September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಬೃಹತ್ ಕಾರ್ಮಿಕ ಜಾಗೃತಿ ಆಂದೋಲನವನ್ನು ಆಯೋಜಿಸುವ ಕುರಿತು ಸಮಾಲೋಚನ ಸಭೆ

ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು ಬೃಹತ್ ಕಾರ್ಮಿಕ ಜಾಗೃತಿ ಆಂದೋಲನವನ್ನು ಆಯೋಜಿಸುವ ಕುರಿತು ಸಮಾಲೋಚನ ಸಭೆಯನ್ನು ಅಂಬೇಡ್ಕರ್ ಭವನ ಬೆಳ್ತಂಗಡಿಯಲ್ಲಿ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಎಂಎಸ್ ತಾಲೂಕು ಸಮಿತಿ ಅಧ್ಯಕ್ಷ ವಕೀಲರಾದ ಉದಯ್ ಬಿ.ಕೆ ಅವರು ವಹಿಸಿದ್ದರು.

ಬಿಎಂಎಸ್ ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲಿಯಾನ್ ಮಾತನಾಡಿ ಜಿಲ್ಲಾಡಳಿತ ಮತ್ತು ನೂತನವಾಗಿ ಬಂದಿರುವಂತಹ ಪೊಲೀಸ್ ವರಿಷ್ಠಾಧಿಕಾರಿಗಳು ತೆಗೆದುಕೊಳ್ಳುತ್ತಿರುವ ತೀರ್ಮಾನಗಳಿಂದ ಕೆಂಪು ಕಲ್ಲು ಮರಳು ಪೂರೈಕೆಯಲ್ಲಿ ತೊಂದರೆ ಉಂಟಾಗಿದೆ ಇದರಿಂದಾಗಿ ಕಾರ್ಮಿಕರು ಕೆಲಸ ಇಲ್ಲದೆ ಬಳಲುವಂತಾಗಿದೆ ಈ ದೃಷ್ಟಿಯಲ್ಲಿ ಈ ಸಮಸ್ಯೆಯನ್ನು ಶೀಘ್ರದಲ್ಲಿ ಪರಿಹರಿಸುವಂತೆ ತಹಶೀಲ್ದಾರರು ಪೊಲೀಸ್ ನಿರೀಕ್ಷಕರಿಗೆ ಮನವಿ ಮಾಡುವುದು. ಈ ಮನವಿಗೆ ಒಂದು ವಾರದ ಒಳಗೆ ಸ್ಪಂದಿಸದಿದ್ದರೆ ಬೃಹತ್ ಜನೊಂದೋಲನ ಸಭೆಯನ್ನು ನಡೆಸುವುದು ಎಂದು ಹೇಳಿದರು.

ಬಿಎಮ್ ಎಸ್ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಅವರು ಮಾತನಾಡಿ ಕಾರ್ಮಿಕರ ಪರವಾಗಿ ಸದಾ ನಾವು ಧ್ವನಿ ಎತ್ತಲಿದ್ದೇವೆ ಇದೀಗ ಕಾರ್ಮಿಕರಿಗೆ ಕಟ್ಟಡ ನಿರ್ಮಾಣದ ಸಾಮಗ್ರಿಗಳು ದೊರಕದೆ ಕಾರ್ಮಿಕರು ಕೆಲಸ ಇಲ್ಲದೆ ಬಳಲುವಂತಾಗಿದೆ ಈ ಸಮಸ್ಯೆಯನ್ನು ಶೀಘ್ರವಾಗಿ ಜಿಲ್ಲಾಡಳಿತವನ್ನು ಪರಿಹರಿಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕುಮಾರ್ ನಾಥ್ ಶೆಟ್ಟಿ ಮತ್ತು ಪ್ರಮುಖರಾದ ಉದಯ್ ಕುಮಾರ್ ಉಜಿರೆ ಗಣೇಶ್ ಪೂಜಾರಿ ಪೆರಾಡಿ ಹಾಗೂ ಇತರ ಪ್ರಮುಖರು ಉಪಸ್ಥಿತರಿದ್ದರು. ಕುಮಾರ್ ‌ನಾಧ್ ಸ್ವಾಗತಿಸಿ ಗಣೇಶ್ ಪೂಜಾರಿ ವಂದಿಸಿದರು.

Related posts

ಎರಡು ವರ್ಷಗಳ ಹಿಂದೆ ನಡೆದಿದ್ದ ಮನೆ ಕಳವು ಪ್ರಕರಣ ಭೇದಿಸಿದ ಬೆಳ್ಳಾರೆ ಪೊಲೀಸರು: ಆರೋಪಿ ನೆರಿಯದ ಶರತ್ ಬಂಧನ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ನೇತೃತ್ವದಲ್ಲಿ ಗೀತೆ ಜತೆ ಸಾಹಿತ್ಯ ಸಾಂಗತ್ಯ ಉಪನ್ಯಾಸ ಮಾಲಿಕೆಯ ಎರಡನೆಯ ಅಧ್ಯಾಯ

Suddi Udaya

ಬಂದಾರು ಬಿಜೆಪಿ ಶಕ್ತಿಕೇಂದ್ರ ಮೈರೋಳ್ತಡ್ಕದಲ್ಲಿ ಮಹಾಸಂಪರ್ಕ ಅಭಿಯಾನ

Suddi Udaya

ಆಟೋ ಚಾಲಕರ ಹಾಗೂ ಸಾರಿಗೆ ನೌಕರರ ಭವಿಷ್ಯದ ಭದ್ರತೆಗಾಗಿ ಯೋಜನೆಗಳನ್ನು ರೂಪಿಸುವಂತೆ ಬಿಎಂಎಸ್ ನ ವೆಹಿಕಲ್ ಯೂನಿಯನ್ ಸಂಘಗಳಿಂದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯವರಿಗೆ ಮನವಿ

Suddi Udaya

ಚಾರುಕೀರ್ತಿಭಟ್ಟಾರಕ ಸ್ವಾಮೀಜಿಯವರಿಂದ “ರತ್ನತ್ರಯ ಸಿದ್ಧಿಸೋಪಾನ” ಶಾಸ್ತ್ರದಾನ ಕೃತಿ ಬಿಡುಗಡೆ

Suddi Udaya

ಕರಾಟೆಯಲ್ಲಿ ಸಾನ್ವಿ ಎಸ್ ಕೋಟ್ಯಾನ್ ರವರಿಗೆ ಪ್ರಶಸ್ತಿ

Suddi Udaya
error: Content is protected !!