September 6, 2026
ಧಾರ್ಮಿಕ

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಮಹಾಸಭೆ

ಬೆಳ್ತಂಗಡಿ: ಅಂಗಸಂಸ್ಥೆಯ ಚಟುವಟಿಕೆಗಳಲ್ಲಿ ಕೂಟ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ವಿಶೇಷವಾಗಿ ಯುವಕರು ಕೂಟ ಮಹಾಜಗತ್ತಿನ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಗುರು ನರಸಿಂಹದೇವರ ಅನುಗ್ರಹದಿಂದ ಕೂಟ ಬಂಧುಗಳು ತಮ್ಮ ಜೀವನದಲ್ಲಿ ಹೆಚ್ಚಿನ ಯಶಸ್ಸುಗಳಿಸುವಂತಾಗಲಿ ಎಂದು ಶ್ರೀ ಗುರು ನರಸಿಂಹ ದೇವಸ್ಥಾನ ಸಾಲಿಗ್ರಾಮದ ಆಡಳಿತ ಮಂಡಳಿ ಸದಸ್ಯ ಸದಾಶಿವ ಐತಾಳ್ ಗುರು ಸಂದೇಶ ನೀಡಿದರು.

ಅವರು ಕೂಟ ಮಹಾಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಮಹಾಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಬೆಳ್ತಂಗಡಿ ಅಂಗ ಸಂಸ್ಥೆಯ ವಿಶ್ವನಾಥ ಹೊಳ್ಳ ಮಜ್ಜನಿಬೈಲು ಅಧ್ಯಕ್ಷತೆಯನ್ನು ವಹಿಸಿದ್ದರು.

ಅಂಗಸಂಸ್ಥೆಯ ಸ್ಥಾಪಕ ಅಧ್ಯಕ್ಷ ವೆಂಕಟರಾಯ ಅಡೂರು, ಅಂಗಸಂಸ್ಥೆಯ ನಿಕಟ ಪೂರ್ವ ಅಧ್ಯಕ್ಷ ಬಿ. ವಾಸುದೇವ ಸೋಮಯಾಜಿ ಹಾಗೂ ಮಹಿಳಾ ವೇದಿಕೆಯ ಅಧ್ಯಕ್ಷ ನಳಿನಿ ಎಸ್ ಹೊಳ್ಳ ಉಪಸ್ಥಿತರಿದ್ದರು.

ಕಾರ್ಯದರ್ಶಿ ವಿಷ್ಣು ಪ್ರಕಾಶ್ ಅಂಗಸಂಸ್ಥೆ ನಡೆಸಿದ ವಿವಿಧ ಚಟುವಟಿಕೆಗಳ ವರದಿಯನ್ನು ಮಂಡಿಸಿದರು. ಕೋಶಾಧಿಕಾರಿ ಪ್ರಕಾಶ್ ನಾರಾಯಣ ಲೆಕ್ಕಪತ್ರಗಳನ್ನು ಮಂಡಿಸಿ ಮುಂಗಡ ಪತ್ರಕ್ಕೆ ಸಭೆಯ ಒಪ್ಪಿಗೆ ಪಡೆದರು. ಬಿಲಿಯನ್ ಫೌಂಡೇಶನ್ ಪ್ರತಿನಿಧಿ ಅರವಿಂದ ಕಾರಂತ ಫೌಂಡೇಶನ್ ಚಟುವಟಿಕೆಗಳ ಕುರಿತು ವರದಿಯನ್ನು ಪ್ರಸ್ತುತಪಡಿಸಿದರು. ಮಹಿಳಾ ವೇದಿಕೆಯ ಕಾರ್ಯದರ್ಶಿ ಅಕ್ಷತಾ ಎಸ್ ಅಡೂರು ಮಹಿಳಾ ವೇದಿಕೆಯ ವಾರ್ಷಿಕ ವರದಿಯನ್ನು ಮಂಡಿಸಿದರು.

ವಿವಿಧ ಕ್ಷೇತ್ರಗಳಲ್ಲಿ ಶ್ರೇಷ್ಠ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಉಪಾಧ್ಯಕ್ಷ ರಮೇಶ್ ಹೊಳ್ಳ ಆರಂಬೊಡಿಯವರು ಸ್ವಾಗತಿಸಿದರು. ಕಾರ್ಯದರ್ಶಿ ಶ ವಿಷ್ಣು ಪ್ರಕಾಶ್ ಧನ್ಯವಾದ ನೀಡಿದರು. ಅನುರಾಧ ಕೆ. ರಾವ್ ನಿರೂಪಿಸಿದರು.

Related posts

ಶ್ರೀ ದೈವ ಕೊಡಮಣಿತ್ತಾಯ,ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ ಮತ್ತುಶ್ರೀ ಬ್ರಹ್ಮ ಬೈದರ್ಕಳ ಗರಡಿ ಪೊಸರಡ್ಕ- ಬ್ರಹ್ಮಕುಂಭಾಭಿಷೇಕ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಜಾತ್ರಾಮಹೋತ್ಸವದ ಸಮಾಲೋಚನಾ ಸಭೆ

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಜಾತ್ರಾಮಹೋತ್ಸವ: ಧಾರ್ಮಿಕ ಸಭೆ

Suddi Udaya

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟದಲ್ಲಿ ವರ್ಷಾವಧಿ ಜಾತ್ರೋತ್ಸವ

Suddi Udaya

ಮಡಂತ್ಯಾರು: ಶ್ರೀಕೃಷ್ಣ ಜನ್ನಾಷ್ಟಮಿ ಸಮಿತಿಯಿಂದ 35 ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಮದ್ದಡ್ಕ ಭಜನಾ ಮಂದಿರದಲ್ಲಿ ಶ್ರೀ ರಾಮನವಮಿ ಉತ್ಸವ: ಭಜನಾ ಕಾರ್ಯಕ್ರಮ

Suddi Udaya
error: Content is protected !!