July 23, 2026
ವರದಿ

ರೆಖ್ಯ: ಜನರ ಜೀವ ಬಲಿ ಪಡೆಯುವ ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿ ರೆಖ್ಯ ಗ್ರಾಮಸ್ಥರಿಂದ ಬೃಹತ್ ಪ್ರತಿಭಟನೆಯ ಎಚ್ಚರಿಕೆ

ರೆಖ್ಯ ಗ್ರಾಮದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ( 75 ) ರ ಕಾಮಗಾರಿ ಬಹುತೇಕ ಮುಗಿಯುವ ಹಂತದಲ್ಲಿದೆ, ಆದರೆ ರೆಖ್ಯ ಗ್ರಾಮದ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವೈಜ್ಞಾನಿಕವಾಗಿ ಮಾಡಿ, ಜನರ ಜೀವ ಬಲಿಪಡೆಯುವಂತಾಗಿದೆ ಎಂದು ಗ್ರಾಮಸ್ಥರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ರೆಖ್ಯ ಗ್ರಾಮದ ಎಂಜಿರ, ನೇಲ್ಯಡ್ಕ, ಪರಕ್ಕಳದಲ್ಲಿ ಅವೈಜ್ಞಾನಿಕ ಕಾಮಗಾರಿ ಆಗಿದ್ದು ಎಂಜಿರದಲ್ಲಿ ಸರ್ವಿಸ್ ರಸ್ತೆ ಮಾಡಿಲ್ಲ , ರಸ್ತೆ ಮಧ್ಯದ ತಡೆಗೋಡೆಯಿಂದ ಶಾಲಾ ಮಕ್ಕಳು / ಸಾರ್ವಜನಿಕರು ರಸ್ತೆ ದಾಟಲು ಪರದಾಟ ಮಾಡುವ0ತಾಗಿದೆ. ಕೋಳಾರು ಸಂಪರ್ಕ ರಸ್ತೆ ನೇಲ್ಯಡ್ಕದಲ್ಲಿ ಮುಖ್ಯ ರಸ್ತೆಗೆ ಸಂಪರ್ಕ ಮಾಡಿಲ್ಲ , ಅಗತ್ಯವಿದ್ದ ಕಡೆ ದಾರಿ ದೀಪ ಅಳವಡಿಸಿಲ್ಲ , ಅನಗತ್ಯ ಸ್ಥಳಗಳಲ್ಲಿ ಬಸ್ಸು ತಂಗುದಾಣ ನಿರ್ಮಾಣ ಮಾಡಿದ್ದಾರೆ, ಬೃಹತ್ ಗುಡ್ಡ ವಿರುವ ಸ್ಥಳಗಳಲ್ಲಿ ತಡೆಗೋಡೆ ನಿರ್ಮಾಣ ಮಾಡದೆ ಇರುವ ಹಿನ್ನಲೆಯಲ್ಲಿ ಅವೈಜ್ಞಾನಿಕ ಕಾಮಗಾರಿಯ ವಿರುದ್ಧ ಗ್ರಾಮಸ್ಥರೆಲ್ಲರು ಒಟ್ಟಾಗಿ ಸಭೆ ನಡೆಸಿ ಮುಂದಿನ ದಿನಗಳಲ್ಲಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

Related posts

ಜು.26: ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ “ಕಾರ್ಗಿಲ್ ವಿಜಯ ದಿವಸ್” ಪಂಜಿನ ಮೆರವಣಿಗೆ

Suddi Udaya

ಕೊಕ್ಕಡ: ದಿ| ಸುಹಾಸ್ ಶೆಟ್ಟಿ ಹುಟ್ಟು ಹಬ್ಬದ ಪ್ರಯುಕ್ತ ಕಳೆಂಜ ನಂದಗೋಕುಲ ಗೋಶಾಲೆಗೆ ಮೇವು ಸಮರ್ಪಣೆ

Suddi Udaya

ಬಟ್ಲಡ್ಕ ಜಮಾಅತ್ ನ ಉರೂಸ್ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

Suddi Udaya

ಆರಂಬೋಡಿ: ಹೊಕ್ಕಾಡಿಗೋಳಿ ಶಾಲಾ ಶೌಚಾಲಯ ಉದ್ಘಾಟನೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಭಿವಿನ್ಯಾಸ ಕಾರ್ಯಕ್ರಮ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಸಿಸಿ ಕೆಮರಾ ಅಳವಡಿಸುವಿಕೆ ಮತ್ತು ಜೇನು ಸಾಕಾಣಿಕೆ ತರಬೇತಿ ಕಾರ್ಯಕ್ರಮಗಳ ಸಮಾರೋಪ ಸಮಾರಂಭ

Suddi Udaya
error: Content is protected !!