25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಬೃಹತ್ ಕಾರ್ಮಿಕ ಜಾಗೃತಿ ಆಂದೋಲನವನ್ನು ಆಯೋಜಿಸುವ ಕುರಿತು ಸಮಾಲೋಚನ ಸಭೆ

ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು ಬೃಹತ್ ಕಾರ್ಮಿಕ ಜಾಗೃತಿ ಆಂದೋಲನವನ್ನು ಆಯೋಜಿಸುವ ಕುರಿತು ಸಮಾಲೋಚನ ಸಭೆಯನ್ನು ಅಂಬೇಡ್ಕರ್ ಭವನ ಬೆಳ್ತಂಗಡಿಯಲ್ಲಿ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಎಂಎಸ್ ತಾಲೂಕು ಸಮಿತಿ ಅಧ್ಯಕ್ಷ ವಕೀಲರಾದ ಉದಯ್ ಬಿ.ಕೆ ಅವರು ವಹಿಸಿದ್ದರು.

ಬಿಎಂಎಸ್ ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲಿಯಾನ್ ಮಾತನಾಡಿ ಜಿಲ್ಲಾಡಳಿತ ಮತ್ತು ನೂತನವಾಗಿ ಬಂದಿರುವಂತಹ ಪೊಲೀಸ್ ವರಿಷ್ಠಾಧಿಕಾರಿಗಳು ತೆಗೆದುಕೊಳ್ಳುತ್ತಿರುವ ತೀರ್ಮಾನಗಳಿಂದ ಕೆಂಪು ಕಲ್ಲು ಮರಳು ಪೂರೈಕೆಯಲ್ಲಿ ತೊಂದರೆ ಉಂಟಾಗಿದೆ ಇದರಿಂದಾಗಿ ಕಾರ್ಮಿಕರು ಕೆಲಸ ಇಲ್ಲದೆ ಬಳಲುವಂತಾಗಿದೆ ಈ ದೃಷ್ಟಿಯಲ್ಲಿ ಈ ಸಮಸ್ಯೆಯನ್ನು ಶೀಘ್ರದಲ್ಲಿ ಪರಿಹರಿಸುವಂತೆ ತಹಶೀಲ್ದಾರರು ಪೊಲೀಸ್ ನಿರೀಕ್ಷಕರಿಗೆ ಮನವಿ ಮಾಡುವುದು. ಈ ಮನವಿಗೆ ಒಂದು ವಾರದ ಒಳಗೆ ಸ್ಪಂದಿಸದಿದ್ದರೆ ಬೃಹತ್ ಜನೊಂದೋಲನ ಸಭೆಯನ್ನು ನಡೆಸುವುದು ಎಂದು ಹೇಳಿದರು.

ಬಿಎಮ್ ಎಸ್ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಅವರು ಮಾತನಾಡಿ ಕಾರ್ಮಿಕರ ಪರವಾಗಿ ಸದಾ ನಾವು ಧ್ವನಿ ಎತ್ತಲಿದ್ದೇವೆ ಇದೀಗ ಕಾರ್ಮಿಕರಿಗೆ ಕಟ್ಟಡ ನಿರ್ಮಾಣದ ಸಾಮಗ್ರಿಗಳು ದೊರಕದೆ ಕಾರ್ಮಿಕರು ಕೆಲಸ ಇಲ್ಲದೆ ಬಳಲುವಂತಾಗಿದೆ ಈ ಸಮಸ್ಯೆಯನ್ನು ಶೀಘ್ರವಾಗಿ ಜಿಲ್ಲಾಡಳಿತವನ್ನು ಪರಿಹರಿಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕುಮಾರ್ ನಾಥ್ ಶೆಟ್ಟಿ ಮತ್ತು ಪ್ರಮುಖರಾದ ಉದಯ್ ಕುಮಾರ್ ಉಜಿರೆ ಗಣೇಶ್ ಪೂಜಾರಿ ಪೆರಾಡಿ ಹಾಗೂ ಇತರ ಪ್ರಮುಖರು ಉಪಸ್ಥಿತರಿದ್ದರು. ಕುಮಾರ್ ‌ನಾಧ್ ಸ್ವಾಗತಿಸಿ ಗಣೇಶ್ ಪೂಜಾರಿ ವಂದಿಸಿದರು.

Related posts

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ: ರೂ. 2. 43 ಲಕ್ಷ ನಿವ್ವಳ ಲಾಭ.

Suddi Udaya

ಬೆಳ್ತಂಗಡಿಯಲ್ಲಿ ಪೇಪರ್ ಲೇಸ್ ರಿಜಿಸ್ಟ್ರೇಷನ್ ತರಬೇತಿ

Suddi Udaya

ಮಚ್ಚಿನ ಬೂತ್ ಸಂಖ್ಯೆ 181, 182, 183ರ ಮತಗಟ್ಟೆಗೆ ಆರ್‌ಎಸ್‌ಎಸ್ ಮುಖಂಡ ಪ್ರಭಾಕರ್ ಭಟ್ ಕಲ್ಲಡ್ಕ ಭೇಟಿ

Suddi Udaya

ಮಡಂತ್ಯಾರು ಗ್ರಾ.ಪಂ. ಗೆ ಪಂಚಾಯತ್ ರಾಜ್ ಆಯುಕ್ತೆ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಭೇಟಿ

Suddi Udaya

ಬೆಳ್ತಂಗಡಿ: ತೋಟಗಾರಿಕೆ ಇಲಾಖೆಯಲ್ಲಿ ಮೆಗಾ ಡ್ರೈವ್ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಆಶ್ರಯದಲ್ಲಿ ಇಕೋಫ್ರೆಶ್ ಎಂಟರ್‌ ಪ್ರೈಸಸ್ ಬೆಳ್ತಂಗಡಿ-ಪುತ್ತೂರು ಇದರ ಸಹಯೋಗದೊಂದಿಗೆ ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಹಾಗೂ ಮಾರಾಟ ಮೇಳ ಉದ್ಘಾಟನೆ

Suddi Udaya
error: Content is protected !!