23.7 C
ಪುತ್ತೂರು, ಬೆಳ್ತಂಗಡಿ
April 24, 2026
ಧಾರ್ಮಿಕ

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಮಹಾಸಭೆ

ಬೆಳ್ತಂಗಡಿ: ಅಂಗಸಂಸ್ಥೆಯ ಚಟುವಟಿಕೆಗಳಲ್ಲಿ ಕೂಟ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ವಿಶೇಷವಾಗಿ ಯುವಕರು ಕೂಟ ಮಹಾಜಗತ್ತಿನ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಗುರು ನರಸಿಂಹದೇವರ ಅನುಗ್ರಹದಿಂದ ಕೂಟ ಬಂಧುಗಳು ತಮ್ಮ ಜೀವನದಲ್ಲಿ ಹೆಚ್ಚಿನ ಯಶಸ್ಸುಗಳಿಸುವಂತಾಗಲಿ ಎಂದು ಶ್ರೀ ಗುರು ನರಸಿಂಹ ದೇವಸ್ಥಾನ ಸಾಲಿಗ್ರಾಮದ ಆಡಳಿತ ಮಂಡಳಿ ಸದಸ್ಯ ಸದಾಶಿವ ಐತಾಳ್ ಗುರು ಸಂದೇಶ ನೀಡಿದರು.

ಅವರು ಕೂಟ ಮಹಾಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಮಹಾಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಬೆಳ್ತಂಗಡಿ ಅಂಗ ಸಂಸ್ಥೆಯ ವಿಶ್ವನಾಥ ಹೊಳ್ಳ ಮಜ್ಜನಿಬೈಲು ಅಧ್ಯಕ್ಷತೆಯನ್ನು ವಹಿಸಿದ್ದರು.

ಅಂಗಸಂಸ್ಥೆಯ ಸ್ಥಾಪಕ ಅಧ್ಯಕ್ಷ ವೆಂಕಟರಾಯ ಅಡೂರು, ಅಂಗಸಂಸ್ಥೆಯ ನಿಕಟ ಪೂರ್ವ ಅಧ್ಯಕ್ಷ ಬಿ. ವಾಸುದೇವ ಸೋಮಯಾಜಿ ಹಾಗೂ ಮಹಿಳಾ ವೇದಿಕೆಯ ಅಧ್ಯಕ್ಷ ನಳಿನಿ ಎಸ್ ಹೊಳ್ಳ ಉಪಸ್ಥಿತರಿದ್ದರು.

ಕಾರ್ಯದರ್ಶಿ ವಿಷ್ಣು ಪ್ರಕಾಶ್ ಅಂಗಸಂಸ್ಥೆ ನಡೆಸಿದ ವಿವಿಧ ಚಟುವಟಿಕೆಗಳ ವರದಿಯನ್ನು ಮಂಡಿಸಿದರು. ಕೋಶಾಧಿಕಾರಿ ಪ್ರಕಾಶ್ ನಾರಾಯಣ ಲೆಕ್ಕಪತ್ರಗಳನ್ನು ಮಂಡಿಸಿ ಮುಂಗಡ ಪತ್ರಕ್ಕೆ ಸಭೆಯ ಒಪ್ಪಿಗೆ ಪಡೆದರು. ಬಿಲಿಯನ್ ಫೌಂಡೇಶನ್ ಪ್ರತಿನಿಧಿ ಅರವಿಂದ ಕಾರಂತ ಫೌಂಡೇಶನ್ ಚಟುವಟಿಕೆಗಳ ಕುರಿತು ವರದಿಯನ್ನು ಪ್ರಸ್ತುತಪಡಿಸಿದರು. ಮಹಿಳಾ ವೇದಿಕೆಯ ಕಾರ್ಯದರ್ಶಿ ಅಕ್ಷತಾ ಎಸ್ ಅಡೂರು ಮಹಿಳಾ ವೇದಿಕೆಯ ವಾರ್ಷಿಕ ವರದಿಯನ್ನು ಮಂಡಿಸಿದರು.

ವಿವಿಧ ಕ್ಷೇತ್ರಗಳಲ್ಲಿ ಶ್ರೇಷ್ಠ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಉಪಾಧ್ಯಕ್ಷ ರಮೇಶ್ ಹೊಳ್ಳ ಆರಂಬೊಡಿಯವರು ಸ್ವಾಗತಿಸಿದರು. ಕಾರ್ಯದರ್ಶಿ ಶ ವಿಷ್ಣು ಪ್ರಕಾಶ್ ಧನ್ಯವಾದ ನೀಡಿದರು. ಅನುರಾಧ ಕೆ. ರಾವ್ ನಿರೂಪಿಸಿದರು.

Related posts

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ: ಹೊರೆಕಾಣಿಕೆ ಸಮರ್ಪಣೆ, ತಂತ್ರಿಗಳ ಆಗಮನ, ಧ್ವಜಾರೋಹಣ

Suddi Udaya

ಶಿಶಿಲ ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದ ವಾರ್ಷಿಕ ಮಹೋತ್ಸವ

Suddi Udaya

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟದಲ್ಲಿ ವರ್ಷಾವಧಿ ಜಾತ್ರೋತ್ಸವ

Suddi Udaya

ಕಾರಿಂಜ ವನಶಾಸ್ತಾರ, ವೀರಭದ್ರ ಸ್ವಾಮಿ ದೇವಸ್ಥಾನದಲ್ಲಿ ಬ್ರಹ್ಮಕಲಶದ ಚಪ್ಪರ ಮೂಹೂರ್ತ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಯ್ಯೋಧ್ಯೆ ಶ್ರೀ ರಾಮಲಲ್ಲಾನ ಪ್ರತಿಷ್ಟೆ ನಾಳ ದೇವಸ್ಥಾನದಲ್ಲಿ ನೇರಪ್ರಸಾರ, ಭಜನೆ, ಕರಸೇವಕರಿಗೆ ಸನ್ಮಾನ

Suddi Udaya

ಕನ್ಯಾಡಿ: ಶ್ರೀ ರಾಮ ನಾಮ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವ-ಚಂದ್ರಮಂಡಲ ರಥೋತ್ಸವ

Suddi Udaya
error: Content is protected !!