23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣವಚನ ಸ್ವೀಕಾರ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಧರ್ಮಸ್ಥಳದಲ್ಲಿ 2025 -26 ನೇ ಸಾಲಿನ ವಿದ್ಯಾರ್ಥಿ ಸರಕಾರದ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಿತು.


ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಶ್ರೀಧ. ಮo ಅನುದಾನಿತ ಪ್ರೌಢಶಾಲೆ ಧರ್ಮಸ್ಥಳ ಇಲ್ಲಿಯ ಮುಖ್ಯೋಪಾಧ್ಯಾಯಿನಿಯಾದ ಶ್ರೀಮತಿ ಜಯಶ್ರೀ ಜೈನ್ ಭಾಗವಹಿಸಿ ವಿದ್ಯಾರ್ಥಿ ಸರಕಾರದಲ್ಲಿ ನಾಯಕನಾಗಿ ಚುನಾಯಿತನಾದ ವಿದ್ಯಾರ್ಥಿಯು ಶಾಲೆಯಲ್ಲಿ ಹಲವಾರು ರೀತಿಯ ಜವಾಬ್ದಾರಿಗಳನ್ನು ನಿರ್ವಹಿಸಿಕೊಂಡು ಮುಂದೊಂದು ದಿನ ದೇಶದ ಉತ್ತಮ ನಾಯಕನಾಗಿ ಹೊರಹೊಮ್ಮಲು ಸಾಧ್ಯವಿದೆ. ಉತ್ತಮ ರೀತಿಯಲ್ಲಿ ಶಾಲೆಯನ್ನು ಮುನ್ನಡೆಸಿಕೊಂಡು ಹೋಗಿ ಎಂದು ಶುಭ ಹಾರೈಸಿದರು.


ಶಾಲಾ ಮುಖ್ಯೋಪಾಧ್ಯಾರಾದ ಕಮಲ್ ತೇಜು ರಜಪೂತ್ ಆಯ್ಕೆಯಾದ ಮಂತ್ರಿಗಳಿಗೆ ಪ್ರಮಾಣವಚನವನ್ನು ಬೋಧಿಸಿದರು.
ಶಿಕ್ಷಕಿ ಸೀಮಾ ಎಸ್ ಎಂ ಮಂತ್ರಿಗಳ ಜವಾಬ್ದಾರಿಯನ್ನು ತಿಳಿಸಿದರು.


ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮಕ್ಕೆ ಶಿಕ್ಷಕ ಶೇಖರ್ ಸ್ವಾಗತಿಸಿ ಶಿಕ್ಷಕಿ ಪೂರ್ಣಿಮ ವಂದಿಸಿದರು. ಶ್ರೀಜಾ ಕಾರ್ಯಕ್ರಮ ನಿರ್ವಹಿಸಿದರು.

Related posts

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಜೂ. 23ರಂದು ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳ ಮುಂದೆ ಪ್ರತಿಭಟನೆ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಎಲ್.ಸಿ.ಆರ್ ವಿದ್ಯಾ ಸಂಸ್ಥೆಗೆ ಪ್ರಶಸ್ತಿ

Suddi Udaya

ಧರ್ಮಸ್ಥಳದಲ್ಲಿ ರಾಜ್ಯಾದ್ಯಂತ ಶುದ್ಧಗಂಗಾ ಘಟಕಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರೇರಕರಿಗೆ ಮಾರ್ಗದರ್ಶನ

Suddi Udaya

ಬಿಜೆಪಿ ದ.ಕ. ಜಿಲ್ಲೆ, ಬೆಳ್ತಂಗಡಿ ಮಂಡಲ ರೈತ ಮೋರ್ಚಾದ ವತಿಯಿಂದ ಪೆಟ್ರೋಲ್, ಡಿಸೇಲ್ ಮತ್ತು ಹಾಲಿನ ದರ ಏರಿಕೆ ಖಂಡಿಸಿ ಹಾಗೂ ಹಾಲಿನ ಪ್ರೋತ್ಸಾಹಧನ ಬಿಡುಗಡೆಗೊಳಿಸದಿರುವುದನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya

ವಾಣಿ ಶಿಕ್ಷಣ ಸಂಸ್ಥೆಗಳ ಬಸ್ ಚಾಲಕ ಶಶಿಧರ ಗೌಡ ಪಣಿಕ್ಕಲ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!