September 6, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಎಕ್ಸೆಲ್ ನಲ್ಲಿ ಎನ್ ಡಿ ಎ ತರಗತಿಗಳ ಓರಿಯಂಟೇಶನ್

ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜು ಗುರುವಾಯನಕೆರೆ ಇಲ್ಲಿನ ಎನ್ ಡಿ ಎ ತರಗತಿಗಳ ಓರಿಯಂಟೇಶನ್ ವಿದ್ಯಾ ಸಾಗರ ಕ್ಯಾಂಪಸ್ ನಲ್ಲಿ ನಡೆಯಿತು.
ಭಾರತೀಯ ಸೇನೆಯ ವಿಶ್ರಾಂತ ಮೇಜರ್ ಜನರಲ್ ಎಂ.ವಿ ಭಟ್ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡರು.

ಯಾವುದೇ ಸಾಧನೆ ಮಾಡಲು ಏಕಾಗ್ರತೆ ಬೇಕು. ಏಕಾಗ್ರತೆ ಹಾಗೂ ಇಚ್ಛಾ ಶಕ್ತಿ ಸಾಧಕನಾಗಿರಬೇಕಾದ ಎರಡು ಪ್ರಮುಖ ಅರ್ಹತೆಗಳು ಎಂದು ಭಾರತೀಯ ಸೇನೆಯ ವಿಶ್ರಾಂತ ಜನರಲ್ ಮೇಜರ್ ಎಂ.ವಿ ಭಟ್ ಹೇಳಿದರು.


ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ಮಾತನಾಡಿ, ದೇಶ ಸೇವೆ ಮಾಡುವ ಉನ್ನತ ಮಟ್ಟದ ಅವಕಾಶ, ಎನ್ ಡಿ ಎ ಕ್ಲಿಯರ್ ಮಾಡಿದ ವಿದ್ಯಾರ್ಥಿಗಳಿಗೆ ಲಭಿಸುತ್ತದೆ. ಹೀಗಾಗಿ ಎನ್ ಡಿ ಎ ಪರೀಕ್ಷೆಗಳನ್ನು ಗಂಭೀರವಾಗಿ ಸ್ವೀಕರಿಸಿ ಎಂದರು.

ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ ಮಾತನಾಡಿ, ದೇಶ ಸೇವೆಯೇ ಈಶ ಸೇವೆ ಎಂದು ತಿಳಿದು, ಬದುಕಲು ಎನ್ ಡಿ ಎ ತರಬೇತಿ ಅವಕಾಶ ಮಾಡಿಕೊಡುತ್ತದೆ ಎಂದು ಹೇಳಿದರು. ಎನ್ ಡಿ ಎ ಸಂಯೋಜಕ ಜೋಸ್ಟಮ್ ಎ ಟಿ ,ಎನ್. ಡಿ. ಎ ತರಬೇತಿಯ ಬಗ್ಗೆ ವಿವರವಾಗಿ ತಿಳಿಸಿದರು.
ವಿದ್ಯಾರ್ಥಿಗಳಾದ ವರ್ಷಾ ಎನ್ ಸ್ವಾಗತಿಸಿದರು. ರಕ್ಷಾ ವೆಂಕಟ್ ಮತ್ತು ರೀತು ಕೆ ನಿರೂಪಿಸಿದರು. ಸುಧನ್ವ ವಂದಿಸಿದರು.

Related posts

ಧರ್ಮಸ್ಥಳ ನೇರ್ತನೆಯಲ್ಲಿ ಕಾಡಾನೆ ದಾಳಿ :ಕೃಷಿಗೆ ಹಾನಿ   

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಹಣ್ಣಿನ ಗಿಡಗಳ ನಾಟಿ

Suddi Udaya

ವಿಧಾನಸಭೆ ಚುನಾವಣೆ ಹಿನ್ನೆಲೆ ವಿವಿಧ ಚೆಕ್ ಪೋಸ್ಟ್ ಗಳಿಗೆ ಮತ್ತು ನಕ್ಸಲ್ ಪೀಡಿತ ಪ್ರದೇಶಗಳಿಗೆಭೇಟಿ

Suddi Udaya

ಮರೋಡಿಯ ವಸಂತ ಕುಮಾರ್ ಹಾರೋದ್ದು ರವರಿಂದ ದೇಹ ದಾನಕ್ಕೆ ನೋಂದಣಿ

Suddi Udaya

ಕುತ್ಲೂರು ಪ್ರಕರಣ ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಉಜಿರೆ ಬೂತ್ ಸಂಖ್ಯೆ 98 ರ ಮತಗಟ್ಟೆಗೆ ಯುವ ನಾಯಕ ರಂಜನ್ ಜಿ ಗೌಡ ಹಾಗೂ ಅಭಿನಂದನ್ ಹರೀಶ್ ಕುಮಾರ್ ‍ಭೇಟಿ

Suddi Udaya
error: Content is protected !!