26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಶ್ರೀ. ಧ. ಮಂ. ಪ. ಪೂ.ಕಾಲೇಜಿನಲ್ಲಿ ವಾಣಿಜ್ಯ ಸಂಘ ಉದ್ಘಾಟನೆ

ಉಜಿರೆ : ಶ್ರೀ. ಧ. ಮಂ.ಪ. ಪೂ. ಕಾಲೇಜಿನಲ್ಲಿ ವಾಣಿಜ್ಯ ಸಂಘ ಉದ್ಘಾಟನೆ ಹಾಗೂ ಲೆಕ್ಕ ಪರಿಶೋಧಕರ ದಿನಾಚರಣೆಯನ್ನು ಆಚರಿಸಲಾಯಿತು. ಮಂಗಳೂರು ಪಿರೇರಿಯನ್ ಸರ್ವಿಸಸ್ ನ ಮ್ಯಾನೇಜರ್ ಹಾಗೂ ಕಾಲೇಜಿನ ಹಿರಿಯ ವಿಧ್ಯಾರ್ಥಿನಿ ಸಿ. ಎ. ಸುಕನ್ಯಾ ಕಾಮತ್ ಉದ್ಘಾಟನೆ ನೆರವೇರಿಸಿ ವಿಧ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಸಂಘದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕೆಂದು ತಿಳಿಸಿದರು.

ಇವರು ಅಯ್ಕೆಯ ವಿಷಯದಲ್ಲಿ ಇತರ ವಿಧ್ಯಾರ್ಥಿಗಳ ಆಯ್ಕೆಯನ್ನು ಸ್ವೀಕರಿಸುವುದಕ್ಕಿಂತ ತಮಗೆ ಸಮಂಜಸವಾದ ಅಯ್ಕೆಯನ್ನು ಸ್ವೀಕರಿಸಬೇಕು. ವಿದ್ಯಾರ್ಥಿಗಳು ಕಾಲೇಜಿನಲ್ಲಿ ಸಿಗುವ ಎಲ್ಲಾ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಬೆಳೆಯಬೇಕು. ಇಂದು ವಾಣಿಜ್ಯ ವಿದ್ಯಾರ್ಥಿಗಳಿಗೆ ಹಲವಾರು ವ್ಯತ್ತಿ ಅವಕಾಶಗಳಿವೆ ಆದರೆ ಕೌಶಲ್ಯಕ್ಕೆ ಮಹತ್ವ ನೀಡಿದರೆ ಮಾತ್ರ ಎಷ್ಟು ಎತ್ತರಕ್ಕೂ ಬೆಳೆಯಬಹುದು ಎಂದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಫ್ರೊಪೆಸರ್ ಪ್ರಮೋದ್ ಕುಮಾರ್ ವಹಿಸಿದ್ದರು. ಇದರು ಬಡತನದಿಂದ ಮೇಲೆ ಬಂದು ವ್ಯತ್ತಿಯಿಂದ ಶೇರು ಮಾರುಕಟ್ಟೆಯನ್ನು ಆಳಿದ ಹಲವಾರು ಶ್ರೀಮಂತರ ಸಾಹಸಗಾತೆಯನ್ನು ವಿವರಿಸಿ ವಿಧ್ಯಾರ್ಥಿಗಳಿಗೆ ಶುಭ ಹಾರೈಸಿದರು.


ಕಾರ್ಯಕ್ರಮದಲ್ಲಿ ವಿಭಾಗ ಮುಖ್ಯಸ್ಥೆ ಬೇಬಿ ಎನ್. ಸಂಯೋಜಕಿ ಸವಿತ ಉಪನ್ಯಾಸಕಿಯರಾದ ಪ್ರಭಾವತಿ, ಶೋಭ ಹಾಗೂ ಅಶ್ವಿನಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವಿಧ್ಯಾರ್ಥಿನಿ ಅನಿಕ ತಂಡ ಪ್ರಾರ್ಥಿಸಿ ಸಂಘದ ಅಧ್ಯಕ್ಷ ಧರ್ಮತೇಜ ಸ್ವಾಗತಿಸಿ ಕಾರ್ಯದರ್ಶಿ ಸಿರಿ ಧನ್ಯವಾದ ನೀಡಿದರು. ವಿದ್ಯಾರ್ಥಿನಿಯರಾದ ಹಂಸಿನಿ ಭಿಡೆ ಹಾಗೂ ಅಂಶುಲಾ ಕಾರ್ಯಕ್ರಮ ನಿರೂಪಿಸಿದರು.

Related posts

ವೇಣೂರು ನಡ್ತಿಕಲ್ಲು ನಿವಾಸಿ ಇಸ್ಮಾಯಿಲ್ ಮುಸ್ಲಿಯಾರ್ ನಿಧನ

Suddi Udaya

ಗುರುವಾಯನಕೆರೆ ಯೋಜನೆ ವತಿಯಿಂದ ಪುರಿಯ ಹಾಲಿನ ಡೈರಿ ಗೆ ರೂ. 2 ಲಕ್ಷ ಮೊತ್ತದ ಸಹಾಯಧನ ವಿತರಣೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕ – ಬಾಲಕಿಯರ ತಂಡ ವಾಲಿಬಾಲ್ ಪಂದ್ಯಾಟದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಎನ್ ಸಿಸಿ. ಎನ್‌ಎಸ್‌ಎಸ್. ರೇಂಜರ್ಸ್ ರೋವರ್ಸ್ ಮತ್ತು ರೆಡ್ ಕ್ರಾಸ್ ಘಟಕಗಳ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಗೇರುಕಟ್ಟೆ: ಕೃಷಿಕ ಪೆರಾಜೆ ಬಳ್ಳಿದಡ್ಡ ಕಾಂ ತಪ್ಪ ಗೌಡ ನಿಧನ

Suddi Udaya

ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿ ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆ ಶಿಕ್ಷಕ ಶಶಿಧರ ಡಿ. ಆಯ್ಕೆ

Suddi Udaya
error: Content is protected !!