July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಶ್ರೀ. ಧ. ಮಂ. ಪ. ಪೂ.ಕಾಲೇಜಿನಲ್ಲಿ ವಾಣಿಜ್ಯ ಸಂಘ ಉದ್ಘಾಟನೆ

ಉಜಿರೆ : ಶ್ರೀ. ಧ. ಮಂ.ಪ. ಪೂ. ಕಾಲೇಜಿನಲ್ಲಿ ವಾಣಿಜ್ಯ ಸಂಘ ಉದ್ಘಾಟನೆ ಹಾಗೂ ಲೆಕ್ಕ ಪರಿಶೋಧಕರ ದಿನಾಚರಣೆಯನ್ನು ಆಚರಿಸಲಾಯಿತು. ಮಂಗಳೂರು ಪಿರೇರಿಯನ್ ಸರ್ವಿಸಸ್ ನ ಮ್ಯಾನೇಜರ್ ಹಾಗೂ ಕಾಲೇಜಿನ ಹಿರಿಯ ವಿಧ್ಯಾರ್ಥಿನಿ ಸಿ. ಎ. ಸುಕನ್ಯಾ ಕಾಮತ್ ಉದ್ಘಾಟನೆ ನೆರವೇರಿಸಿ ವಿಧ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಸಂಘದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕೆಂದು ತಿಳಿಸಿದರು.

ಇವರು ಅಯ್ಕೆಯ ವಿಷಯದಲ್ಲಿ ಇತರ ವಿಧ್ಯಾರ್ಥಿಗಳ ಆಯ್ಕೆಯನ್ನು ಸ್ವೀಕರಿಸುವುದಕ್ಕಿಂತ ತಮಗೆ ಸಮಂಜಸವಾದ ಅಯ್ಕೆಯನ್ನು ಸ್ವೀಕರಿಸಬೇಕು. ವಿದ್ಯಾರ್ಥಿಗಳು ಕಾಲೇಜಿನಲ್ಲಿ ಸಿಗುವ ಎಲ್ಲಾ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಬೆಳೆಯಬೇಕು. ಇಂದು ವಾಣಿಜ್ಯ ವಿದ್ಯಾರ್ಥಿಗಳಿಗೆ ಹಲವಾರು ವ್ಯತ್ತಿ ಅವಕಾಶಗಳಿವೆ ಆದರೆ ಕೌಶಲ್ಯಕ್ಕೆ ಮಹತ್ವ ನೀಡಿದರೆ ಮಾತ್ರ ಎಷ್ಟು ಎತ್ತರಕ್ಕೂ ಬೆಳೆಯಬಹುದು ಎಂದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಫ್ರೊಪೆಸರ್ ಪ್ರಮೋದ್ ಕುಮಾರ್ ವಹಿಸಿದ್ದರು. ಇದರು ಬಡತನದಿಂದ ಮೇಲೆ ಬಂದು ವ್ಯತ್ತಿಯಿಂದ ಶೇರು ಮಾರುಕಟ್ಟೆಯನ್ನು ಆಳಿದ ಹಲವಾರು ಶ್ರೀಮಂತರ ಸಾಹಸಗಾತೆಯನ್ನು ವಿವರಿಸಿ ವಿಧ್ಯಾರ್ಥಿಗಳಿಗೆ ಶುಭ ಹಾರೈಸಿದರು.


ಕಾರ್ಯಕ್ರಮದಲ್ಲಿ ವಿಭಾಗ ಮುಖ್ಯಸ್ಥೆ ಬೇಬಿ ಎನ್. ಸಂಯೋಜಕಿ ಸವಿತ ಉಪನ್ಯಾಸಕಿಯರಾದ ಪ್ರಭಾವತಿ, ಶೋಭ ಹಾಗೂ ಅಶ್ವಿನಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವಿಧ್ಯಾರ್ಥಿನಿ ಅನಿಕ ತಂಡ ಪ್ರಾರ್ಥಿಸಿ ಸಂಘದ ಅಧ್ಯಕ್ಷ ಧರ್ಮತೇಜ ಸ್ವಾಗತಿಸಿ ಕಾರ್ಯದರ್ಶಿ ಸಿರಿ ಧನ್ಯವಾದ ನೀಡಿದರು. ವಿದ್ಯಾರ್ಥಿನಿಯರಾದ ಹಂಸಿನಿ ಭಿಡೆ ಹಾಗೂ ಅಂಶುಲಾ ಕಾರ್ಯಕ್ರಮ ನಿರೂಪಿಸಿದರು.

Related posts

ಗುರುವಾನಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಒಕ್ಕೂಟದಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ ಹಾಗೂ ಪದಗ್ರಹಣ

Suddi Udaya

ಲೋಕೋಪಯೋಗಿ ಇಲಾಖೆಯಿಂದ ಅಳವಡಿಸಿದ ನಾಮಫಲಕದಲ್ಲಿ ಯಡವಟ್ಟು: ಕೂಡಲೇ ಸರಿಪಡಿಸುವಂತೆ ಆಗ್ರಹ

Suddi Udaya

ಮುಂಡಾಜೆ: ತುಂಡಾಗಿ ಬಿದ್ದ ಎಚ್‌ ಟಿ ವಿದ್ಯುತ್ ತಂತಿ: ತಪ್ಪಿದ ಭಾರಿ ಅನಾಹುತ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ ಗೈಡ್ ಸಂಸ್ಥಾಪಕರ ದಿನ ಹಾಗೂ ದ್ವಜ ದಿನಾಚರಣೆ

Suddi Udaya

ಎಸ್.ಡಿ.ಎಮ್ ಪಾಲಿಟೆಕ್ನಿಕ್ : “ರೋಬೊ ರೇಸ್ -2025”

Suddi Udaya

ವಿದ್ಯಾರ್ಥಿಗಳು ನೈತಿಕ ಮೌಲ್ಯಗಳನ್ನು ಹೆಚ್ಚಿಸಿ ಕೊಳ್ಳಬೇಕು: ಡಾ ಪ್ರಸನ್ನ ಕುಮಾರ್ ಐತಾಳ್

Suddi Udaya
error: Content is protected !!