23.5 C
ಪುತ್ತೂರು, ಬೆಳ್ತಂಗಡಿ
June 8, 2026
ವರದಿ

ರೆಖ್ಯ: ಜನರ ಜೀವ ಬಲಿ ಪಡೆಯುವ ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿ ರೆಖ್ಯ ಗ್ರಾಮಸ್ಥರಿಂದ ಬೃಹತ್ ಪ್ರತಿಭಟನೆಯ ಎಚ್ಚರಿಕೆ

ರೆಖ್ಯ ಗ್ರಾಮದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ( 75 ) ರ ಕಾಮಗಾರಿ ಬಹುತೇಕ ಮುಗಿಯುವ ಹಂತದಲ್ಲಿದೆ, ಆದರೆ ರೆಖ್ಯ ಗ್ರಾಮದ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವೈಜ್ಞಾನಿಕವಾಗಿ ಮಾಡಿ, ಜನರ ಜೀವ ಬಲಿಪಡೆಯುವಂತಾಗಿದೆ ಎಂದು ಗ್ರಾಮಸ್ಥರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ರೆಖ್ಯ ಗ್ರಾಮದ ಎಂಜಿರ, ನೇಲ್ಯಡ್ಕ, ಪರಕ್ಕಳದಲ್ಲಿ ಅವೈಜ್ಞಾನಿಕ ಕಾಮಗಾರಿ ಆಗಿದ್ದು ಎಂಜಿರದಲ್ಲಿ ಸರ್ವಿಸ್ ರಸ್ತೆ ಮಾಡಿಲ್ಲ , ರಸ್ತೆ ಮಧ್ಯದ ತಡೆಗೋಡೆಯಿಂದ ಶಾಲಾ ಮಕ್ಕಳು / ಸಾರ್ವಜನಿಕರು ರಸ್ತೆ ದಾಟಲು ಪರದಾಟ ಮಾಡುವ0ತಾಗಿದೆ. ಕೋಳಾರು ಸಂಪರ್ಕ ರಸ್ತೆ ನೇಲ್ಯಡ್ಕದಲ್ಲಿ ಮುಖ್ಯ ರಸ್ತೆಗೆ ಸಂಪರ್ಕ ಮಾಡಿಲ್ಲ , ಅಗತ್ಯವಿದ್ದ ಕಡೆ ದಾರಿ ದೀಪ ಅಳವಡಿಸಿಲ್ಲ , ಅನಗತ್ಯ ಸ್ಥಳಗಳಲ್ಲಿ ಬಸ್ಸು ತಂಗುದಾಣ ನಿರ್ಮಾಣ ಮಾಡಿದ್ದಾರೆ, ಬೃಹತ್ ಗುಡ್ಡ ವಿರುವ ಸ್ಥಳಗಳಲ್ಲಿ ತಡೆಗೋಡೆ ನಿರ್ಮಾಣ ಮಾಡದೆ ಇರುವ ಹಿನ್ನಲೆಯಲ್ಲಿ ಅವೈಜ್ಞಾನಿಕ ಕಾಮಗಾರಿಯ ವಿರುದ್ಧ ಗ್ರಾಮಸ್ಥರೆಲ್ಲರು ಒಟ್ಟಾಗಿ ಸಭೆ ನಡೆಸಿ ಮುಂದಿನ ದಿನಗಳಲ್ಲಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ “ಬ್ರಹ್ಮಶ್ರೀ- 2025” ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

Suddi Udaya

ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಕ್ರೀಡಾ ಶಿಬಿರದ ಸಮಾರೋಪ ಸಮಾರಂಭ

Suddi Udaya

ಅರಸಿನಮಕ್ಕಿ: ಅರೇಕಲ್ ಮಹಾದೇವ ಭಟ್ ರವರ ತೋಟಕ್ಕೆ ಕಾಡಾನೆ ದಾಳಿ

Suddi Udaya

ಉಜಿರೆಯ ವಿಶೇಷ ಮಕ್ಕಳ ಸಾನಿಧ್ಯ ಕೇಂದ್ರದಲ್ಲಿ ದೀಪಾವಳಿ ಸಂಭ್ರಮ

Suddi Udaya

ಬೆಂಗಳೂರಿನ ಪ್ರಸಿದ್ದ ಕೈಗಾರಿಕೋದ್ಯಮಿ, ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಸಾಧಕ ದೇವೇಂದ್ರ ಹೆಗ್ಡೆ ಕೊಕ್ರಾಡಿಯವರು ಅಂತರರಾಷ್ಟ್ರೀಯ ಆರ್ಯಭಟ- 2024 ಪ್ರಶಸ್ತಿಗೆ ಆಯ್ಕೆ

Suddi Udaya

ಅಂಡಿಂಜೆ: ಕಲ್ಲತ್ತಿ ಪ್ರದೇಶದಲ್ಲಿ ಅರಣ್ಯ ಇಲಾಖೆಯ ಗೇರು ಗಿಡಗಳಿಗೆ ಹತ್ತಿಕೊಂಡ ಬೆಂಕಿ

Suddi Udaya
error: Content is protected !!