Suddi Udaya

ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆ ದುರಸ್ತಿ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ಆಗಬೇಕಾಗಿರುವ ಬದಲಾವಣೆ ಬಗ್ಗೆ ಲೋಕೋಪಯೋಗಿ ಸಚಿವರಿಗೆ ಮನವಿ ಸಲ್ಲಿಕೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ಪ್ರಕಾಶ್ ಶೆಟ್ಟಿ ನೊಚ್ಚ, ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್ ಶೆಟ್ಟಿ,

Suddi Udaya

ತಣ್ಣೀರುಪಂತ ವಲಯದ ತೆಕ್ಕಾರು ಕಾರ್ಯಕ್ಷೇತ್ರದ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya
error: Content is protected !!