July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

ಮಡಂತ್ಯಾರು: ಶಿಕ್ಷಕರು ಅಂಧಕಾರದಿಂದ ಜ್ಞಾನದೆಡೆಗೆ ಕೊಂಡೊಯ್ಯುವ ಕಾರ್ಯವನ್ನು ಮಾಡುತ್ತಾರೆ.ಆದರೆ ಬದಲಾದ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳು ತಂತ್ರಜ್ಞಾನ ಮತ್ತು ಅದರ ಬಳಕೆಯ ಕುರಿತು ತಿಳಿದುಕೊಳ್ಳುವುದು ಉತ್ತಮ. ಪ್ರತಿಯೊಬ್ಬನಲ್ಲೂ ಸುಪ್ತವಾಗಿರುವ ಜ್ಞಾನವನ್ನು ಬಳಸಿಕೊಂಡು ಸಾರ್ವಕಾಲಿಕ ಸತ್ಯಗಳಾದ ದಯೆ, ಕರುಣೆ, ಪ್ರೀತಿ, ವಿಶ್ವಾಸದಿಂದ ಜಗತ್ತನ್ನು ನೋಡಿಕೊಳ್ಳವಂತಾಗಬೇಕು ಎಂದು ಉಜಿರೆ ಎಸ್ ಡಿ ಎಂ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಕೇಶವ.ಟಿ.ಎನ್ ಹೇಳಿದರು.

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ಪ್ರಸ್ತುತ ವರ್ಷದ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಮಡಂತ್ಯಾರು ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಗಳ ಜೊತೆ ಕಾರ್ಯದರ್ಶಿಗಳಾದ ವಂ| ಸ್ಟ್ಯಾನಿ ಗೋವಿಯಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾಲೇಜಿನ ಪ್ರಾಚಾರ್ಯರಾದ ಸೂರಜ್ ಚಾರ್ಲ್ಸ್ ವಿದ್ಯಾರ್ಥಿ ನಾಯಕರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ವಿದ್ಯಾರ್ಥಿ ಸಂಘದ ನಿರ್ದೇಶಕಿ ರೆನಿಶಾ ವೇಗಸ್ ಸ್ವಾಗತಿಸಿ, ಉಪನಿರ್ದೇಶಕಿ ಅನು ವಂದಿಸಿ, ವಿದ್ಯಾರ್ಥಿ ನಾಯಕ ಶಾಶ್ವತ್ ಪ್ರೀತಂ ಅನಿಸಿಕೆ ಹಂಚಿಕೊಂಡರು. ವಿದ್ಯಾರ್ಥಿಗಳಾದ ಅವಿನ್ ಹಾಗೂ ಜೊತ್ಸ್ನ್ ಜೋಸ್ ಕಾರ್ಯಕ್ರಮ ನಿರೂಪಿಸಿದರು,.

Related posts

ಧರ್ಮಸ್ಥಳ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮುಂಡಾಜೆ: ಕಂದಕಕ್ಕೆ ಉರುಳಿದ ಕಾರು

Suddi Udaya

ಅಳದಂಗಡಿ : ಕೆದ್ದು ವಿದ್ಯಾರ್ಥಿ ನಿಲಯದ ಆವರಣದಲ್ಲಿ ಕಾಣಿಸಿಕೊಂಡ ಬೃಹತ್ ಗಾತ್ರದ ಕಾಳಿಂಗ ಸರ್ಪ: ಸುರಕ್ಷಿತವಾಗಿ ಹಿಡಿದು ಅರಣ್ಯ ಬಿಟ್ಟ ಸ್ನೇಕ್ ಅಶೋಕ್

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ರೂ. 7 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಯಾತ್ರಿ ನಿವಾಸಕ್ಕೆ ಶಿಲಾನ್ಯಾಸ

Suddi Udaya

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ “ಪರ್ಯೂಷಣ ಪರ್ವ” ಕೃತಿ ಬಿಡುಗಡೆ

Suddi Udaya

ಬೆಳ್ತಂಗಡಿ : ಆಭರಣ ಜ್ಯುವೆಲರಿಗೆ ಐಟಿ ದಾಳಿ ಪ್ರಕರಣ: ಬೆಳ್ತಂಗಡಿ ಆಭರಣ ಶಾಪ್ ನ ಐಟಿ ದಾಳಿ ಮುಕ್ತಾಯ

Suddi Udaya
error: Content is protected !!